ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಿಸಿದ ಆಯೋಗ
ಬೆಂಗಳೂರು, ಮೇ 04: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಬೇಕೆಂಬ ಮನವಿಗೆ ಅನುಮೋದನೆ ನೀಡಿರುವುದಾಗಿ ರಾಜ್ಯ ಚುನಾವಣಾ ಮುಖ್ಯಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಬರ ಸೇರಿದಂತೆ ಮತ್ತಿತರೆ ಆಡಳಿತ ಸಂಬಂಧಿ ನಿರ್ಧಾರಗಳನ್ನು ತೆಗೆದುಕೊಳ್ಳಲು ನೀತಿ ಸಂಹಿತೆ ಅಡ್ಡಿ ಬರುತ್ತಿರುವ ಕಾರಣ ನೀತಿ ಸಂಹಿತೆಯನ್ನು ಸಡಿಲಗೊಳಿಸಬೇಕೆಂಬ ಮನವಿಗೆ ರಾಜ್ಯ ಚುನಾವಣಾ ಆಯೋಗ ಅಸ್ತು ಎಂದಿದೆ.
ನೀತಿ ಸಂಹಿತೆ ಸಡಿಲವಾಗಿರುವ ಕಾರಣ ಮೂಲಸೌಕರ್ಯ, ಅಭಿವೃದ್ಧಿ, ಸರಕು ಮತ್ತು ಸೇವೆಗಳಿಗೆ ಸಂಬಂಧಿಸಿದ ಟೆಂಡರ್ಗಳನ್ನು ಅಂತಿಮಗೊಳಿಸಬಹುದಾಗಿದೆ.

ಇದರ ಜೊತೆಗೆ ವರ್ಗಾವಣೆ ಮತ್ತು ಸ್ಥಳ ನಿಯೋಜನೆಯನ್ನು ಮಾಡಬಹುದಾಗಿದೆ, ನಿಗಮ ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ಇಲಾಖೆಗಳಿಗೆ ನೇಮಕಾತಿಯನ್ನು ಸಹ ಮಾಡಬಹುದಾಗಿದೆ. ಆದರೆ ಕ್ಯಾಬಿನೆಟ್ ಸಭೆ ಸೇರುವುದು, ಹೊಸ ಯೋಜನೆಯ ಘೋಷಣೆ, ಕಾಮಗಾರಿ ಉದ್ಘಾಟನೆ ಸೇರಿದಂತೆ ಇನ್ನೂ ಕೆಲವಕ್ಕೆ ನೀತಿ ಸಂಹಿತೆ ಅಡ್ಡಿ ಬರಲಿದೆ.
ಕರ್ನಾಟಕದಲ್ಲಿ ಮತದಾನವು ಏಪ್ರಿಲ್ 23ಕ್ಕೆ ಮುಗಿದಿದೆ, ಆದರೆ ನೀತಿ ಸಂಹಿತೆಯು ಹೊಸ ಲೋಕಸಭೆ ರಚನೆ ಆಗುವವರೆಗೂ ಮುಂದುವರೆಯಲಿದೆ.
ಬರ ಪರಿಸ್ಥಿತಿ ಎದುರಿಸಲು ಸಭೆ ಸೇರಲು ಚುನಾವಣಾ ನೀತಿ ಸಂಹಿತೆ ಅಡ್ಡಿ ಆಗುತ್ತಿದೆ ಎಂದು ನಿನ್ನೆಯಷ್ಟೆ ಪರಮೇಶ್ವರ್ ಅವರು ಅವಲತ್ತುಕೊಂಡಿದ್ದರು, ನಿನ್ನೆಯೇ ಸಂಜೀವ್ ಕುಮಾರ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಸಡಿಸಿಲಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications