ಕೋವಿಡ್; ಕರ್ನಾಟಕದ 17 ಡಿಸಿಗಳ ಜೊತೆ ಮೋದಿ ಸಂವಾದ
ಬೆಂಗಳೂರು, ಮೇ 16; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ವಿವಿಧ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಹೆಚ್ಚುತ್ತಿವೆ. ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಲಿದ್ದಾರೆ.
ಮೇ 18ರ ಮಂಗಳವಾರ ಪ್ರಧಾನಿ ಮೋದಿ ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೋವಿಡ್ ಪರೀಕ್ಷೆ ಹೆಚ್ಚಿಸಿ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ
ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಸಭೆ ನಡೆಲಿದ್ದಾರೆ. ಸಂಬಂಧಪಟ್ಟ ಜಿಲ್ಲೆಗಳ ಅಗತ್ಯ ಮಾಹಿತಿಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಹಿತಿ ರವಾನೆ ಮಾಡಲಾಗಿದೆ.
ಪ್ರಧಾನಿ ಮೋದಿಯಿಂದ ಕೋವಿಡ್ 19 ಪರಿಸ್ಥಿತಿ ಅವಲೋಕನ
ಯಾವ-ಯಾವ ಜಿಲ್ಲೆ; ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಡಿಸಿಗಳ ಜೊತೆ ಸಂವಾದ ನಡೆಸಲಿದ್ದಾರೆ ಮೋದಿ.
ಭಾರತದಲ್ಲಿ ಕುಸಿದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ: ಚೇತರಿಕೆಯಲ್ಲಿ ಏರಿಕೆ
ಈ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಲಾಕ್ಡೌನ್ ಅನ್ನು ಮೇ 24ರ ಬಳಿಕವೂ ವಿಸ್ತರಣೆ ಮಾಡುವ ಕುರಿತು ಸಭೆಯಲ್ಲಿ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ.
Recommended Video
ಮೇ 15ರ ಮಾಹಿತಿಯಂತೆ ಕರ್ನಾಟಕದಲ್ಲಿ 41,664 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 605494ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2171931.