ಜೆಡಿಎಸ್ ನಿಷ್ಠಾವಂತ ಟಿಎ ಶರವಣಗೆ ಕ್ಯಾಬಿನೆಟ್ ದರ್ಜೆ ಹುದ್ದೆ
Recommended Video
ಬೆಂಗಳೂರು, ಜೂನ್ 04: ದೇವೇಗೌಡರ ಮನೆ ಮಗನಂತಿರುವ ಉದ್ಯಮಿ, ಎಂಎಲ್ಸಿ ಟಿಎ ಶರವಣ ಅವರು ತಾವೂ ಕೂಡಾ ಸಚಿವರಾಗಲು ಸಿದ್ಧ ಎಂದು ಘೋಷಿಸಿ ಸರಿ ಸುಮಾರು ಒಂದು ವರ್ಷದ ಬಳಿಕ ಕೊನೆಗೂ ಕ್ಯಾಬಿನೆಟ್ ದರ್ಜೆ ಸ್ಥಾನಮಾನಯುಳ್ಳ ಹುದ್ದೆ ಸಿಕ್ಕಿದೆ.
ಜೆಡಿಎಸ್ ಮುಖಂಡ, ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಕರ್ನಾಟಕ ಸರ್ಕಾರದಿಂದ ಸೋಮವಾರ(ಜೂನ್ 03)ದಂದು ಆದೇಶ ಹೊರಡಿಸಲಾಗಿದೆ.
ಶರವಣ ಅವರನ್ನು ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಆರ್ಯವೈಶ್ಯ ಸಮುದಾಯದ ಅಭಿವೃದ್ಧಿಗೆ ಬೇಕಾದ ರೂಪುರೇಷೆ ನಿರ್ಮಿಸುವುದು, ಶ್ರಮಿಸುವುದು ಈ ನಿಗಮದ ಉದ್ದೇಶ.
ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಂಗಳವಾರ(ಜೂನ್05) ರಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಿವಾಸದಲ್ಲಿ ಜೆಡಿಎಸ್ ಶಾಸಕರುಗಳ ಸಭೆ ನಡೆಯಲಿದ್ದು, ಮಹತ್ವದ ಮಾತುಕತೆ ನಡೆಯಲಿದೆ.

'ಅಪ್ಪಾಜಿ ಕ್ಯಾಂಟೀನ್' ಖ್ಯಾತಿಯ ಶರವಣ
ಜೆಡಿಎಸ್ ವರಿಷ್ಠ ದೇವೇಗೌಡರ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ 'ಅಪ್ಪಾಜಿ ಕ್ಯಾಂಟೀನ್' ಯಶಸ್ಸಿನ ಬಳಿಕ ಶರವಣ ಅವರತ್ತ ಎಲ್ಲರೂ ತಿರುಗಿ ನೋಡುವಂತಾಗಿದೆ. ಈ ಕ್ಯಾಂಟೀನ್ ಏನಿದ್ದರೂ ಚುನಾವಣೆ ತನಕ ನಂತರ ಬಂದ್ ಆಗಲಿದೆ ಎಂದು ಆಡಿಕೊಂಡು ನಕ್ಕವರು ಮೂಗಿನ ಮೇಲೆ ಬೆರಳಿಡುವಂತೆ ಶರವಣ ಅವರು ತಮ್ಮ ಜನಸೇವೆ ಮುಂದುವರೆಸಿದ್ದಾರೆ.

ಕಷ್ಟದಲ್ಲಿ ಬೆಳೆದು ಎಂಎಲ್ಸಿ, ನಿಗಮ ಮಂಡಳಿ ಅಧ್ಯಕ್ಷರಾದರು
ಚಿಕ್ಕಂದಿನಲ್ಲಿ ಉತ್ತಮವಾಗಿ ಓದುತ್ತಿದ್ದ ಶರವಣ ಅವರಿಗೆ ನಂತರ ಕಾರಣಾಂತರದಿಂದ ಓದು ಮುಂದುವರೆಸಲಾಗಲಿಲ್ಲ. ಸೇಲ್ಸ್ ಮ್ಯಾನೇಜರ್ ಆಗಿ ವೃತ್ತಿ ಆರಂಭಿಸಿದ ಶರವಣ, ಈಗ ಚಿನ್ನದ ವ್ಯಾಪಾರಿ, ಎಂಎಲ್ಸಿಯಾಗಿ ಬೆಳೆದಿದ್ದಾರೆ. ಆದರೆ, ಬೆಳೆದು ಬಂದ ಹಾದಿಯನ್ನು ಮರೆತ್ತಿಲ್ಲ.

ಗಳಿಕೆಯ ಶೇ 20ರಷ್ಟು ಧಾನ ಧರ್ಮಕ್ಕೆ ಮೀಸಲಿಟ್ಟಿದ್ದಾರೆ
'ಬಡತನನಾ ಅವಮಾನ ಮಾಡಬೇಡಿ, ಅನುಮಾನ ಪಡಬೇಡಿ. ಅಗತ್ಯವಿರುವವರಿಗೆ ಯೋಚಿಸದೆ ನೀಡಿ' ಎಂಬ ಉದ್ದೇಶದಿಂದ ಇಂದಿಗೂ ಬಡ ಮಕ್ಕಳ ಓದಿಗೆ ಆರ್ಥಿಕ ನೆರವು ನೀಡುತ್ತಾ ಬಂದಿದ್ದಾರೆ. ತಮ್ಮ ಗಳಿಕೆಯ ಶೇ 20ರಷ್ಟು ಧಾನ ಧರ್ಮಕ್ಕೆ ಮೀಸಲಿಟ್ಟಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಮುಂದಾದ ಜೆಡಿಎಸ್
ಪಕ್ಷೇತರ ಶಾಸಕರುಗಳಾದ ಆರ್. ಶಂಕರ್ ಹಾಗೂ ನಾಗೇಶ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದ್ದು, ಇವರ ಜೊತೆಗೆ ಅತೃಪ್ತರ ನೇತೃತ್ವ ವಹಿಸಿರುವ ರಮೇಶ್ ಜಾರಕಿಹೊಳಿ ಅವರಿಗೂ ಸ್ಥಾನ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications