Monsoon 2024: ಮಳೆ ಬಗ್ಗೆ ಜನರ ಅಂಗೈಗೆ ಬರಲಿದೆ ಮಾಹಿತಿ, ಮುನ್ಸೂಚನೆ
ಬೆಂಗಳೂರು, ಮೇ 06: ಕರ್ನಾಟಕದಲ್ಲಿ ಬರದ ಛಾಯೆ ಆವರಿಸಿದೆ. 2023ರಲ್ಲಿ ನೈಋತ್ಯ ಮುಂಗಾರು ಕೈ ಕೊಟ್ಟ ಪರಿಣಾಮ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಈ ವರ್ಷದ ಮುಂಗಾರು ವಾಡಿಕೆಯಷ್ಟು ಮಳೆ ಸುರಿಸುವ ಮುನ್ಸೂಚನೆ ಸಿಕ್ಕಿದೆ. ಮಳೆಗಾಲ ಆರಂಭವಾದರೆ ಸಾಕು ಎಂದು ಜನರು ಕಾದು ಕುಳಿತಿದ್ದಾರೆ.
ಕರ್ನಾಟಕದ ಕಂದಾಯ ಇಲಾಖೆ ಭಾರತೀಯ ಹವಾಮಾನ ಇಲಾಖೆ 2024ರ ಮುಂಗಾರು ಅವಧಿ (ಜೂನ್-ಸೆಪ್ಟೆಂಬರ್) ಕುರಿತು ನೀಡಿರುವ ಮುನ್ಸೂಚನೆ ಆಧರಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ.

ಈ ಮುಂಗಾರು ಅವಧಿಯಲ್ಲಿ ವಾಡಿಕೆಯಷ್ಟು ಮಳೆಯಾಗುವ ನಿರೀಕ್ಷೆ ಇದೆ. ಮಳೆಯ ಮುನ್ಸೂಚನೆ, ಮಾಹಿತಿ ಜನರಿಗೆ ಮೊಬೈಲ್ ಮೂಲಕ ಅಂಗೈನಲ್ಲಿ ತಲುಪಿದರೆ ಮಳೆಯಿಂದ ಆಗುವ ಹಾನಿ ಕಡಿಮೆ ಮಾಬಹುದು ಎಂದು ಅಂದಾಜಿಸಲಾಗಿದೆ. ಅದಕ್ಕಾಗಿ ಜನರಿಗೆ ಮಾಹಿತಿ ನೀಡಲು ಹಲವು ನಿರ್ದೇಶನಗಳನ್ನು ನೀಡಲಾಗಿದೆ.
ಜನರಿಗೆ ಅಂಗೈನಲ್ಲಿಯೇ ಮಾಹಿತಿ: ಮಳೆ, ಭೂ ಕುಸಿತ, ಪ್ರವಾಹ ಮುಂತಾದ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎಲ್ಲಾ ಇಲಾಖೆಗಳು, ಜಿಲ್ಲಾ ಮಾಹಿತಿ ಅಧಿಕಾರಿ ಜಲಸಂಪನ್ಮೂಲ ಇಲಾಖೆ IMD, CWC, INCOIS,NDEM & KSNDMC ಮುಂತಾದ ನೋಡಲ್ ಏಜೆನ್ಸಿಗಳು ಹವಾಮಾನ, ನೀರಿನ ಹರಿವು, ಸಮುದ್ರದ ಸ್ಥಿತಿ ಕುರಿತು ನೀಡುವ ಮುನ್ಸೂಚನೆ ಮತ್ತು ಮುನ್ನೆಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಹಾಗೂ ತುರ್ತು ಸಂದರ್ಭಗಳಲ್ಲಿ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು NDMA ಅಭಿವೃದ್ಧಿ ಪಡಿಸಿರುವ Common Alert Protocol ಮುಖಾಂತರ ಸಾರ್ವಜನಿಕರ ಮೊಬೈಲ್ಗಳಿಗೆ ರವಾನಿಸಲಾಗುತ್ತಿದೆ. ಈ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದು ಕಂದಾಯ ಇಲಾಖೆ ಸುತ್ತೋಲೆಯಲ್ಲಿ ಹೇಳಿದೆ.
ಅವಶ್ಯವಿದ್ದಲ್ಲಿ ಜನರು KSNDMCಯಲ್ಲಿ ಚಾಲ್ತಿಯಿರುವ 'ವರುಣ ಮಿತ್ರ' ಸಹಾಯ ವಾಣಿ 9243345433ಕ್ಕೆ ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು KSNDMC ಅಭಿವೃದ್ಧಿಪಡಿಸಿರುವ Sidilu Appನಲ್ಲಿ ಪಡೆಯಬಹುದು ಅಥವಾ NDMA ಅಭಿವೃದ್ಧಿಪಡಿಸಿರುವ Damini App ಡೌನ್ಲೋಡ್ ಮಾಡಿಕೊಳ್ಳಬಹುದು.
ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಹಾಗೂ ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಸಲಹೆ/ ಸೂಚನೆಗಳನ್ನು ನೀಡುತ್ತದೆ. ಈ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ಹವಾಮಾನ ವಿಷಯದಲ್ಲಿ ಮಾಹಿತಿ ಮತ್ತು alerts ಪಡೆಯಲು NDMA ಅಭಿವೃದ್ಧಿಪಡಿಸಿರುವ Sachet Appನಲ್ಲಿ ಸಹ ಪಡೆಯಬಹುದಾಗಿದೆ ಎಂದು ತಿಳಿಸಿದೆ.
ಉಳಿದಂತೆ ಕೃಷ್ಣ, ಭೀಮ ಮತ್ತು ಕಾವೇರಿ ಜಲಾನಯನ ಪ್ರದೇಶಗಳಲ್ಲಿರುವ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣಾ, ಒಳಹರಿವು ಮತ್ತು ಹೊರ ಹರಿವು ಮಾಹಿತಿ ಸಂಗ್ರಹಿಸಲು ಅಂತರ್ ರಾಜ್ಯದ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದು ತುರ್ತು ಸಂದರ್ಭಗಳಲ್ಲಿ ನದಿ ಪಾತ್ರದಲ್ಲಿರುವ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲು ಕ್ರಮ ವಹಿಸಬೇಕು.
ಈ ಸಂಬಂಧ ಮಾಹಿತಿ ವಿನಿಮಯಕ್ಕಾಗಿ ವಾಟ್ಸ್ಆಪ್ ಗ್ರೂಪ್ಗಳನ್ನು ರಚಿಸುವುದು. ವಿಪತ್ತುಗಳಿಂದ ರಕ್ಷಣೆ ಪಡೆಯಲು ಜಿಲ್ಲೆಗಳಲ್ಲಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖಾ ಪಡೆ, ನಾಗರೀಕ ರಕ್ಷಣಾ ದಳ, ಗೃಹ ರಕ್ಷಕ ದಳ, ಆಪದ್ ಮಿತ್ರ ಅಡಿಯಲ್ಲಿ ತರಬೇತಿ ಪಡೆದ ಸಮುದಾಯ ಮಟ್ಟದ ಸ್ವಯಂ ಸೇವಕರನ್ನು ಜಾಗೃತಿಗೊಳಸಿ ಸನ್ನದ್ಧ ಸ್ಥಿತಿಯಲ್ಲಿಡುವುದು. ಜಿಲ್ಲೆಯಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆ ಮಾಹಿತಿ ಸಂಗ್ರಹ ಮಾಡುವುದು, ಎಲ್ಲಾ ಸಲಕರಣೆ ಸುಸ್ಥಿತಿಯಲ್ಲಿರುವಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಅಲ್ಲದೇ ಜಿಲ್ಲೆಯಲ್ಲಿ ವಿಪತ್ತು ಪರಿಸ್ಥಿತಿಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಈಜುಗಾರರು, ಹಾವು ಹಿಡಿಯುವವರು ಮತ್ತು ನಾಗರಿಕ ಸ್ವಯಂ ಸೇವಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯನ್ನು ಪಡೆಯುವುದು. ಅವಶ್ಯವಿದ್ದಾಗ ಅವರ ಸೇವೆಯನ್ನು ಪಡೆಯುವುದು. ಒಂದು ವೇಳೆ ಅವಶ್ಯವಿದ್ದಲ್ಲಿ SDRF/NDRF ತಂಡಗಳನ್ನು ಪೂರ್ವಭಾವಿಯಾಗಿ ವಿಪತ್ತುಗಳಿಗೆ ತುತ್ತಾಗುವಂತಹ ಪ್ರದೇಶಗಳಿಗೆ ನಿಯೋಜಿಸಬೇಕು ಎಂದು ಸೂಚಿಸಲಾಗಿದೆ.
-
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ












Click it and Unblock the Notifications