ಎಂ.ಎಂ.ಕಲಬುರ್ಗಿ ಹತ್ಯೆ : ಮಸಾಲಾವಾಲಾ ಸಿಕ್ಕಿಬಿದ್ದಿದ್ದು ಹೇಗೆ?
ಬೆಂಗಳೂರು, ಜೂನ್ 10 : ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಪ್ರವೀಣ್ ಪ್ರಕಾಶ್ ಚತುರ್ ಎಂಬ ಆರೋಪಿಯನ್ನು ಬಂಧಿಸಿದೆ. ತನಿಖೆ ಮುಕ್ತಾಯದ ಹಂತದಲ್ಲಿದ್ದು, ಚಾರ್ಜ್ಶೀಟ್ ಸಲ್ಲಿಸಲು ಎಸ್ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ, ಎಂ.ಎಂ.ಕಲಬುರ್ಗಿ ಹತ್ಯೆ ನಡುವೆ ಸಾಮ್ಯತೆ ಇದೆ. ಎರಡೂ ಹತ್ಯೆಗೆ ಒಂದೇ ಆಯುಧವನ್ನು ಬಳಕೆ ಮಾಡಲಾಗಿದೆ. ಕಲಬುರ್ಗಿ ಅವರನ್ನು ಕೊಂದ ಆರೋಪಿಗಳೇ ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ಬಹಿರಂಗವಾಗಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆಯನ್ನು ಬಂಧಿಸಿದ್ದ ಎಸ್ಐಟಿ ಪೊಲೀಸರು ಆತನಿಂದ ಡೈರಿಯೊಂದನ್ನು ಜಪ್ತಿ ಮಾಡಿದ್ದರು. ಡೈರಿಯಲ್ಲಿದ್ದ ಮಾಹಿತಿ ಅನ್ವಯ ತನಿಖೆ ಮುಂದುವರೆಸಿ ಪ್ರವೀಣ್ ಪ್ರಕಾಶ್ ಚತುರ್ನನ್ನು ಬಂಧಿಸಿದ್ದಾರೆ.
ಬೆಳಗಾವಿ ಮೂಲದ ಪ್ರವೀಣ್ ಪ್ರಕಾಶ್ ಚತುರ್ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ. ಆದರೆ, ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದಲ್ಲಿ ಆತ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದ್ದು, ಚಾರ್ಜ್ಶೀಟ್ನಲ್ಲಿ ಎಸ್ಐಟಿ ಎಲ್ಲಾ ವಿವರವನ್ನು ದಾಖಲು ಮಾಡಲಿದೆ.

600ಕ್ಕೂ ಹೆಚ್ಚು ಕೋಡ್ ವರ್ಡ್
ಅಮೋಲ್ ಕಾಳೆ ಡೈರಿಯಲ್ಲಿ 600ಕ್ಕೂ ಹೆಚ್ಚು ಕೋಡ್ ವರ್ಡ್ಗಳಿದ್ದವು. ಅವುಗಳಲ್ಲಿ ಮಸಾಲಾವಾಲಾ ಎಂಬ ಕೋಡ್ ವರ್ಡ್ ಡಿ-ಕೋಡ್ ಮಾಡಿದಾಗ ಪ್ರವೀಣ್ ಚತುರ್ ಸುಳಿವು ಸಿಕ್ಕಿತ್ತು. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಅಮೋಲ್ ಕಾಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೇರೆ-ಬೇರೆ ಹೆಸರು ಹೇಳಿ ಆತ ಎಸ್ಐಟಿ ಅಧಿಕಾರಿಗಳ ದಾರಿ ತಪ್ಪಿಸಿದ್ದ. ಬಳಿಕ ಪ್ರವೀಣ್ ಚತುರ್ ಬಗ್ಗೆ ಮಾಹಿತಿ ನೀಡಿದ್ದ.

ಡಿಪ್ಲೊಮಾ ಪದವೀಧರ
27 ವರ್ಷದ ಪ್ರವೀಣ್ ಪ್ರಕಾಶ್ ಚತುರ್ ಬೆಳಗಾವಿ ಮೂಲದವನು. ಡಿಪ್ಲೊಮಾ ಪದವೀಧರನಾದ ಈತ ಸ್ಥಳೀಯವಾಗಿ ಶಿವ ಪ್ರತಿಷ್ಠಾನ ಎಂಬ ಸಂಘಟನೆ ಜೊತೆ ಗುರುತಿಸಿಕೊಂಡಿದ್ದ. ಮಹಾರಾಷ್ಟ್ರದ ದಂತವೈದ್ಯ ವೀರೇಂದ್ರ ತಾವಡೆ ಪರಿಚಯವಾಗಿ ಅವರ ಜೊತೆ ಸೇರಿಕೊಂಡಿದ್ದ. ವೀರೇಂದ್ರ ತಾವಡೆ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪ್ರವೀಣ್ ಪ್ರಕಾಶ್ ಚತುರ್ನನ್ನು ಎಸ್ಐಟಿ ವಿಚಾರಣೆ ಮಾಡಿತ್ತು. ಆದರೆ, ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾಗದ ಹಿನ್ನಲೆಯಲ್ಲಿ ಆತನನ್ನು ಸಾಕ್ಷಿಯಾಗಿ ಮಾಡಿ ಚಾರ್ಜ್ಶೀಟ್ನಲ್ಲಿ ಹೆಸರು ದಾಖಲಿಸಿದೆ. ಆದರೆ, ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.

ಬಂದೂಕು ಚಾಲನೆ ತರಬೇತಿ
ಎಂ.ಎಂ.ಕಲಬುರ್ಗಿ ಹತ್ಯೆಗೂ ಮುನ್ನ ಬೆಳಗಾವಿ ಮತ್ತು ಧರ್ಮಸ್ಥಳದ ಕಾಡಿನಲ್ಲಿ ಬಂದೂಕು ಚಾಲನೆ ಮಾಡುವ ತರಬೇತಿ ನೀಡಲಾಗಿತ್ತು. ಈ ತರಬೇತಿಯಲ್ಲಿ ಪ್ರವೀಣ್ ಪ್ರಕಾಶ್ ಚತುರ್ ಪಾಲ್ಗೊಂಡಿದ್ದ. ಪ್ರವೀಣ್ ಪ್ರಕಾಶ್ ಚತುರ್ ಬಂಧನದಿಂದಾಗಿ ಪ್ರಕರಣದ ತನಿಖೆ ಮುಕ್ತಾಯದ ಹಂತ ತಲುಪಿದ್ದು, ಎಸ್ಐಟಿ ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications