ಗ್ಯಾರಂಟಿ ಯೋಜನೆಗಳ ಸ್ಪಷ್ಟತೆ, ಹಣಕಾಸು ಕ್ರೋಢೀಕರಣ ಮಾಹಿತಿ ನೀಡಲು ಎನ್.ರವಿಕುಮಾರ್ ಆಗ್ರಹ
ಬೆಂಗಳೂರು, ಜೂನ್ 02: ಗೃಹಲಕ್ಷ್ಮಿ, ಗೃಹಭಾಗ್ಯ, ಅನ್ನಭಾಗ್ಯ ಮತ್ತು ಯುವನಿಧಿಯು ಸಮಸ್ಯೆಗಳನ್ನು ನಿರ್ಮಿಸಿದೆ. ಇದರಲ್ಲಿ ಸ್ಪಷ್ಟತೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದ್ದಾರೆ.
ಸಿದ್ದರಾಮಯ್ಯರ ಸರಕಾರವು ಗ್ಯಾರಂಟಿ ಯೋಜನೆ ಮೂಲಕ ಸಮಸ್ಯೆಗಳನ್ನೇ ನಿರ್ಮಿಸಿದೆ ಎಂದು ಆಕ್ಷೇಪಿಸಿದರು. ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಖರ್ಚಾಗಲಿದೆ? 5 ಗ್ಯಾರಂಟಿ ಯೋಜನೆಗಳಿಗೆ ಸರಕಾರಕ್ಕೆ ಎಷ್ಟು ಖರ್ಚು ಬರಲಿದೆ ಎಂಬುದನ್ನು ತಿಳಿಸಬೇಕು. ಅದಕ್ಕಾಗಿ ಹೆಚ್ಚುವರಿ ತೆರಿಗೆ ಹಾಕುವಿರಾ? ಹಾಲಿ ನೀರಾವರಿ, ರಸ್ತೆ ನಿರ್ಮಾಣ, ಮೆಟ್ರೊ ಮತ್ತಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದು ಬಳಸಿಕೊಳ್ಳುವಿರಾ? ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಅವರ ಸರಕಾರವು ಈ ಹಿಂದೆ ಘೋಷಿಸಿದ್ದ ಗ್ಯಾರಂಟಿಯ ಕುರಿತು ಕ್ಯಾಬಿನೆಟ್ ಸಭೆಯ ಬಳಿಕ ವಿವರವಾದ ಯೋಜನೆಯನ್ನು ಪ್ರಕಟಿಸಿದ್ದು, ಅದನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು. ಇದರಲ್ಲಿ ಆಗಿರುವ ಸಮಸ್ಯೆ ಏನೆಂದರೆ 200 ಯೂನಿಟ್ ಪ್ರತಿ ಮನೆಗೆ ವಿದ್ಯುತ್ ಉಚಿತ ಎಂದಿದ್ದಾರೆ. ಉದಾ: 70 ಯೂನಿಟ್ ಬಳಸುವವರಿಗೆ ಹೆಚ್ಚುವರಿ 10 ಯೂನಿಟ್ ಮಾತ್ರ ಎಂದಿದ್ದಾರೆ. ಹಾಗಿದ್ದರೆ 200 ಯೂನಿಟ್ ಎಂದು ಪ್ರಕಟಿಸಿದ್ದು ಯಾಕೆ ಎಂದು ಕೇಳಿದರು. 200 ಯೂನಿಟ್ ಬಳಸಲು ಅವಕಾಶ ಕೊಡಬೇಕು. 201 ಯೂನಿಟ್ ಬಳಸಿದರೆ ಒಂದು ಯೂನಿಟ್ಗೆ ಹಣ ಪಡೆಯಬೇಕು. ಈ ವಿಷಯದಲ್ಲಿ ದ್ವಂದ್ವ ಸಲ್ಲದು ಎಂದು ತಿಳಿಸಿದ್ದಾರೆ.
ಯುವ ನಿಧಿ ವಿಚಾರದಲ್ಲಿ 2022-23ರಲ್ಲಿ ಪಾಸಾದ ಪದವೀಧರರಿಗೆ 2 ವರ್ಷ ಅಂದರೆ 24 ತಿಂಗಳ ಕಾಲ 3 ಸಾವಿರ ಮತ್ತು ಡಿಪ್ಲೊಮಾ ಆದವರಿಗೆ 1,500 ಕೊಡುವುದಾಗಿ ಹೇಳಿದ್ದಾರೆ. ಆಗ ತಾನೇ ಪಾಸಾದವ ನಿರುದ್ಯೋಗಿ ಹೇಗಾಗುತ್ತಾನೆ? ಪಾಸಾಗಿ ಉದ್ಯೋಗ ಸಿಗದೆ ಒಂದು ವರ್ಷ ಆದವರು ನಿರುದ್ಯೋಗಿ ಎಂದು ಪರಿಗಣಿಸಬೇಕಲ್ಲವೇ? ನಿಜಕ್ಕೂ ಅವರಿಗೆ ಕೊಡಬೇಕಿತ್ತು ಎಂದು ನುಡಿದರು. ಅವರಿಗೂ ಭತ್ಯೆ ಕೊಡುವಂತೆ ಆಗ್ರಹಿಸಿದರು. ಇದು ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಉತ್ತೀರ್ಣರಾದವರಲ್ಲಿ ನಿರಾಶೆ ಮೂಡಿಸಿದೆ ಎಂದು ಸಿದ್ದರಾಮಯ್ಯರವರಿಗೆ ತಿಳಿಸಲು ಬಯಸುವುದಾಗಿ ಹೇಳಿಕೆ ನೀಡಿದ್ದಾರೆ.

ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳೂ 2 ಸಾವಿರ ಕೊಡುವುದಾಗಿ ಪ್ರಕಟಿಸಿದ್ದಾರೆ. ಇದು ಸ್ವಾಗತಾರ್ಹ. ಮನೆಯ ಒಡತಿ- ಯಜಮಾನಿಯನ್ನು ನಿರ್ಧರಿಸುವುದು ಹೇಗೆ? ಒಂದು ಮನೆಯಲ್ಲಿ ಇಬ್ಬರೋ ಮೂವರೋ ಸೊಸೆಯಂದಿರು, ಅತ್ತೆ ಇದ್ದಾಗ ಯಜಮಾನಿ ಯಾರೆಂದು ನಿರ್ಧರಿಸುವುದು ಯಾರು? ಇದನ್ನು ನಿರ್ಧಾರ ಮಾಡುವುದು ಹೇಗೆ ಎಂದು ಕೇಳಿದರು. ಇದು ಸಮಸ್ಯೆ ನಿರ್ಮಾಣ ಮಾಡಲಿದೆ. ವೈಮನಸ್ಸಿಗೆ ಕಾರಣವಾಗಲಿದೆ. 'ಯಜಮಾನಿ' ನಿರ್ಧಾರದ ಕುರಿತು ಸ್ಪಷ್ಟಪಡಿಸಿ ಎಂದು ಆಗ್ರಹಿಸಿದ್ದಾರೆ.
ಅನ್ನಭಾಗ್ಯದಲ್ಲಿ 10 ಕೆಜಿ ಅಕ್ಕಿ ಕೊಡುವುದಾಗಿ ಸಿದ್ದರಾಮಯ್ಯರವರು ಹೇಳಿದ್ದಾರೆ. ಕೇಂದ್ರವು ಈಗಾಗಲೇ 5 ಕೆಜಿ ಅಕ್ಕಿಯನ್ನು ದೇಶ- ರಾಜ್ಯದ ಜನರಿಗೆ ಕೊಡುತ್ತಿದೆ. ಆ 5 ಕೆಜಿ ಅಕ್ಕಿ ಬಿಟ್ಟು ಹೆಚ್ಚುವರಿ ಕೊಡುವಿರಾ? ಅಕ್ಕಿ ಅಂತಲೂ ಹೇಳುತ್ತಿಲ್ಲ; ಆಹಾರಧಾನ್ಯ ಎನ್ನುತ್ತಿರುವುದು ಯಾಕೆ? ಎಂದು ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. ಅಕ್ಕಿ ಎನ್ನುತ್ತಿದ್ದವರು ಈಗ ಪತ್ರಿಕಾಗೋಷ್ಠಿಯಲ್ಲಿ ಆಹಾರಧಾನ್ಯ ಎನ್ನುತ್ತಿರುವುದು ಯಾಕೆ? ಅಂದರೆ ನೀವು ರಾಗಿ, ಜೋಳ ಕೊಡುವ ಯೋಜನೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.
33 ರೂ ಅಕ್ಕಿಗೆ ಬದಲು ಆಹಾರಧಾನ್ಯ ಕೊಟ್ಟು ಸರಕಾರಕ್ಕೆ ಉಳಿತಾಯ ಮಾಡಲು ಹೊರಟಿದ್ದೀರಾ? ಇದಕ್ಕೆ ಕೇಂದ್ರದ್ದು 5 ಕೆಜಿ ಇದೆ ಎಂದು ಸ್ಪಷ್ಟಪಡಿಸಬೇಕು. ಇನ್ನೈದು ಕೆಜಿ ರಾಜ್ಯದ್ದು ಎಂದು ತಿಳಿಸಬೇಕು. ನೀವೇ ಕೊಟ್ಟಿರುವುದು 5 ಕೆಜಿ ಎಂದು ತಿಳಿಸಿ ಎಂದು ಆಗ್ರಹಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸ್ವಾಗತಾರ್ಹ. ಇದರೊಳಗೆ ಅಂಥ ಸಮಸ್ಯೆ ಇಲ್ಲ ಎಂದೂ ಅವರು ಹೇಳಿದ್ದಾರೆ
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications