ಆರು ದಶಕಗಳ ತೆರಿಗೆದಾರರ ಬೆವರಿನಿಂದ ನಿರ್ಮಿಸಿರುವ ಆಸ್ತಿಯನ್ನು ಕೇಂದ್ರ ಮಾರುತ್ತಿದೆ: ಸಚಿನ್ ಪೈಲಟ್!
ಬೆಂಗಳೂರು, ಸೆ. 01: "ಪ್ರಧಾನಿ ಮೋದಿ ಸರ್ಕಾರದ ರಾಷ್ಟ್ರೀಯ ಆಸ್ತಿ ನಗದೀಕರಣ ನೀತಿಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದೆ. ಖಾಸಗಿಕರಣ, ಬಂಡವಾಳ ಹಿಂತೆಗೆತ ಹಾಗೂ ಆಸ್ತಿ ನಗದೀಕರಣದ ಮೂಲಕ ಕೇಂದ್ರ ಸರ್ಕಾರ ಮುಂದಿನ ನಾಲ್ಕು ವರ್ಷಗಳಲ್ಲಿ 6 ಲಕ್ಷ ಕೋಟಿ ರು. ಹಣವನ್ನು ಪಡೆಯಲಿದೆ. ರಸ್ತೆ, ಹೆದ್ದಾರಿ, ಗ್ಯಾಸ್ ಪೈಪ್ ಲೈನ್, ಆಹಾರ ದಾಸ್ತಾನು, ಟೆಲಿಫೋನ್ ಸಂಪರ್ಕ, ಬಂದರು, ವಿಮಾನ ನಿಲ್ದಾಣ, ರಾಷ್ಟ್ರೀಯ ಕ್ರೀಡಾಂಗಣ ಹಾಗೂ ರೈಲ್ವೆಯನ್ನು ಕಳೆದ 6 ದಶಕಗಳಿಂದ ತೆರಿಗೆದಾರರ ಬೆವರಿನ ಹಣದಲ್ಲಿ ನಿರ್ಮಿಸಲಾಗಿದ್ದು, ಇವುಗಳನ್ನು ಖಾಸಗೀಕರಣ ಮಾಡಲು ಹೊರಟಿದ್ದಾರೆ" ಎಂದು ರಾಜಸ್ತಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಕೇಂದ್ರ ಸಚಿವ ಸಚಿನ್ ಪೈಲಟ್ ಸುದ್ದಿಗೋಷ್ಠಿ ನಡೆಸಿದ್ದಾರೆ.
"ಕೇಂದ್ರ ಸರ್ಕಾರ ಅವುಗಳನ್ನು ಖಾಸಗೀಕರಣ ಮಾಡಿ ಬರುವ ಹಣವನ್ನು ಮೂಲಭೂತ ಸೌಕರ್ಯಗಳಿಗೆ 100 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಮಾಡಲು ಮುಂದಾಗಿದೆ. 1991ರಲ್ಲಿ ಮನಮೋಹನ್ ಸಿಂಗ್ ಅವರು ಹಣಕಾಸು ಮಂತ್ರಿಯಾದಾಗ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗಿತ್ತು. ನಾವು ಸದಾ ಹೂಡಿಕೆ ಪರವಾಗಿದ್ದೆವು. ಅದೇ ಕಾರಣಕ್ಕೆ ನಮ್ಮ ಆರ್ಥಿಕತೆಗೆ ತಿರುವು ಸಿಕ್ಕಿತ್ತು. ಆಗ ಬಿಜೆಪಿಯ ಸ್ವದೇಶಿ ಜಾಗರಣ್ ಮಂಚ್ ನಂತಹ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದವು. ಈಗ ಅದೇ ಬಿಜೆಪಿ ಸರಕಾರ ಈ ಸಾರ್ವಜನಿಕ ಸಂಸ್ಥೆಗಳನ್ನು ಪಾರದರ್ಶಕತೆ ಇಲ್ಲದೆ ಖಾಸಗಿ ಅವರಿಗೆ ನೀಡುತ್ತಿದೆ. ಮುಂದಿನ 30 ವರ್ಷಗಳಲ್ಲಿ ಈ ಆಸ್ತಿಗಳ ಮೌಲ್ಯ ಕುಸಿದರೆ, ಭಾರತ ಸರ್ಕಾರ ಹೇಗೆ ಅದನ್ನು ಮರಳಿ ಪಡೆಯಲಿದೆ?" ಎಂದು ಸಚಿನ್ ಪೈಲಟ್ ಪ್ರಶ್ನೆ ಮಾಡಿದ್ದಾರೆ.

ಖಾಸಗಿಯವರಿಗೆ ಲಾಭ ಮಾಡುತ್ತಿದೆ ಕೇಂದ್ರ!
ಸಾರ್ವಜನಿಕ ವಲಯ ನಿರ್ಮಾಣವಾಗುವಾಗ ಕಡಿಮೆ ಬೆಲೆಗೆ ಜಮೀನು ಖರೀದಿಸಿ, ತೆರಿಗೆದಾರರ ಹಣ ವಿನಿಯೋಗಿಸಲಾಗುತ್ತದೆ. ಇಂದು ಈ ಸಂಸ್ಥೆಗಳನ್ನು ಪಡೆಯುತ್ತಿರುವ ಖಾಸಗಿಯವರು ಸಾರ್ವಜನಿಕ ವಲಯದ ಬ್ಯಾಂಕ್ ಗಳಿಂದಲೇ ಹಣ ಪಡೆದು, ಖರೀದಿ ಮಾಡಿ, ಉದ್ಯೋಗ ಕಡಿತ ಮಾಡಿ, ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಂಡು ಹೋಗುತ್ತಾರೆ. ಕಳೆದ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಷ್ಟವನ್ನು ಕಡಿಮೆ ಮಾಡಿ, ನಷ್ಟದಲ್ಲಿರುವ ಸಂಸ್ಥೆಗಳಿಗೆ ಬಂಡವಾಳ ಹೂಡಿಕೆಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿತ್ತು ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

ಎಲ್ಲ ವಲಯದಲ್ಲೂ ಮೋದಿ ಸರ್ಕಾರ ವಿಫಲ
ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿ ಗರಿಷ್ಠ ನಿರುದ್ಯೋಗ ಪ್ರಮಾಣ, ಬಡತನ, ಆರ್ಥಿಕ ಕುಸಿತ, ಜಿಡಿಪಿ ಕುಸಿತ ಕಂಡಿದೆ. ಕೋವಿಡ್ ಸಮಯದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರು. ಪ್ಯಾಕೇಜ್ ಘೋಷಿಸಿದ್ದು, ಇದರಲ್ಲಿ ಎಷ್ಟು ಜನ ಪ್ರಯೋಜನ ಪಡೆದಿದ್ದಾರೆ?. ರಾಹುಲ್ ಗಾಂಧಿ ಅವರು ಬಡವರು ಹಾಗೂ ಮಧ್ಯಮ ವರ್ಗದ ಜನರ ಕೈಗೆ ಹಣ ಸಿಗುವಂತೆ ಮಾಡಿ ಎಂದು ಒತ್ತಾಯಿಸಿದ್ದರು. ಆದರೆ ಅವೆಲ್ಲ ಕೇಂದ್ರ ಸರಕಾರದ ಪ್ಯಾಕೇಜ್ ಕಲ್ಪನೆಗೆ ಸೀಮಿತವಾಯಿತು. ಪರಿಣಾಮ ಸಣ್ಣ ಕೈಗಾರಿಕೆಗಳು ಸೊರಗಿದವು. ಎಲ್ಲ ವಲಯದಲ್ಲೂ ಸರ್ಕಾರ ವಿಫಲವಾಯಿತು. ರೈಲ್ವೆ, ಟೆಲಿಕಾಂ, ಗಣಿ ವಲಯಗಳು ತಾಂತ್ರಿಕ ವಲಯಗಳಾಗಿದ್ದು, ಇವುಗಳನ್ನು ಸರ್ಕಾರವೇ ನಡೆಸಬೇಕಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ, ಸಾಮಾನ್ಯ ಜ್ಞಾನ ಇರುವ ಎಲ್ಲ ಭಾರತೀಯರು ಬಿಜೆಪಿ ಸರ್ಕಾರದ ಆದ್ಯತೆ ಏನು ಎಂದು ಕೇಳುತ್ತಿದ್ದಾರೆ ಎಂದು ಸಚಿನ್ ಪೈಲಟ್ ಆರೋಪಿಸಿದ್ದಾರೆ.

ಪೆಟ್ರೋಲ್ ಡೀಸೆಲ್ ಬೆಲೆ ಈಗ ದೇಸಿ ತುಪ್ಪಕ್ಕಿಂತ ದುಬಾರಿ
ಹಿಂದೆ ಯುಪಿಎ ಅಧಿಕಾರದಲ್ಲಿದ್ದಾಗ ಇದೇ ಬಿಜೆಪಿಯು ಆರ್ಥಿಕ ಉದಾರೀಕರಣ, ಅಮೆರಿಕ ಜತೆಗಿನ ಅಣ್ವಸ್ತ್ರ ಒಪ್ಪಂದ, ಡಬ್ಲ್ಯುಟಿಒ, ಆಧಾರ್ ಸೇರಿದಂತೆ ಪ್ರತಿಯೊಂದನ್ನು ವಿರೋಧಿಸಿತ್ತು. ಆದರೆ ಈಗ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ದೇಶದ ಜನರ ಮೇಲೆ ಇನ್ನಿಲ್ಲದ ಹೊರೆಯಾಗುತ್ತಿದೆ. ಪೆಟ್ರೋಲ್ ಡೀಸೆಲ್ ಬೆಲೆ ಈಗ ದೇಸಿ ತುಪ್ಪಕ್ಕಿಂತ ದುಬಾರಿಯಾಗಿದೆ. ಪೆಟ್ರೋಲ್ ಬೆಲೆ 60, 65 ರೂ. ಇದ್ದಾಗ ಬಿಜೆಪಿ ನಾಯಕರ ಹೇಳಿಕೆಗಳು ಹೇಗಿದ್ದವು?. ಆರ್ಥಿಕತೆಯನ್ನು ಸರಿ ದಾರಿಗೆ ತರುವ ಬದಲು ಕಳೆದ 7 ವರ್ಷಗಳಲ್ಲಿ ನಾವು ಸ್ಮಾರ್ಟ್ ಸಿಟಿ, ಸ್ಟಾರ್ಟ್ ಅಪ್ ಇಂಡಿಯಾ, ಸ್ವಚ್ಛ ಭಾರತ, ಗಂಗಾ ಕಲ್ಯಾಣ ಸೇರಿದಂತೆ 17 ಘೋಷಣೆಗಳನ್ನು ಕೇಳಿದ್ದು, ಎಲ್ಲದರ ಫಲಿತಾಂಶ ಬರೀ ಶೂನ್ಯ ಎಂದಿದ್ದಾರೆ ಸಚಿನ್ ಪೈಲಟ್.

ಕೋವಿಡ್ ಲಸಿಕೆ: ಕಾಳಸಂತೆ ಹಾವಳಿ ಹೆಚ್ಚಾಗಿದೆ!
ನಿರುದ್ಯೋಗ ಹೆಚ್ಚುತ್ತಿರುವ ಈ ಸಮಯದಲ್ಲಿ ದೇಶದ ಆಸ್ತಿ ಖಾಸಗಿಯವರಿಗೆ ಮಾರುವುದು ಆತಂಕಕಾರಿ ಬೆಳವಣಿಗೆ. ಖಾಸಗಿಯವರು ಬಂದಾಗ ಲಾಭದ ಉದ್ದೇಶದಿಂದ ದೊಡ್ಡ ಪ್ರಮಾಣದಲ್ಲಿ ಸಿಬ್ಬಂದಿ ಪ್ರಮಾಣ ಕಡಿತಗೊಳಿಸಲಿದ್ದಾರೆ. ಈ ಸರ್ಕಾರ ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದು, ಜನಸಾಮಾನ್ಯ ಇದನ್ನು ತಡೆಯಲು ಸಾಧ್ಯವೇ?. ಇವುಗಳು ಬಿಜೆಪಿ ಪಕ್ಷದ ಆಸ್ತಿಯಲ್ಲ, ದೇಶದ ಆಸ್ತಿ. ಅವುಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು. ದುರಾದೃಷ್ಟ ಎಂದರೆ ಸರ್ಕಾರ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾರ್ಕೆಟಿಂಗ್ ಹಾಗೂ ಬ್ರಾಂಡಿಂಗ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದೆ.
ಕೇಂದ್ರ ಸರ್ಕಾರ ಲಸಿಕೆಯನ್ನು ಮೂರು ದರಗಳಲ್ಲಿ ಮಾರಲು ಅವಕಾಶ ಕಲ್ಪಿಸಿದ್ದು, ಕಾಳಸಂತೆ ಹಾವಳಿ ಹೆಚ್ಚಾಗಿದೆ. ನಂತರ ಉಚಿತ ಲಸಿಕೆ ಎಂದು ಹೇಳುತ್ತಿದೆ. ಕದ್ದಾಲಿಕೆ, ರೈತರ ವಿರುದ್ಧ 3 ಕರಾಳ ಕಾಯ್ದೆ ಮೂಲಕ ಜನರಿಗೆ ದ್ರೋಹ ಬಗೆಯುತ್ತಿದೆ. ಹರಿಯಾಣದಲ್ಲಿ ಅನ್ನದಾತರ ಮೇಲೆ ದೌರ್ಜನ್ಯ ನಡೆಸುತ್ತಿದೆ. ಕೇಂದ್ರ ಸರ್ಕಾರದ ಈ ಜನ ವಿರೋಧಿ ನೀತಿಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ದೇಶದ ಆಸ್ತಿ ಮಾರಾಟದಿಂದ ಅದರ ಲಾಭ ಜನ ಸಾಮಾನ್ಯರಿಗೆ ತಲುಪುತ್ತದೆಯೇ ಎಂಬ ಅನುಮಾನ ಮೂಡಿದೆ ಎಂದು ಮಾಜಿ ಕೇಂದ್ರ ಸಚಿವ ಸಚಿನ್ ಪೈಲಟ್ ಆರೋಪಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications