Breaking: ಮಂಗನ ಕಾಯಿಲೆ: ಇಂದು ಸರ್ಕಾರದ ಮಹತ್ವದ ಸಭೆ
ಬೆಂಗಳೂರು, ಫೆಬ್ರವರಿ 19: ಕರ್ನಾಟಕ ರಾಜ್ಯದ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ತುತ್ತಾಗುವವರ ಸಂಖ್ಯೆ ಏರುತ್ತಿದೆ. ಒಂದೆರಡು ಸಾವುಗಳು ಸಂಭವಿಸಿದ್ದು, ರೋಗ ವ್ಯಾಪಿಸುವ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಸೋಮವಾರ (ಫೆಬ್ರವರಿ 19) ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ. ಪ್ರಮುಖ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆಯು ಉಲ್ಬಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರೋಗದ ನಿಯಂತ್ರಣ ಹಾಗೂ ಸೂಕ್ತ ಚಿಕಿತ್ಸೆ ಕುರಿತು ಚರ್ಚಿಸಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೇಲ್ಕಂಡ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಭೆ ಇಂದು ಮಧ್ಯಾಹ್ನ 3:00 ಗಂಟೆಗೆ ಬೆಂಗಳೂರಿನ ವಿಕಾಸ ಸೌಧ ಜರುಲಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಾಯಿಲೆ ಕಡಿವಾಣಕ್ಕೆ ಸರ್ಕಾರ ಪ್ಲಾನ್?
ಮಂಗನ ಕಾಯಿಲೆ ನಿಯಂತ್ರಣದಲ್ಲಿ ಸರ್ಕಾರ ವಿಫಲಗೊಂಡಿದೆ ಎಂಬ ವಿಪಕ್ಷಗಳ ಆರೋಪಗಳಿಗೆ ಕಿವಿ ಕೊಡದೇ ಸರ್ಕಾರ ನಿಯಂತ್ರಣ ಕೆಲಸ ಮಾಡುತ್ತಿದೆ. ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಜತೆಗೆ ಸೂಕ್ತ ಚಿಕಿತ್ಸೆಗೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಇದೀಗ ನಿರಂತರವಾಗಿ ಮುಂದುವರಿಯುತ್ತಿರುವ ಮಂಗನ ಕಾಯಿಲೆಗೆ ತ್ವರಿತ ತಡೆ ನೀಡಲು ಸರ್ಕಾರ ಪ್ಲಾನ್ ಮಾಡಿದೆ. ಈ ಕುರಿತು ಸಭೆ ಚರ್ಚಿಸಿ ಬಳಿಕ ನಿರ್ಧಾರ ಪ್ರಕಟಿಸಲಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?










Click it and Unblock the Notifications