ಕೋಲಾರ, ಬೆಳಗಾವಿಯಲ್ಲಿ ಆಧುನಿಕ ಕಸಾಯಿಖಾನೆ ಇನ್ನಿತರ ಸುದ್ದಿಗಳು
ಬೆಂಗಳೂರು, ಆಗಸ್ಟ್ 08: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಂಪುಟ ಸಭೆಯ ನಂತರ ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಅವರು ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಮುಖ್ಯಾಂಶಗಳು ಈ ರೀತಿ ಇವೆ:
• ಕನ್ನಡ ನಾಡು-ನುಡಿಯ ರಕ್ಷಣೆಗೆ ಪೂರಕವಾಗುವಂತೆ ಸಾಂಸ್ಕøತಿಕ ನೀತಿ ಜಾರಿಗೆಗೊಳಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಹಿಂಬಡ್ತಿ ಭೀತಿಯಲ್ಲಿರುವ ನೌಕರರಿಗಾಗಿ ಸುಗ್ರೀವಾಜ್ಞೆ
• ಜಾನುವಾರು ಲಸಿಕೆ ಉತ್ಪಾದನಾ ಘಟಕ: ಜಾನುವಾರುಗಳಿಗೆ ಬರುವ ಕಾಲುಬಾಯಿ ರೋಗ ತಡೆಗೆ ಲಸಿಕೆ ತಯಾರಿಸುವ ನೂತನ ಉತ್ಪಾದನಾ ಘಟಕವನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ಹೆಲ್ತ್ ಅಂಡ್ ವೆಟರಿನರಿ ಬಯಾಲಾಜಿಕಲ್ಸ್ ಆವರಣದಲ್ಲಿ ಒಂದು ನೂರು ಕೋಟಿ ರೂ ವೆಚ್ಚದಲ್ಲಿ ಸ್ಥಾಪಿಸಲು ಸಂಪುಟ ಒಪ್ಪಿಗೆ ನೀಡಿದೆ.
• ಕಸಾಯಿಖಾನೆಗೆ ಅನುಮೋದನೆ: ರಾಜ್ಯದ ನಾಲ್ಕು ಕಂದಾಯ ವಿಭಾಗದಲ್ಲಿ 29 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಅತ್ಯಾಧುನಿಕ ಕಸಾಯಿ ಖಾನೆಯನ್ನು ಆರಂಭಿಸಲು ಸಂಪುಟ ನಿರ್ಧರಿಸಿದೆ. ಕೋಲಾರದ ಮುಳಬಾಗಿಲು ಹಾಗೂ ಬೆಳಗಾವಿಯ ಹಿರೇ ಬಾಗೇವಾಗಿ ಸೇರಿದೆ.

• ಕಬ್ಬಿಣ ಅದಿರು ಗಣಿಗಾರಿಕೆ ಕುರಿತ ಮುಂದಿನ 15 ವರ್ಷಗಳವರೆಗಿನ ನೂತನ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
• ಕೇಂದ್ರ ಸರ್ಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ಉಕ್ಕು ಕಾರ್ಖಾನೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ರಮಣದುರ್ಗ ಬ್ಲಾಕ್ನ ವ್ಯಾಪ್ತಿಯಲ್ಲಿ 150 ಎಕರೆ ಪ್ರದೇಶವನ್ನು ಮೀಸಲಿಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
• ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲುಕಿನ ನಿಟ್ಟೂರು ಹೋಬಳಿಯ ಬಿದರಹಳ್ಳಿ ಕಾವಲ್ನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಹೆಚ್. ಎ. ಎಲ್ ಸಂಸ್ಥೆಯ ಹೆಲಿಕ್ಯಾಪ್ಟರ್ ಘಟಕಕ್ಕೆ ಕಡಬಕೆರೆಯಿಂದ ನೀರು ಹಂಚಿಕೆ ಮಾಡಲು ಸಂಪುಟ ಅನುಮೋದನೆ ನೀಡಿದೆ.
• ರಾಜ್ಯದ ಏಳು ನೀರಾವರಿ ಯೋಜನೆಗಳಿಗೆ ಬ್ಯಾರೇಜು, ಬಾಂದಾರ ನಿರ್ಮಾಣ ಮಾಡುವ ಕಾಮಗಾರಿಗೆ ಸಚಿವ ಸಂಪುಟ ಸಮ್ಮತಿ ನೀಡಿದೆ.
• ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ 100 ಎಕರೆ ಜಾಗದಲ್ಲಿ ಹಿಂದುಳಿದ ವರ್ಗದವರ ಕಲ್ಯಾಣ ಇಲಾಖೆಗೆ ಭೂಮಿ ಮಂಜೂರು ಮಾಡಿದೆ. ಸಂಗೊಳ್ಳಿ ರಾಯಣ್ಣ ಶೌರ್ಯ ಅಕಾಡೆಮಿ ಸ್ಥಾಪನೆ ಮಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
• ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲು 10 ಕೋಟಿ ರೂ. ಸಾಲ ಪಡೆಯುವ ಯೋಜನೆಗೆ ರಾಜ್ಯ ಸರ್ಕಾರ ಪ್ರತಿ ಖಾತರಿಗೆ ಒಪ್ಪಿಗೆ ನೀಡಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications