ಉಪವಾಸವಿದ್ದುಕೊಂಡೇ ಮಂಜುನಾಥನ ದರ್ಶನ ಪಡೆದ ಮೋದಿ
ಬೆಂಗಳೂರು, ಅಕ್ಟೋಬರ್ 29 : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಧರ್ಮಸ್ಥಳ ದೇವಾಲಯದ ಭೇಟಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಇಬ್ಬರ ಭೇಟಿ ಚಿತ್ರಗಳನ್ನು ಟ್ರೋಲ್ ಮಾಡಿ ಹರಿಬಿಡಲಾಗುತ್ತಿದೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ನಂತರ ಉಜಿರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಅಕ್ಟೋಬರ್ 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಮೋದಿ ಮತ್ತು ಸಿದ್ದರಾಮಯ್ಯ ಭೇಟಿ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಇತರ ಸಂಪುಟ ಸಹೋದ್ಯೋಗಿಗಳು ಮಾಂಸಾಹಾರ ಸೇವಿಸಿದ ಬಳಿಕ ಧರ್ಮಸ್ಥಳ ದೇವಸ್ಥಾನ ಪ್ರವೇಶ ಮಾಡಿದ್ದರು. ಇದು ಚರ್ಚೆ ಮತ್ತು ಟ್ರಾಲ್ಗೆ ಕಾರಣವಾಗಿದೆ.
ಸಿದ್ದರಾಮಯ್ಯ ಭೇಟಿ ನೀಡಿದ ಬಳಿಕ ಉಂಟಾಗಿದ್ದ ಗೊಂದಲಗಳಿಗೆ ದೇವಾಲಯವೇ ತೆರೆ ಎಳೆದಿತ್ತು. 'ಮಾಂಸ ಸೇವಿಸಿ ಧರ್ಮಸ್ಥಳ ದೇವಸ್ಥಾನಕ್ಕೆ ಪ್ರವೇಶಿಸಬಾರದು ಎಂಬ ನಿಯಮ ರೂಪಿಸಿಲ್ಲ' ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಸ್ಪಷ್ಟಪಡಿಸಿದ್ದರು.

ಏಕೆ ಚರ್ಚೆ ಆರಂಭವಾಗಿದೆ?
ನರೇಂದ್ರ ಮೋದಿಯವರು ಪೂಜೆ ಮುಗಿಯುವ ತನಕ ಉಪವಾಸವಿದ್ದರು. ಅಲ್ಲದೇ ಪೂಜೆಯ ವೇಳೆ ಪಂಚೆ, ಶಲ್ಯ ಧರಿಸಿದ್ದರು. ಪೂಜೆಯ ಬಳಿಕ ಫಲಹಾರ ಸೇವಿಸಿ ಅಲ್ಲಿಂದ ಉಜಿರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ಬಗ್ಗೆ ಪರ-ವಿರೋಧ ಚರ್ಚೆ ಆರಂಭವಾಗಿದೆ.

ಮೀನು ಊಟ, ಉಪವಾಸ
ಮೋದಿ ಹಾಗೂ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿರುವ ರೀತಿಯ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ಉಪವಾಸ ವಿದ್ದು ದರ್ಶನ ಪಡೆದ ಮೋದಿ ಹಾಗು ಮೀನು ತಿಂದು ದೇವಾಲಯದೊಳಗೆ ಪ್ರವೇಸಿದ ಸಿಎಂ, ಇವರಲ್ಲಿ ಯಾರು ಸಂಸ್ಕಾರವಂತರು? ಎಂಬ ಪ್ರಶ್ನೆ ಎದ್ದಿದೆ.

ಟ್ರಾಲ್ಗಳಿಗೆ ಆಹಾರ
ಈ ವಿಚಾರ ಇಟ್ಟುಕೊಂಡು ಹಲವಾರು ಟ್ರಾಲ್ಗಳನ್ನು ಮಾಡಲಾಗುತ್ತಿದೆ. ಸಿದ್ದರಾಮಯ್ಯ ಭೇಟಿಯಲ್ಲಿ ಯಾವುದೇ ತಪ್ಪಿಲ್ಲ ಎಂದು ದೇವಾಲಯವೇ ಹೇಳಿದ್ದರೂ ಟ್ರಾಲ್ ಪೇಜ್ಗಳಲ್ಲಿ ಮೀನು ಊಟದ ಫೋಟೋ ಹರಿದಾಡುತ್ತಿದೆ.

ಮೋದಿ ಉಪಹಾರ ಸೇವಿಸಿರಲಿಲ್ಲ
ಬೆಳಗ್ಗೆ 11 ಗಂಟೆಗೆ ಮೋದಿ ಧರ್ಮಸ್ಥಳಕ್ಕೆ ಆಗಮಿಸಿದರು. ಆದರೆ, ಅವರು ಬೆಳಗ್ಗೆ ಉಪಹಾರವನ್ನೂ ಸೇವಿಸಿರಲಿಲ್ಲ. ಮಂಜುನಾಥನ ದರ್ಶನಕ್ಕಾಗಿ ದೆಹಲಿಯಿಂದಲೇ ಏನೂ ತಿನ್ನದೆ ಉಪವಾಸ ಬಂದಿದ್ದರು ಎಂಬುದು ಚರ್ಚೆಗೆ ಮೂಲವಾಗಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications