ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಿಸಿದ ಆಯೋಗ
ಬೆಂಗಳೂರು, ಮೇ 04: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಸಡಿಲಗೊಳಿಸಬೇಕೆಂಬ ಮನವಿಗೆ ಅನುಮೋದನೆ ನೀಡಿರುವುದಾಗಿ ರಾಜ್ಯ ಚುನಾವಣಾ ಮುಖ್ಯಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.
ಬರ ಸೇರಿದಂತೆ ಮತ್ತಿತರೆ ಆಡಳಿತ ಸಂಬಂಧಿ ನಿರ್ಧಾರಗಳನ್ನು ತೆಗೆದುಕೊಳ್ಳಲು ನೀತಿ ಸಂಹಿತೆ ಅಡ್ಡಿ ಬರುತ್ತಿರುವ ಕಾರಣ ನೀತಿ ಸಂಹಿತೆಯನ್ನು ಸಡಿಲಗೊಳಿಸಬೇಕೆಂಬ ಮನವಿಗೆ ರಾಜ್ಯ ಚುನಾವಣಾ ಆಯೋಗ ಅಸ್ತು ಎಂದಿದೆ.
ನೀತಿ ಸಂಹಿತೆ ಸಡಿಲವಾಗಿರುವ ಕಾರಣ ಮೂಲಸೌಕರ್ಯ, ಅಭಿವೃದ್ಧಿ, ಸರಕು ಮತ್ತು ಸೇವೆಗಳಿಗೆ ಸಂಬಂಧಿಸಿದ ಟೆಂಡರ್ಗಳನ್ನು ಅಂತಿಮಗೊಳಿಸಬಹುದಾಗಿದೆ.

ಇದರ ಜೊತೆಗೆ ವರ್ಗಾವಣೆ ಮತ್ತು ಸ್ಥಳ ನಿಯೋಜನೆಯನ್ನು ಮಾಡಬಹುದಾಗಿದೆ, ನಿಗಮ ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ಇಲಾಖೆಗಳಿಗೆ ನೇಮಕಾತಿಯನ್ನು ಸಹ ಮಾಡಬಹುದಾಗಿದೆ. ಆದರೆ ಕ್ಯಾಬಿನೆಟ್ ಸಭೆ ಸೇರುವುದು, ಹೊಸ ಯೋಜನೆಯ ಘೋಷಣೆ, ಕಾಮಗಾರಿ ಉದ್ಘಾಟನೆ ಸೇರಿದಂತೆ ಇನ್ನೂ ಕೆಲವಕ್ಕೆ ನೀತಿ ಸಂಹಿತೆ ಅಡ್ಡಿ ಬರಲಿದೆ.
ಕರ್ನಾಟಕದಲ್ಲಿ ಮತದಾನವು ಏಪ್ರಿಲ್ 23ಕ್ಕೆ ಮುಗಿದಿದೆ, ಆದರೆ ನೀತಿ ಸಂಹಿತೆಯು ಹೊಸ ಲೋಕಸಭೆ ರಚನೆ ಆಗುವವರೆಗೂ ಮುಂದುವರೆಯಲಿದೆ.
ಬರ ಪರಿಸ್ಥಿತಿ ಎದುರಿಸಲು ಸಭೆ ಸೇರಲು ಚುನಾವಣಾ ನೀತಿ ಸಂಹಿತೆ ಅಡ್ಡಿ ಆಗುತ್ತಿದೆ ಎಂದು ನಿನ್ನೆಯಷ್ಟೆ ಪರಮೇಶ್ವರ್ ಅವರು ಅವಲತ್ತುಕೊಂಡಿದ್ದರು, ನಿನ್ನೆಯೇ ಸಂಜೀವ್ ಕುಮಾರ್ ಅವರು ಚುನಾವಣಾ ನೀತಿ ಸಂಹಿತೆಯನ್ನು ಸಡಿಸಿಲಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications