ಬೀದರ್ ನಿಂದ ಅಜರುದ್ದೀನ್ ಇನ್ನಿಂಗ್ಸ್ ಆರಂಭ?
ಬೆಂಗಳೂರು, ಫೆ.7 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮದ್ ಅಜರುದ್ದೀನ್ ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ? ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ಹೌದು. ಅಜರುದ್ದೀನ್ ಬೀದರ್ ನಿಂದ ಕಣಕ್ಕಿಳಿಯಲು ನಿರ್ಧರಿಸಿದ್ದು, ಹಾಲಿ ಸಂಸದ ಧರ್ಮಸಿಂಗ್ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.
ಗುರುವಾರ ಅಜರುದ್ದೀನ್ ದೆಹಲಿ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಅವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಉತ್ತರ ಪ್ರದೇಶದ ಮೊರದಾಬಾದ್ನ ಹಾಲಿ ಸಂಸದ ಅಜರುದ್ದೀನ್ ಅವರು ಕ್ಷೇತ್ರ ಬದಲಾವಣೆ ಮಾಡಲು ಇಚ್ಛಿಸಿದ್ದಾರೆ ಎಂದು ತಿಳಿದುಬಂದಿದೆ.

ಬೀದರ್ ಕಾಂಗ್ರೆಸ್ ನಲ್ಲಿಯೂ ಕ್ಷೇತ್ರದಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಿಗೆ ನೀಡಬೇಕು ಎಂದು ಹೈಕಮಾಂಡ್ ಗೆ ಒತ್ತಡ ಹಾಕುತ್ತಿದ್ದಾರೆ. ಆದ್ದರಿಂದ ಧರ್ಮಸಿಂಗ್ ಅವರಿಗೆ ಕ್ಷೇತ್ರದ ಟಿಕೆಟ್ ಕೈತಪ್ಪಲಿದ್ದು, ಅಜರುದ್ದೀನ್ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. [ಫೆ.17ಕ್ಕೆ ಕಾಂಗ್ರೆಸ್ ಪಟ್ಟಿ ಅಂತಿಮ]
ಬೀದರ್ ಕಾಂಗ್ರೆಸ್ನ ಹಾಲಿ ಸಂಸದರಿರುವ ಕ್ಷೇತ್ರ, ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಟಿಕೆಟ್ ಖಚಿತವಾದ ಹಾಲಿ ಸಂಸದರ ಪೈಕಿ ಧರ್ಮಸಿಂಗ್ ಹೆಸರು ಸಹ ಇದೆ. ಆದರೆ, ಹೈದರಾಬಾದ್ ಕರ್ನಾಟಕದ ಒಂದು ಕ್ಷೇತ್ರವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು ಎಂಬ ಒತ್ತಡದಿಂದಾಗಿ ಅಜರುದ್ದೀನ್ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ಹಬ್ಬಿವೆ. [ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]
ಬೆಂಗಳೂರು ಸೆಂಟ್ರಲ್, ಹಾವೇರಿ ಹಾಗೂ ಬೀದರ್ ಕ್ಷೇತ್ರದದಲ್ಲಿ ಈ ಬಾರಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಮುಖಂಡರು ಹೈ ಕಮಾಂಡ್ ಕದ ತಟ್ಟಿದ್ದಾರೆ. ಜಾತಿ ಸಮೀಕರಣದ ಆಧಾರದ ಮೇಲೆಯೂ ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ಒಂದು ಕ್ಷೇತ್ರವನ್ನು ಮುಸ್ಲಿಂ ಹಾಗೂ ಹಿಂದುಳಿದವರಿಗೆ ನೀಡಬೇಕು ಎಂದು ಕಾಂಗ್ರೆಸ್ ಸಹ ಚಿಂತನೆ ನಡೆಸಿದೆ.
ಆದರೆ, ಹಾಲಿ ಸಂಸದ ಧರ್ಮಸಿಂಗ್ ಅವರಿಗೆ ಟಿಕೆಟ್ ನೀಡದಿರಲು ಯಾವ ಕಾರಣ ನೀಡಬೇಕು ಎಂಬುದು ನಾಯಕರ ಚಿಂತೆಗೆ ಕಾರಣವಾಗಿದೆ. ಅಜರುದ್ದೀನ್ ಬೀದರ್ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಇಲ್ಲವೋ ತಿಳಿಯದು ಆದರೆ, ಈ ಸುದ್ದಿಯಿಂದ ಧರ್ಮಸಿಂಗ್ ಅವರಿಗೆ ಧರ್ಮ ಸಂಕಟ ಎದುರಾಗಿರುವುದು ಖಂಡಿತ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications