ಸಿಎಂ ಹುದ್ದೆಯಲ್ಲಿ ಇದ್ದಾಗಲೇ ಚೀಲ ತುಂಬಿಸಿಕೊಳ್ಳಲು ಭ್ರಷ್ಟಾಚಾರ, ವಜಾಕ್ಕೆ ಸಿ ಟಿ ರವಿ ಆಗ್ರಹ
ಬೆಂಗಳೂರು: ಅಬಕಾರಿ ಸಚಿವರನ್ನು ವಜಾ ಮಾಡದೇ ಇಟ್ಟುಕೊಂಡಿದ್ದನ್ನು ನೋಡಿದಾಗ ಮುಖ್ಯಮಂತ್ರಿಗಳ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರೂ ಭ್ರಷ್ಟಾಚಾರ ನಡೆಸುತ್ತಿರುವುದು ಸ್ಪಷ್ಟವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.
ಅಬಕಾರಿ ಇಲಾಖೆ ಭ್ರಷ್ಟಾಚಾರ ಒಂದು ವರ್ಷದ ಹಿಂದೆಯೇ ಜಗಜ್ಜಾಹೀರಾಗಿತ್ತು. ಆ ಸಂದರ್ಭದಲ್ಲಿ ತೇಪೆ ಹಾಕುವ ಕೆಲಸ ಮಾಡಿದ್ದರು. ಅವತ್ತೇ ಮಂತ್ರಿಯನ್ನು ವಜಾ ಮಾಡಬೇಕಿತ್ತು ಎಂದು ತಿಳಿಸಿದರು. ಈ ಸರಕಾರವೇ ಭ್ರಷ್ಟಾಚಾರದಲ್ಲಿ ತೊಡಗಿದೆ. ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಟೀಕಿಸಿದರು. ಯಾರು ಈ ಸರಕಾರವನ್ನು ಬೆಂಬಲಿಸಿದರೋ ಅವರೇ ಇವತ್ತು ಈ ಸರಕಾರ ಅತ್ಯಂತ ಭ್ರಷ್ಟ ಸರಕಾರ ಎಂದು ಮಾತನಾಡುತ್ತಿದ್ದಾರೆ. ಅಂಥ ವಾತಾವರಣ ನಿರ್ಮಾಣವಾಗಿದೆ. ಗುತ್ತಿಗೆದಾರರೇ ಶೇ 60 ಕಮಿಷನ್ ಆರೋಪ ಮಾಡಿದ್ದಾರೆ ಎಂದು ತಿಳಿಸಿದರು.

ಸರಕಾರವು ಭ್ರಷ್ಟಾಚಾರದ ಚರಮಸೀಮೆಗೆ ತಲುಪಿದೆ. ಮುಖ್ಯಮಂತ್ರಿಗಳು ಕೂಡ ಇನ್ನೆಷ್ಟು ದಿನ ಇರುತ್ತೀನೋ, ನಾಳೆ ಮತ್ತೆ ಈ ಅವಕಾಶ ಸಿಗಲ್ಲ, ಇದ್ದಾಗ ಎಷ್ಟು ಚೀಲ ತುಂಬಿಸಿಕೊಳ್ಳಲು ಸಾಧ್ಯವೋ ಅಷ್ಟು ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ ಎಂದು ಸಿ.ಟಿ. ರವಿ ಅವರು ಆಕ್ಷೇಪಿಸಿದರು. ಭ್ರಷ್ಟಾಚಾರದ ವಿಷಯದ ಬಗ್ಗೆ ಈ ಸರಕಾರದಲ್ಲಿ ಭ್ರಷ್ಟಾಚಾರಿಗಳಿಗೇ ಪ್ರೋತ್ಸಾಹ ಕೊಡುವ ವ್ಯವಸ್ಥೆ ನಿರ್ಮಾಣವಾಗಿದೆ ಎಂದು ತಿಳಿಸಿದರು.
ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಇವರು ಹೇಳುವಂತೆ ವಿರೋಧಿಸುವ ಅಂಶಗಳಿಲ್ಲ. ಕಾಂಗ್ರೆಸ್ಸಿನವರು ಬಾಯಿ ಬಡ್ಕೊಳ್ಳುವುದನ್ನು ನೋಡಿದರೆ, ಏನೋ ಇರಬಹುದೇನೋ ಎಂದು ಅಧ್ಯಯನ ಮಾಡಿದ್ದೇನೆ. ಮುಂಚೆ 100 ದಿನ ಇತ್ತು. ಈಗ 125 ದಿನ ಕೊಟ್ಟಿದ್ದಾರೆ. ಯಾರಿಗೆ ಅನ್ಯಾಯ ಆಗಲಿದೆ ಎಂದು ಕೇಳಿದರು. 25 ದಿನ ಜಾಸ್ತಿ ಸಿಕ್ಕಿದ್ದರಿಂದ ಯಾರಿಗೆ ಅನ್ಯಾಯ ಆಗಲಿದೆ ಎಂದು ಪ್ರಶ್ನಿಸಿದರು.
ಮುಂಚೆ ಆಸ್ತಿ ನಿರ್ಮಾಣಕ್ಕೆ ಒತ್ತು ಕೊಡುತ್ತಿರಲಿಲ್ಲ, ಈಗ ಆಸ್ತಿ ನಿರ್ಮಾಣಕ್ಕೆ ಒತ್ತು ಕೊಡುತ್ತಿದ್ದಾರೆ. ಇದು ಅಪರಾಧವೇ? ಎಂದರು. ಮೊದಲು ಜೀವನೋಪಾಯಕ್ಕಾಗಿ ಕೂಲಿ, ಈಗ ಕೌಶಲ್ಯಾಭಿವೃದ್ಧಿ ಮಾಡಿ ಅವರು ಸ್ವಾವಲಂಬಿ ಆಗಲು ಯೋಜನೆಯಲ್ಲಿ ಅಳವಡಿಸಿದ್ದಾರೆ. ಇದರಿಂದ ಒಳ್ಳೆಯದೇ ಕೆಟ್ಟದ್ದೇ ಎಂದು ಪ್ರಶ್ನೆ ಹಾಕಿದರು. ಅವರು ಹೇಳಲಿ. ಚರ್ಚೆಗೆ ಹೆದರುವ ಪ್ರಶ್ನೆಯೇ ಇಲ್ಲ. ಮಹಾತ್ಮ ಗಾಂಧಿ ಹೆಸರನ್ನು ಬದಲಿಸಿದರು ಎನ್ನುತ್ತಿದ್ದಾರೆ. ಮಹಾತ್ಮ ಗಾಂಧಿಗೇ ಪ್ರೇರಣೆ ಕೊಟ್ಟಿದ್ದು ರಾಮ. ರಾಮನ ಬಗ್ಗೆ ಯಾಕೆ ಇವರಿಗೆ ದ್ವೇಷ ಎಂದು ಕೇಳಿದರು. ಮಹಾತ್ಮ ಗಾಂಧಿ ದಿನಬೆಳಗಾದರೆ ಹೇಳುತ್ತಿದ್ದುದು ರಾಮರಾಜ್ಯದ ಕಲ್ಪನೆಯನ್ನು ಎಂದು ತಿಳಿಸಿದರು. ರಾಮನ ಗುಣಗಾನದ ಬಗ್ಗೆ ಈ ಸರಕಾರಕ್ಕೆ ಇಷ್ಟೊಂದು ಅಸಹಿಷ್ಣುತೆ ಯಾಕೆ ಎಂದು ಪ್ರಶ್ನಿಸಿದರು.
ವಿಬಿ ಜಿ ರಾಮ್ ಜಿ ಬಡವರಿಗೆ ಬಲ ಕೊಡುವ ಯೋಜನೆ. ಭ್ರಷ್ಟಾಚಾರಿಗಳಿಗೆ ಬಲ ಕೊಡುವ ಯೋಜನೆ ಅಲ್ಲ ಎಂದ ಅವರು, ಹಿಂದೆ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡುತ್ತಿದ್ದರು. ನಿಮಗೂ ಸ್ವಲ್ಪ ಜವಾಬ್ದಾರಿ ಇರಲೆಂದು ಶೇ 40 ನೀವೂ ಕೊಡಬೇಕೆಂದು ಮಾಡಿದ್ದಾರೆ. ಕೇಂದ್ರದ ದುಡ್ಡೆಂದು ಇಲ್ಲಿ ಲೂಟಿ ಹೊಡೆಯಲು ಲೈಸನ್ಸ್ ನೀಡಿದ್ದರಲ್ಲವೇ? ಎಂದು ಕೇಳಿದರು.
ಪುನೀತ್ ಕೆರೆಹಳ್ಳಿಯವರನ್ನು ಬಂಧಿಸಿದ್ದು ಆಶ್ಚರ್ಯ ಮತ್ತು ಆಘಾತ ತಂದಿದೆ. ದೇಶಭಕ್ತಿಯ ಕೆಲಸ ಮಾಡಿದ ಪುನೀತ್ ಕೆರೆಹಳ್ಳಿಯವರಿಗೆ ಗಣರಾಜ್ಯೋತ್ಸವದಂದು ಸನ್ಮಾನ ಮಾಡಬೇಕಿತ್ತು. ಅಕ್ರಮ ಬಾಂಗ್ಲಾ ನುಸುಳುಕೋರರ ಜಾಲ, ಅವರು ಇಲ್ಲಿ ಬಿಪಿಎಲ್, ಆಧಾರ್ ಕಾರ್ಡ್ ಪಡೆದುದು, ಮತದಾರರ ಪಟ್ಟಿಯಲ್ಲಿ ಸೇರುವುದು, ಬ್ಯಾಂಕ್ ಸಾಲ ಪಡೆಯುವುದು- ಇದು ಆಂತರಿಕ ಸುರಕ್ಷತೆಗೆ ಅಪಾಯಕಾರಿ. ಇಂಥ ಸಂಗತಿ ಪತ್ತೆ ಹಚ್ಚಿದ್ದಕ್ಕಾಗಿ ಅವರನ್ನು ಗೌರವಿಸುವ ಬದಲು ಅವರನ್ನು ಬಂಧಿಸಿದ್ದೀರಿ. ಇದು ಕರ್ನಾಟಕದ ಜನರ ಸರಕಾರವೇ ಅಥವಾ ಬಾಂಗ್ಲಾ ದೇಶೀಯರ ಸರಕಾರವೇ ಎಂದು ಪ್ರಶ್ನಿಸಿದರು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications