Get Updates
Get notified of breaking news, exclusive insights, and must-see stories!

ಎಂಎಲ್‌ಸಿ ಉಪಚುನಾವಣೆ: ಕಾಂಗ್ರೆಸ್‌ನಿಂದ ಬೋಸರಾಜು, ಶೆಟ್ಟರ್, ಚಿಂಚನಸೂರು ಕಣಕ್ಕೆ?

ಬೆಂಗಳೂರು, ಜೂನ್‌ 19: ಜೂನ್ 30 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ಎಸ್ ಬೋಸರಾಜು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಸೇರಿದಂತೆ ಇತರರ ಹೆಸರುಗಳು ಕಾಂಗ್ರೆಸ್‌ನ ಪಟ್ಟಿಯಲ್ಲಿವೆ ಎನ್ನಲಾಗಿದೆ.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಾಬುರಾವ್‌ ಚಿಂಚನಸೂರ್, ಲಕ್ಷ್ಮಣ ಸವದಿ ಮತ್ತು ಆರ್ ಶಂಕರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪಚುನಾವಣೆ ಈಗ ನಡೆಯಲಿದೆ. ಚಿಂಚನಸೂರ್ ಮತ್ತು ಸವದಿ ಕಾಂಗ್ರೆಸ್ ಸೇರಿದರೆ, ಆರ್ ಶಂಕರ್ ಎನ್ ಸಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಮಾತ್ರ ಗೆಲ್ಲಲು ಸಾಧ್ಯವಾಯಿತು.

 MLC by-election

ಭಾರತೀಯ ಚುನಾವಣಾ ಆಯೋಗದ ಅಧಿಸೂಚನೆಯ ಪ್ರಕಾರ, ಜೂನ್ 20 (ಮಂಗಳವಾರ) ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 23 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಜೂನ್ 30 ರಂದು ಮತದಾನ ಮತ್ತು ಮತ ಎಣಿಕೆ ನಡೆಯಲಿದೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೋಮವಾರ ಸಂಜೆ ವೇಳೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಬೋಸರಾಜು ಮತ್ತು ಚಿಂಚನಸೂರ್ ಅವರನ್ನು ಪಕ್ಷ ಅಂತಿಮಗೊಳಿಸುವುದು ಬಹುತೇಕ ಖಚಿತವಾಗಿದ್ದು, ಶೆಟ್ಟರ್ ಮತ್ತು ಕಾಂಗ್ರೆಸ್ ಹಿರಿಯ ಎಸ್‌ಆರ್ ಪಾಟೀಲ್ ನಡುವೆ ತೀವ್ರ ಲಾಬಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

 MLC by-election

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಶೆಟ್ಟರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಯೋಜಿಸಿದೆ. ಆದರೆ ಶೆಟ್ಟರ್ ಮೇಲ್ಮನೆ ಪ್ರವೇಶಿಸಲು ಮನಸ್ಸು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ವಿಧಾನ ಪರಿಷತ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ನಾಯಕ ಹೇಳಿದರು.

"ಪಕ್ಷದ ಹಿರಿಯ ನಾಯಕ ಎಸ್‌ಆರ್ ಪಾಟೀಲ್ ಕೂಡ ಎಂಎಲ್‌ಸಿ ಸ್ಥಾನವನ್ನು ಪಡೆಯಲು ತೀವ್ರ ಲಾಬಿ ನಡೆಸುತ್ತಿದ್ದಾರೆ. ಆದರೆ ಸದ್ಯಕ್ಕೆ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಶೆಟ್ಟರ್ ಪರವಾಗಿ ಅಭಿಪ್ರಾಯಗಳು ವಾಲುತ್ತಿವೆ. ಅವರು ಚುನಾವಣೆಯಲ್ಲಿ ಸೋತರೂ, ಪ್ರಮುಖ ಸ್ಥಾನವನ್ನು ನೀಡುವುದು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷಕ್ಕೆ ಸಹಾಯ ಮಾಡುತ್ತದೆ ಎಂದು ಪಕ್ಷದ ನಾಯಕರ ಒಂದು ಗುಂಪು ಹೇಳುತ್ತದೆ ಎಂದು ಮೂಲಗಳು ಹೇಳಿವೆ.

ಎರಡೂ ಸದನಗಳ ಸದಸ್ಯರಲ್ಲದಿದ್ದರೂ ಬೋಸರಾಜು ಸಚಿವರಾಗಿದ್ದು, ಸ್ಪರ್ಧೆ ಮಾಡುವುದು ನಿಶ್ಚಿತ. ಇದರ ಹೊರತಾಗಿ ಜುಲೈ 3 ರಂದು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಪಕ್ಷವು ವಿಧಾನ ಪರಿಷತ್ತಿನಲ್ಲಿ ಸದನದ ನಾಯಕರನ್ನು ನೇಮಿಸಬೇಕಾಗಿದೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರೆಂದೇ ಪರಿಗಣಿಸಲ್ಪಟ್ಟಿರುವ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ್ ಕೂಡ ಕಣದಲ್ಲಿ ಮುಂಚೂಣಿಯಲ್ಲಿದ್ದಾರೆ.

ಮಾಜಿ ಸಚಿವೆ ಉಮಾಶ್ರೀ, ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ, ಶಿಕ್ಷಣ ತಜ್ಞ ಮನ್ಸೂರ್ ಅಲಿಖಾನ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರ ಹೆಸರುಗಳೂ ಹರಿದಾಡುತ್ತಿವೆ. ಆದರೆ, ಸಿದ್ದರಾಮಯ್ಯ ತಮ್ಮ ಮಗನನ್ನು ಮೇಲ್ಮನೆ ಚುನಾವಣೆಗೆ ನಾಮನಿರ್ದೇಶನ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+