ಬೀದರ್ ನಿಂದ ಅಜರುದ್ದೀನ್ ಇನ್ನಿಂಗ್ಸ್ ಆರಂಭ?
ಬೆಂಗಳೂರು, ಫೆ.7 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮದ್ ಅಜರುದ್ದೀನ್ ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ? ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ ಹೌದು. ಅಜರುದ್ದೀನ್ ಬೀದರ್ ನಿಂದ ಕಣಕ್ಕಿಳಿಯಲು ನಿರ್ಧರಿಸಿದ್ದು, ಹಾಲಿ ಸಂಸದ ಧರ್ಮಸಿಂಗ್ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.
ಗುರುವಾರ ಅಜರುದ್ದೀನ್ ದೆಹಲಿ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಅವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಉತ್ತರ ಪ್ರದೇಶದ ಮೊರದಾಬಾದ್ನ ಹಾಲಿ ಸಂಸದ ಅಜರುದ್ದೀನ್ ಅವರು ಕ್ಷೇತ್ರ ಬದಲಾವಣೆ ಮಾಡಲು ಇಚ್ಛಿಸಿದ್ದಾರೆ ಎಂದು ತಿಳಿದುಬಂದಿದೆ.

ಬೀದರ್ ಕಾಂಗ್ರೆಸ್ ನಲ್ಲಿಯೂ ಕ್ಷೇತ್ರದಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಿಗೆ ನೀಡಬೇಕು ಎಂದು ಹೈಕಮಾಂಡ್ ಗೆ ಒತ್ತಡ ಹಾಕುತ್ತಿದ್ದಾರೆ. ಆದ್ದರಿಂದ ಧರ್ಮಸಿಂಗ್ ಅವರಿಗೆ ಕ್ಷೇತ್ರದ ಟಿಕೆಟ್ ಕೈತಪ್ಪಲಿದ್ದು, ಅಜರುದ್ದೀನ್ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. [ಫೆ.17ಕ್ಕೆ ಕಾಂಗ್ರೆಸ್ ಪಟ್ಟಿ ಅಂತಿಮ]
ಬೀದರ್ ಕಾಂಗ್ರೆಸ್ನ ಹಾಲಿ ಸಂಸದರಿರುವ ಕ್ಷೇತ್ರ, ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಟಿಕೆಟ್ ಖಚಿತವಾದ ಹಾಲಿ ಸಂಸದರ ಪೈಕಿ ಧರ್ಮಸಿಂಗ್ ಹೆಸರು ಸಹ ಇದೆ. ಆದರೆ, ಹೈದರಾಬಾದ್ ಕರ್ನಾಟಕದ ಒಂದು ಕ್ಷೇತ್ರವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು ಎಂಬ ಒತ್ತಡದಿಂದಾಗಿ ಅಜರುದ್ದೀನ್ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ಹಬ್ಬಿವೆ. [ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]
ಬೆಂಗಳೂರು ಸೆಂಟ್ರಲ್, ಹಾವೇರಿ ಹಾಗೂ ಬೀದರ್ ಕ್ಷೇತ್ರದದಲ್ಲಿ ಈ ಬಾರಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಮುಸ್ಲಿಂ ಮುಖಂಡರು ಹೈ ಕಮಾಂಡ್ ಕದ ತಟ್ಟಿದ್ದಾರೆ. ಜಾತಿ ಸಮೀಕರಣದ ಆಧಾರದ ಮೇಲೆಯೂ ಹೈದರಾಬಾದ್ ಕರ್ನಾಟಕದ ಭಾಗದಲ್ಲಿ ಒಂದು ಕ್ಷೇತ್ರವನ್ನು ಮುಸ್ಲಿಂ ಹಾಗೂ ಹಿಂದುಳಿದವರಿಗೆ ನೀಡಬೇಕು ಎಂದು ಕಾಂಗ್ರೆಸ್ ಸಹ ಚಿಂತನೆ ನಡೆಸಿದೆ.
ಆದರೆ, ಹಾಲಿ ಸಂಸದ ಧರ್ಮಸಿಂಗ್ ಅವರಿಗೆ ಟಿಕೆಟ್ ನೀಡದಿರಲು ಯಾವ ಕಾರಣ ನೀಡಬೇಕು ಎಂಬುದು ನಾಯಕರ ಚಿಂತೆಗೆ ಕಾರಣವಾಗಿದೆ. ಅಜರುದ್ದೀನ್ ಬೀದರ್ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಇಲ್ಲವೋ ತಿಳಿಯದು ಆದರೆ, ಈ ಸುದ್ದಿಯಿಂದ ಧರ್ಮಸಿಂಗ್ ಅವರಿಗೆ ಧರ್ಮ ಸಂಕಟ ಎದುರಾಗಿರುವುದು ಖಂಡಿತ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications