ಮೋದಿ @ 70 ವಿಷನ್ ಡಾಕ್ಯುಮೆಂಟ್ ಪುಸ್ತಕ ಬಿಡುಗಡೆ
ಬೆಂಗಳೂರು, ಜ 20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು 'ಮೋದಿ @ 70 ವಿಷನ್ ಡಾಕ್ಯುಮೆಂಟ್' ಪುಸ್ತಕ, ಮೈಸೂರಿನಲ್ಲಿ ನಡೆದ ಬೃಹತ್ ಉದ್ಯೋಗ ನೊಂದಾವಣಿ ಮತ್ತು ಸ್ವಯಂ ಉದ್ಯೋಗ ನೊಂದಾವಣಿ ಕಾರ್ಯಕ್ರಮದ ಸಮರ್ಥ ಕರ್ನಾಟಕ ಎಂಬ ಹೊತ್ತುಗೆ, ಕೇಂದ್ರ - ರಾಜ್ಯ ಸರ್ಕಾರದ ಮತ್ತು ಕೆ.ಆರ್ ಕ್ಷೇತ್ರದ ಅಭಿವೃದ್ಧಿಯ ಕುರಿತು ಒಂದು ವೆಬ್ ಸೈಟ್ ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, "ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಬಿಜೆಪಿಗೆ ಹಾಗೂ ರಾಜ್ಯಕ್ಕೆ ಥಿಂಕ್ ಟ್ಯಾಂಕರ್ ಇದ್ದಂತೆ. ಸಾರ್ವಜನಿಕ ಸೇವೆಯನ್ನು ಮಾಡುವ ಮೂಲಕ ಜನೋಪಯೋಗಿ ಶಾಸಕರಲ್ಲಿ ರಾಮದಾಸ್ ಅವರು ಅಗ್ರಗಣ್ಯರಾಗಿ ನಿಲ್ಲುತ್ತಾರೆ" ಎಂದು ರಾಮದಾಸ್ ಕಾರ್ಯವೈಖರಿಯನ್ನು ಸಿಎಂ ಶ್ಲಾಘಿಸಿದರು.
"ತಮ್ಮ ಕ್ಷೇತ್ರದಲ್ಲಿ ಎಲ್ಲಾ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಹಲವಾರು ಯೋಜನೆಗಳನ್ನು ತಲುಪಿಸುವಲ್ಲಿ ಹಾಗೂ ಅದರ ಪೂರ್ಣ ವಿವರವನ್ನು ದಾಖಲಿಸುವ ಮೂಲಕ ಎಲ್ಲಾ ರಾಜಕಾರಣಿಗಳಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನ ಸಾರ್ವಜನಿಕರಿಗೆ ತಲುಪಿಸುವಲ್ಲಿ ಇವರಷ್ಟು ಕಾರ್ಯ ಸಾಧನೆ ಯಾರು ಮಾಡಿಲ್ಲ ಎಂದು ಹೇಳಿದರೂ ತಪ್ಪಿಲ್ಲ" ಎಂದು ರಾಮದಾಸ್ ಅವರನ್ನು ಬೊಮ್ಮಾಯಿ ಹೊಗಳಿದ್ದಾರೆ.

"ಎಲ್ಲಾ ಯೋಜನೆಗಳ ಮಾಹಿತಿಗಳ ಪೂರ್ಣ ವಿವರಗಳನ್ನುಳ್ಳ ಪುಸ್ತಕ ಆಡಳಿತ ಮಾಡುವವರಿಗೆ ಬಹು ಉಪಕಾರಿಯಾಗಿದೆ. ನಾನು ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಮಾರ್ಗದರ್ಶಕರ ರೀತಿಯಲ್ಲಿ ರಾಮದಾಸ್ ಅವರು ಈ ರೀತಿಯ ಶ್ಲಾಘನೀಯ ಕೆಲಸವನ್ನು ಮಾಡಿದ್ದಾರೆ. 200ಕ್ಕೂ ಹೆಚ್ಚು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳುಳ್ಳ ವೆಬ್ ಸೈಟ್ ಅನ್ನು ಕೂಡಾ ನಾವು ಬಿಡುಗಡೆ ಮಾಡಿದ್ದು, ಅದು ದೊಡ್ಡ ಪ್ರಮಾಣದಲ್ಲಿ ಜನರನ್ನು ತಲುಪಲಿ" ಎಂದು ಸಿಎಂ ಬೊಮ್ಮಾಯಿ ಆಶಿಸಿದರು.
"ಈ ಸದರಿ ವೆಬ್ ಸೈಟ್ ಅನ್ನು ಸರ್ಕಾರದ ವೆಬ್ ಸೈಟ್ ಜೊತೆಗೆ ಲಿಂಕ್ ಮಾಡುವ ಮೂಲಕ ಸರ್ಕಾರದಲ್ಲಿ ಸಾರ್ವಜನಿಕರ ಸಹಭಾಗಿತ್ವ ತರಲು ಸಹಾಯವಾಗುತ್ತದೆ. ಬೆಳಗ್ಗೆ ನಾವು ಹಾಗೂ ರಾಮದಾಸ್ ಅವರು ಕುಳಿತು ಚರ್ಚಿಸುವ ಸಂದರ್ಭದಲ್ಲಿ ದುಡಿಯುವ ಜನತೆಗೆ ಏನಾದರೂ ಕೊಡುಗೆ ನೀಡಬೇಕೆಂದು ಚರ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಕಾರ್ಯಪ್ರವೃತ್ತರಾಗುವ ನಿಟ್ಟಿನಲ್ಲಿ ಮುನ್ನಡೆಯುತ್ತೇವೆ" ಎಂದು ಸಿಎಂ ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಮೈಸೂರಿನ ಮಹಾಪೌರರಾದ ಸುನಂದಾ ಪಾಲನೇತ್ರ, ನಗರಪಾಲಿಕಾ ಆಡಳಿತ ಪಕ್ಷದ ನಾಯಕರಾದ ಶಿವಕುಮಾರ್, ಕೆ.ಆರ್ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಎಂ. ವಡಿವೇಲು ಮುಂತಾದವರು ಹಾಜರಿದ್ದರು.
Recommended Video
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications