ಸತ್ಯಹರಿಶ್ಚಂದ್ರ ಸತ್ತ ಮೇಲೆ ಇಬ್ಬರು ಮಾಜಿ ಸಿಎಂ ಗಳು ಸತ್ಯಹರಿಶ್ಚಂದ್ರರು: ಹೆಚ್.ವಿಶ್ವನಾಥ್ ವ್ಯಂಗ್ಯ
ಮೈಸೂರು, ಆಗಸ್ಟ್ 05: ಸತ್ಯಹರಿಶ್ಚಂದ್ರ ಸತ್ತ ಮೇಲೆ ಇಬ್ಬರೇ ಸತ್ಯಹರಿಶ್ಚಂದ್ರರು ಇರುವುದು. ಒಬ್ಬರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಇನ್ನೊಬ್ಬರು ಬಸವರಾಜ ಬೊಮ್ಮಾಯಿ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೆಚ್ ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿ ಆಗಿದ್ದವರು. ನೀವು ಆಗ ಮಾಡಿದ ಅದ್ವಾನಗಳನ್ನ ಜನ ಈಗಲೂ ಅನುಭವಿಸ್ತಿದ್ದಾರೆ. ಕುಮಾರಸ್ವಾಮಿ ಅವರೇ ಆ ಪೆನ್ ಡ್ರೈವ್ ಏನಾಯ್ತು..? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಅವರೇ ಏನೇನೋ ಆರೋಪ ಮಾಡ್ತೀರಿ. ಬಾಯಿಗೆ ಬಂದಂತೆ ಮಾತ್ನಾಡಬೇಡಿ, ಆದರೆ, ಮಾಡಿದ ಆರೋಪಗಳಲ್ಲಿ ಯಾವುದನ್ನ ಸಾಬೀತು ಮಾಡಿದ್ದೀರಿ..? ಎಂದು ಪ್ರಶ್ನಿಸಿದ ಅವರು, ನೀವು ಮುಖ್ಯಮಂತ್ರಿ ಆಗಿದ್ದವರು, ಮಾತಿನಿಂದ ನಿಮ್ಮ ಘನತೆ ಕಡಿಮೆ ಆಗುತ್ತಿದೆ ಎಂದು ಕುಮಾರಸ್ವಾಮಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳಿಗೆ SCSP-TSP ಹಣ ಬಳಕೆ ವಿಚಾರವಾಗಿ ಮಾತನಾಡಿದ ಅವರು, ಅಗತ್ಯ ಇರುವ ಕಡೆಗೆ ಅನುದಾನ ಬಳಸಿಕೊಳ್ಳಲು ಅಧಿಕಾರವಿದೆ. ಅನುದಾನ ಬಳಕೆಗೆ ಸರ್ಕಾರಕ್ಕೆ ಅನುವಂಶೀಯವಾದ ಅಧಿಕಾರವಿದೆ. ಅದನ್ನೇ ಬಿಜೆಪಿ ಹಾಗೂ ಜೆಡಿಎಸ್ ನವರು ದೊಡ್ಡದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ದಲಿತರಿಗೆ ಏನು ಮಾಡಿದರು..? ಎಂದು ಪ್ರಶ್ನಿಸುವ ಮೂಲಕ, ರಾಜ್ಯ ಸರ್ಕಾರದ ನಿಲುವನ್ನ ಹೆಚ್ ವಿಶ್ವನಾಥ್ ಸಮರ್ಥನೆ ಮಾಡಿಕೊಂಡರು.
ನಾನೂ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದೆ. ಮೈತ್ರಿ ವೇಳೆ 12 ಜನ ಸಚಿವ ಸ್ಥಾನ ಸಿಕ್ಕಿತ್ತು, ಇದರಲ್ಲಿ 7 ಸಚಿವರು ಕುಮಾರಸ್ವಾಮಿ ಮನೆಯವರೇ ಆಗಿದ್ದರು. ಬಂಡೆಪ್ಪ ಕಾಶೆಂಪೂರ್ ಒಬ್ಬ ಕುರುಬ, ಇನ್ನಿಬ್ಬರು ಲಿಂಗಾಯತರು. 12ರ ಪೈಕಿ 2 ಸಚಿವ ಸ್ಥಾನಗಳು ಖಾಲಿಯಾಗಿಯೇ ಇತ್ತು. ಅದನ್ನ ದಲಿತರು ಹಾಗೂ ಮುಸ್ಲಿಮರಿಗೆ ಕೊಡಿ ಅಂತ ಕೇಳಿದ್ದೆ. ಆದರೆ, ಖಾಲಿ ಬಿಟ್ಟರೇ ಹೊರತು ದಲಿತರಿಗೆ ಸಚಿವ ಸ್ಥಾನ ಸಿಗಲಿಲ್ಲ. ಅಂತಹವರು ಈಗ ದಲಿತರ ಉದ್ಧಾರದ ಬಗ್ಗೆ ಮಾತನಾಡುತ್ತಾರೆ ಎಂದು ಕುಮಾರಸ್ವಾಮಿ ವಿರುದ್ದ ಕಿಡಿಕಾರಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications