ಮೋದಿ ಬರುವ ಮುನ್ನವೇ ಬೆಂಗಳೂರಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರು, ಫೆಬ್ರವರಿ 04: ಪ್ರಧಾನಿ ಮೋದಿ ಅವರು ಬಿಜೆಪಿ ಪರಿವರ್ತನಾ ಸಮಾವೇಶದ ಸಮಾರೋಪ ಸಮಾರಂಭಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಸಮಾರಂಭ ನಡೆಯಲಿರುವ ಅರಮನೆ ಮೈದಾನಕ್ಕೆ ತೆರಳುವ ರಸ್ತೆಗಳು ಈಗಾಗಲೇ ಬಂದ್ ಆಗಿವೆ. ಅರಮನೆ ಮೈದಾನದ ಸುತ್ತಾ ಮುತ್ತಾ ಟ್ರಾಫಿಕ್ ನಿಯಂತ್ರಣಕ್ಕಾಗಿ 300ಕ್ಕೂ ಅಧಿಕ ಸ್ವಯಂ ಸೇವಕರನ್ನು ನೇಮಿಸಲಾಗಿದೆ.
ಆದರೆ, ಸಮಾರಂಭಕ್ಕೆ ರಾಜ್ಯದ ವಿವಿಧೆಡೆಯಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿರುವುದರಿಂದ ಹಲವೆಡೆ ಸಂಚಾರ ದಟ್ಟಣೆ ಕಂಡು ಬಂದಿದೆ.

ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ಮಡಿಕೇರಿ ಭಾಗದಿಂದ ಕಾರ್ಯಕರ್ತರು ಅನೇಕ ಬಸ್ ಗಳಲ್ಲಿ ಆಗಮಿಸುತ್ತಿರುವುದರಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳಗ್ಗೆಯಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಮಂಡ್ಯ, ಹಾಸನ, ಚಾಮರಾಜನರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ಧಾರವಾಡ, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಿಂದ ತಲಾ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಆಗಮಿಸಿದ್ದಾರೆ. ಒಟ್ಟಾರೆ 4ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರನ್ನು ಕರೆತರಲು ಸಾರಿಗೆ ಇಲಾಖೆಯ 1,500ಕ್ಕೂ ಹೆಚ್ಚು ಬಸ್ ಬುಕ್ ಮಾಡಲಾಗಿದೆ.
Please avoid Jayamahal and Bellary roads around Palace grounds tomorrow from 10 AM to 7 PM due to rally by a political party.
— R Hithendra, IPS. (@AddlCPTraffic) February 3, 2018
ರಮಣಮಹರ್ಷಿ, ಪ್ಯಾಲೇಸ್, ಕಬ್ಬನ್, ಸರ್ ಸಿ.ವಿ.ರಾಮನ್, ಬಳ್ಳಾರಿ ರಸ್ತೆ, ಮೇಖ್ರಿ ವೃತ್ತ, ಚಾಲುಕ್ಯ ವೃತ್ತ, ಹೆಬ್ಬಾಳ ಮೇಲ್ಸೇತುವೆ ಮೇಲೆ ಭಾನುವಾರ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ವಾಹನಗಳ ರ್ಪಾಂಗ್ ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications