ಮೋದಿ ಸಂಪುಟದಲ್ಲಿ ಕೈ ತಪ್ಪಿದ ಕೃಷಿ ಖಾತೆ: ನಿರಾಸೆಗೊಂಡ ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು, ಜೂನ್ 11: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್ಡಿ ಕುಮಾರಸ್ವಾಮಿ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದು, ಕೃಷಿ ಖಾತೆ ಮಿಸ್ ಆಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೃಷಿ ಖಾತೆ ಕೈ ತಪ್ಪಿದ ಹಿನ್ನೆಲೆ ತೀವ್ರ ನಿರಾಸೆಯುಂಟಾಗಿದೆ ಎನ್ನಲಾಗಿದೆ.
ಲೋಕಸಭಾ ಚುಣಾವಣೆ ಹಿನ್ನೆಲೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಚುನಾವಣೆಯನ್ನ ಎದುರಿಸಿತ್ತು. ಬಿಜೆಪಿ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ರೆ, ಜೆಡಿಎಸ್ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಮಂಡ್ಯ ಕ್ಷೇತ್ರದಿಂದ ಗೆಲುವು ಕಂಡ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಸಿಕ್ಕಿದೆ.

ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಇನ್ನು ಖಾತೆ ಹಂಚಿಕೆ ಬಳಿಕ ಮೊದಲ ಮಂಡ್ಯ ಸಂಸದರಾದ ಹೆಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದು, ಕೃಷಿ ಖಾತೆ ನಿರೀಕ್ಷೆ ಇತ್ತು, ಆದರೆ ಮೋದಿ ತೀರ್ಮಾನ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ನಿರೀಕ್ಷೆ ಮಾಡಿ ಖಾತೆ ನೀಡಿದ್ದಾರೆ. ಕನ್ನಡಿಗರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ. ಎಲ್ಲವನ್ನು ಗಮನಿಸಿ ಇಲಾಖೆಯನ್ನು ಮೋದಿ ಕೊಟ್ಟಿದ್ದಾರೆ. ಪ್ರಮಾಣಿಕವಾಗಿ ಕ್ಷಣ ವ್ಯರ್ಥಮಾಡದೆ ಕೆಲಸ ಮಾಡುತ್ತೇನೆ. ರೂಟ್ ಮ್ಯಾಪ್ ಸಿದ್ದಮಾಡಿ ಕೆಲಸ ಮಾಡುತ್ತೇನೆ. ನನ್ನ ಜೀವನದಲ್ಲಿ ಅತಿ ದೊಡ್ಡ ಸವಾಲು. ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಇವೆ. ಅವುಗಳನ್ನು ಈಗ ಚರ್ಚೆ ಮಾಡುವುದಿಲ್ಲ, ನನ್ನದೆ ಕಲ್ಪನೆಯಲ್ಲಿ ಕೆಲಸ ಮಾಡಲು ಪ್ರಮಾಣಿಕೆ ಪ್ರಯತ್ನ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
ನನ್ನ ವಿಚಾರದಲ್ಲಿ ವಿಶೇಷವಾದ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ನನ್ನ ಮೇಲೆ ಸವಾಲಿದೆ. ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಲು ಕೆಲಸ ಮಾಡಬೇಕಿದೆ. ಕರ್ನಾಟಕಕ್ಕೆ ಅಂತ ಮಾತ್ರ ಹೇಳಲ್ಲ. ದೇಶಾದ್ಯಂತ ಸುತ್ತಾಡಿ ಬದಲಾವಣೆ ತರಲು ಬಯಸಿದ್ದೇನೆ ಎಂದ ಅವರು, ಪ್ರಹ್ಲಾದ್ ಜೋಷಿಯವರಿಗೆ ಆಹಾರ ಖಾತೆ ಕೊಟ್ಟಿದ್ದಾರೆ. ಶೋಭಾ ಅವರಿಗೂ ಉತ್ತಮ ಖಾತೆ ಸಿಕ್ಕಿದೆ ಎಂದು ಹೇಳಿದರು.
ಇನ್ನೂ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಏಳು ಬೀಳುಗಳನ್ನು ಕಂಡಿದೆ. ದೇವೇಗೌಡರನ್ನು ಇಂದು ಸ್ಮರಿಸುತ್ತೇನೆ. ದೇವೇಗೌಡರ ರಾಜಕೀಯ ಮುಗಿದೇ ಹೋಯ್ತು ಎನ್ನುವಾಗ ಮತ್ತೆ ಪುಟಿದೇದ್ದಿದ್ದಾರೆ. ಕುಮಾರಸ್ವಾಮಿ ಮುಗಿದು ಹೋದ ಎನ್ನುವಾಗಲೇ ಯಾವುದೋ ಶಕ್ತಿ ಕಾಪಾಡಿದೆ. ಈ ಪಕ್ಷವನ್ನು ಯಾವುದೋ ಶಕ್ತಿ ಮೇಲೆತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications