ಮತ್ತೆ ವಿದೇಶಕ್ಕೆ ಹೊರಟು ನಿಂತ್ರು ನಮ್ಮ ಶಾಸಕರು
ಬೆಂಗಳೂರು, ಏ.30: ಕರ್ನಾಟಕದ ಶಾಸಕರ ಮತ್ತೊಂದು ತಂಡ ಅಧ್ಯಯನಕ್ಕಾಗಿ ವಿದೇಶ ಪ್ರವಾಸ ಕೈಗೊಳ್ಳಲು ಸಜ್ಜಾಗಿ ನಿಂತಿದೆ. ಸುಮಾರು 15 ಶಾಸಕರ ತಂಡ ವಿದೇಶ ಪ್ರವಾಸಕ್ಕೆ ಹೊರಟಿದ್ದು, ಇಬ್ಬರು ಶಾಸಕರು ಮಾತ್ರ ತಾವು ವಿದೇಶ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಕೆಲವು ತಿಂಗಳ ಹಿಂದೆ ಶಾಸಕರ ವಿದೇಶದ ಬಗ್ಗೆ ಕರ್ನಾಟಕದಲ್ಲಿ ಬಿಸಿ-ಬಿಸಿ ಚರ್ಚೆಯಾಗುತ್ತಿತ್ತು. ಬರ ಪರಿಸ್ಥಿತಿ ಇರುವಾಗ ಶಾಸಕರು ವಿದೇಶ ಪ್ರವಾಸ ಕೈಗೊಳ್ಳಬಾರದು ಎಂಬ ಆಗ್ರಹ ಕೇಳಿಬಂದಿತ್ತು. ಸದ್ಯ ಮತ್ತೊಮ್ಮೆ ಶಾಸಕರು ವಿದೇಶಕ್ಕೆ ಹೊರಟು ನಿಂತಿದ್ದು, ಹೊ ವಿವಾದ ಹುಟ್ಟುಹಾಕುವ ಸಾಧ್ಯತೆ ಇದೆ. [ಶಾಸಕರ ವಿದೇಶ ಪ್ರವಾಸದ ಬಗ್ಗೆ ಗೌರ್ನರ್ ಗರಂ]

ವಿಧಾನಸಭೆಯ ಭವರಸೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ಅಧ್ಯಕ್ಷತೆಯಲ್ಲಿ ಸುಮಾರು 15 ಶಾಸಕರು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲು ಸಿದ್ಧರಾಗಿದ್ದಾರೆ. ಆದರೆ, ಈ ಸಮಿತಿಯಲ್ಲಿರುವ ಶಾಸಕರಾದ ವೈ.ಎಸ್.ವಿ.ದತ್ತಾ ಮತ್ತು ಕೆ.ಎಸ್.ಪುಟ್ಟಣ್ಣಯ್ಯ ತಾವು ವಿದೇಶ ಪ್ರವಾಸ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಯಾವ ಶಾಸಕರು ಹೋಗುತ್ತಾರೆ : ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ನೇತೃತ್ವದಲ್ಲಿ ವಿದೇಶ ಪ್ರವಾಸಕ್ಕೆ ಸುಮಾರು 15 ಶಾಸಕರು ತೆರಳಲು ಸಜ್ಜಾಗಿದ್ದಾರೆ. ಆದರೆ, ಕಡೂರು ಶಾಸಕ ವೈ.ಎಸ್.ವಿ.ದತ್ತಾ ಮತ್ತು ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ತಾವು ವಿದೇಶ ಪ್ರವಾಸ ಹೊಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಉಳಿದಂತೆ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ರಾಯಭಾಗ ಶಾಸಕ ದುರ್ಯೋಧನ ಐಹೊಳೆ, ಸಿದ್ದು ಬಿ.ನ್ಯಾಮಗೌಡ, ವಿಜಯಾನಂದ ಕಾಶೆಪ್ಪನವರ್, ಆನಂದ್ ಸಿ.ಮಾಮನಿ, ಹಿರೇಕೆರುರು ಶಾಸಕ ಯುಬಿ ಬಣಕಾರ್, ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ಮಲ್ಲಿಕಾರ್ಜುನ ಖೂಬಾ ಮುಂತಾದವರು ತೆರಳಿದ್ದಾರೆ.
ಕೆಲವು ತಿಂಗಳ ಹಿಂದೆ ಶಾಸಕರು ವಿದೇಶ ಪ್ರವಾಸ ಹೋದಾಗ ರಾಜ್ಯದಲ್ಲಿ ಬರಪರಿಸ್ಥಿತಿ ಇತ್ತು. ಆದ್ದರಿಂದ ಭಾರೀ ವಿರೋಧ ಕೇಳಿಬಂದಿತ್ತು. ಸದ್ಯ ಸಹ ಬರ ಪರಿಸ್ಥಿತಿ ಇದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆದರೆ, ಶಾಸಕರು ಮಾತ್ರ ವಿದೇಶದ ವಿಮಾನವೇರಲು ಸಜ್ಜಾಗಿ ನಿಂತಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications