ದಾಭೋಲ್ಕರ್, ಪನ್ಸಾರೆ, ಕಲಬುರ್ಗಿ ಹತ್ಯೆಯ ನಡುವೆ ಸಾಮ್ಯತೆ?
ಬೆಂಗಳೂರು, ಸೆಪ್ಟೆಂಬರ್, 03 : ಪ್ರೊ.ಎಂ.ಎಂ.ಕಲಬುರ್ಗಿ ಅವರನ್ನು ಕೊಂದವರು ಯಾರು? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರ ತಂಡ ಮಹಾರಾಷ್ಟ್ರಕ್ಕೆ ತೆರಳಿದ್ದು, ಅಲ್ಲಿನ ಪೊಲೀಸರ ಜೊತೆ ಸೇರಿಕೊಂಡು ತನಿಖೆ ಆರಂಭಿಸಿದ್ದಾರೆ.
ನರೇಂದ್ರ ದಾಭೋಲ್ಕರ್, ಗೋವಿಂದ ಪನ್ಸಾರೆ ಅವರ ಹತ್ಯೆಯಂತೆ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿರಬಹುದು ಎಂಬ ಶಂಕೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ತನಿಖೆ ನಡೆಸಲಾಗುತ್ತಿದೆ. ಎರಡೂ ರಾಜ್ಯಗಳ ಪೊಲೀಸರು ಜಂಟಿಯಾಗಿ ತನಿಖೆ ನಡೆಸುವುದಿಲ್ಲ. ಆದರೆ, ಮಾಹಿತಿಗಳನ್ನು ಮಾತ್ರ ವಿನಿಮಯ ಮಾಡಿಕೊಳ್ಳಲಿದ್ದಾರೆ. [ಕಲಬುರ್ಗಿ ಹತ್ಯೆ, ಶಂಕಿತರ ರೇಖಾಚಿತ್ರ ಬಿಡುಗಡೆ]

ಮೂರು ಹತ್ಯೆ ಪ್ರಕರಣಗಳಿಗೂ ಸಾಮ್ಯತೆ ಇದೆ. ಆದರೆ, ನರೇಂದ್ರ ದಾಭೋಲ್ಕರ್, ಗೋವಿಂದ ಪನ್ಸಾರೆ ಹತ್ಯೆ ಮಾಡಿದವರೇ ಎಂ.ಎಂ.ಕಲಬುರ್ಗಿ ಅವರನ್ನು ಕೊಂದಿರಬಹುದು ಎಂಬುದು ಎಂದು ದೃಢಪಟ್ಟಿಲ್ಲ ಎಂದು ಸಿಐಡಿ ಅಧಿಕಾರಿಗಳಿ ಒನ್ ಇಂಡಿಯಾಕ್ಕೆ ಮಾಹಿತಿ ನೀಡಿದ್ದಾರೆ. [ಕಲಬುರ್ಗಿ ಅವರ ಮೇಲೆ ದಾಳಿ ನಡೆದದ್ದು ಹೇಗೆ?]
ಸಾಕ್ಷಿಗೆ ಬೆದರಿಕೆ : ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಿದ ಆರೋಪಿಗಳು ಪಕ್ಕದ ಮನೆಯವರಿಗೆ ಬೆದರಿಕೆ ಹಾಕಿದ್ದರು ಎಂದು ತಿಳಿದುಬಂದಿದೆ. ಕಲಬುರ್ಗಿ ಅವರ ಮನೆಯ ಮುಂದೆ ಗುಂಡಿನ ಶಬ್ದ ಕೇಳಿದ ತಕ್ಷಣ ಪಕ್ಕದ ಮನೆಯವರು ಹೊರಗೆ ಬಂದಿದ್ದರು. ಆದರೆ, ದುಷ್ಕರ್ಮಿಗಳು ಒಳ ಹೋಗುವಂತೆ ಅವರಿಗೆ ಬೆದರಿಕೆ ಹಾಕಿದರು ಎಂದು ತನಿಖೆ ವೇಳೆ ಅವರು ತಿಳಿಸಿದ್ದಾರೆ. [ದಾಭೋಲ್ಕರ್ ಕೊಂದವರು ಯಾರು?]
ಹತ್ಯೆ ಬಳಿಕ ಇಬ್ಬರು ಯುವಕರು ಬೈಕ್ನಲ್ಲಿ ಪರಾರಿಯಾದರು ಎಂದು ಕಲಬುರ್ಗಿ ಅವರ ಪಕ್ಕದ ಮನೆಯವರು ಸಿಐಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಟಿವಿಯಲ್ಲಿಯೂ ಬೈಕ್ನಲ್ಲಿ ಪರಾರಿಯಾಗಿರುವ ದೃಶ್ಯ ಸೆರೆಯಾಗಿದೆ.
ಸಿಬಿಐ ತನಿಖೆ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸದ್ಯದಲ್ಲೇ ಸರ್ಕಾರ ಈ ಕುರಿತು ಸಿಬಿಐಗೆ ಪತ್ರ ಬರೆಯುವ ಸಾಧ್ಯತೆ ಇದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications