ಶಾಸಕರ ವಿದೇಶ ಪ್ರವಾಸಕ್ಕೆ ಸರ್ಕಾರದ ಬ್ರೇಕ್
ಬೆಂಗಳೂರು, ಮೇ 4 : ಬರ ಪರಿಸ್ಥಿತಿ ನಡುವೆಯೇ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪ್ರವಾಸ ಹೊರಟಿದ್ದ ಶಾಸಕರಿಗೆ ನಿರಾಸೆಯಾಗಿದೆ. ರಾಜ್ಯ ವಿಧಾನಮಂಡಲದ ಯಾವ ಸಮಿತಿಯೂ ಸದ್ಯಕ್ಕೆ ವಿದೇಶ ಪ್ರವಾಸ ಕೈಗೊಳ್ಳಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ.
ವಿಧಾನಸಭೆಯ ಭವರಸೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ಅಧ್ಯಕ್ಷತೆಯಲ್ಲಿ ಸುಮಾರು 15 ಶಾಸಕರು ಪ್ರವಾಸ ಕೈಗೊಳ್ಳಲು ಸಿದ್ಧರಾಗಿದ್ದರು. ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ರಾಯಭಾಗ ಶಾಸಕ ದುರ್ಯೋಧನ ಐಹೊಳೆ ಮುಂತಾದ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುವ ಸಿದ್ಧತೆಯಲ್ಲಿದ್ದರು.

ಆದರೆ, ಕಳೆದ ಕೆಲವು ತಿಂಗಳ ಹಿಂದೆ ಶಾಸಕರು ವಿದೇಶ ಪ್ರವಾಸಕ್ಕೆ ಹೊರಡಲು ಸಜ್ಜಾದಾಗ ಭಾರೀ ವಿರೋಧ ಉಂಟಾಗಿತ್ತು. ಆದ್ದರಿಂದ ಈ ಅಧ್ಯಯನ ಪ್ರವಾಸದ ಸಾಧಕ, ಬಾಧಕದ ಕುರಿತು ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಚಿಸಲಾಗಿತ್ತು. [ಮತ್ತೆ ವಿದೇಶಕ್ಕೆ ಹೊರಟ ಶಾಸಕರು]
ಶಾಸಕರ ವಿದೇಶ ಪ್ರವಾಸದ ಮಾನದಂಡ ಪರಿಷ್ಕರಿಸುವ ಹೊಣೆಯನ್ನು ಈ ಸಮಿತಿಗೆ ನೀಡಲಾಗಿತ್ತು. ಅಂದಿನಿಂದ ಸಮಿತಿ ತನ್ನ ವರದಿ ತಯಾರಿಕೆಯಲ್ಲಿ ತೊಡಗಿದೆ. ಈ ಸಮಿತಿ ಸರ್ಕಾರಕ್ಕೆ ವರದಿ ನೀಡಿ, ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುವ ತನಕ ಯಾವುದೇ ಸಮಿತಿ ವಿದೇಶ ಪ್ರವಾಸ ಕೈಗೊಳ್ಳಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಸಮಿತಿಯಲ್ಲಿ ಯಾರಿದ್ದಾರೆ ? : ಶಾಸಕರ ವಿದೇಶ ಪ್ರವಾಸದ ಕುರಿತು ವರದಿ ತಯಾರಿಸುತ್ತಿರುವ ಸಮಿತಿಯ ನೇತೃತ್ವವನ್ನು ವಿಧಾನಸಭೆ ಕಾರ್ಯದರ್ಶಿ ಪಿ. ಓಂಪ್ರಕಾಶ್, ವಿಧಾನ ಪರಿಷತ್ ಕಾರ್ಯದರ್ಶಿ ಶ್ರೀಶ್ ವಹಿಸಿಕೊಂಡಿದ್ದಾರೆ. ಕೆಲವು ದಿನಗಳಲ್ಲೇ ಸಮತಿ ತನ್ನ ವರದಿಯನ್ನು ಸಲ್ಲಿಸುವ ಸಾಧ್ಯತೆ ಇದೆ.
-
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?












Click it and Unblock the Notifications