Get Updates
Get notified of breaking news, exclusive insights, and must-see stories!

Monsoon 2024: ಮಳೆ ಬಗ್ಗೆ ಜನರ ಅಂಗೈಗೆ ಬರಲಿದೆ ಮಾಹಿತಿ, ಮುನ್ಸೂಚನೆ

ಬೆಂಗಳೂರು, ಮೇ 06: ಕರ್ನಾಟಕದಲ್ಲಿ ಬರದ ಛಾಯೆ ಆವರಿಸಿದೆ. 2023ರಲ್ಲಿ ನೈಋತ್ಯ ಮುಂಗಾರು ಕೈ ಕೊಟ್ಟ ಪರಿಣಾಮ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಈ ವರ್ಷದ ಮುಂಗಾರು ವಾಡಿಕೆಯಷ್ಟು ಮಳೆ ಸುರಿಸುವ ಮುನ್ಸೂಚನೆ ಸಿಕ್ಕಿದೆ. ಮಳೆಗಾಲ ಆರಂಭವಾದರೆ ಸಾಕು ಎಂದು ಜನರು ಕಾದು ಕುಳಿತಿದ್ದಾರೆ.

ಕರ್ನಾಟಕದ ಕಂದಾಯ ಇಲಾಖೆ ಭಾರತೀಯ ಹವಾಮಾನ ಇಲಾಖೆ 2024ರ ಮುಂಗಾರು ಅವಧಿ (ಜೂನ್‌-ಸೆಪ್ಟೆಂಬರ್‌) ಕುರಿತು ನೀಡಿರುವ ಮುನ್ಸೂಚನೆ ಆಧರಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ.

Monsoon 2024 People To Get Monsoon Rain Rain Forecast BY Mobile

ಈ ಮುಂಗಾರು ಅವಧಿಯಲ್ಲಿ ವಾಡಿಕೆಯಷ್ಟು ಮಳೆಯಾಗುವ ನಿರೀಕ್ಷೆ ಇದೆ. ಮಳೆಯ ಮುನ್ಸೂಚನೆ, ಮಾಹಿತಿ ಜನರಿಗೆ ಮೊಬೈಲ್ ಮೂಲಕ ಅಂಗೈನಲ್ಲಿ ತಲುಪಿದರೆ ಮಳೆಯಿಂದ ಆಗುವ ಹಾನಿ ಕಡಿಮೆ ಮಾಬಹುದು ಎಂದು ಅಂದಾಜಿಸಲಾಗಿದೆ. ಅದಕ್ಕಾಗಿ ಜನರಿಗೆ ಮಾಹಿತಿ ನೀಡಲು ಹಲವು ನಿರ್ದೇಶನಗಳನ್ನು ನೀಡಲಾಗಿದೆ.

ಜನರಿಗೆ ಅಂಗೈನಲ್ಲಿಯೇ ಮಾಹಿತಿ: ಮಳೆ, ಭೂ ಕುಸಿತ, ಪ್ರವಾಹ ಮುಂತಾದ ಸಂದರ್ಭದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎಲ್ಲಾ ಇಲಾಖೆಗಳು, ಜಿಲ್ಲಾ ಮಾಹಿತಿ ಅಧಿಕಾರಿ ಜಲಸಂಪನ್ಮೂಲ ಇಲಾಖೆ IMD, CWC, INCOIS,NDEM & KSNDMC ಮುಂತಾದ ನೋಡಲ್ ಏಜೆನ್ಸಿಗಳು ಹವಾಮಾನ, ನೀರಿನ ಹರಿವು, ಸಮುದ್ರದ ಸ್ಥಿತಿ ಕುರಿತು ನೀಡುವ ಮುನ್ಸೂಚನೆ ಮತ್ತು ಮುನ್ನೆಚ್ಚರಿಕೆ ಹಾಗೂ ಸಲಹೆ ಸೂಚನೆಗಳನ್ನು ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಹಾಗೂ ತುರ್ತು ಸಂದರ್ಭಗಳಲ್ಲಿ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಸಾರ್ವಜನಿಕರಿಗೆ ತಲುಪುವಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು NDMA ಅಭಿವೃದ್ಧಿ ಪಡಿಸಿರುವ Common Alert Protocol ಮುಖಾಂತರ ಸಾರ್ವಜನಿಕರ ಮೊಬೈಲ್‌ಗಳಿಗೆ ರವಾನಿಸಲಾಗುತ್ತಿದೆ. ಈ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು ಎಂದು ಕಂದಾಯ ಇಲಾಖೆ ಸುತ್ತೋಲೆಯಲ್ಲಿ ಹೇಳಿದೆ.

ಅವಶ್ಯವಿದ್ದಲ್ಲಿ ಜನರು KSNDMCಯಲ್ಲಿ ಚಾಲ್ತಿಯಿರುವ 'ವರುಣ ಮಿತ್ರ' ಸಹಾಯ ವಾಣಿ 9243345433ಕ್ಕೆ ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆಯಬಹುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು KSNDMC ಅಭಿವೃದ್ಧಿಪಡಿಸಿರುವ Sidilu Appನಲ್ಲಿ ಪಡೆಯಬಹುದು ಅಥವಾ NDMA ಅಭಿವೃದ್ಧಿಪಡಿಸಿರುವ Damini App ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆ ಕುರಿತು 30 ನಿಮಿಷಗಳ ಮೊದಲೇ ಮುನ್ಸೂಚನೆ ಹಾಗೂ ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಸಲಹೆ/ ಸೂಚನೆಗಳನ್ನು ನೀಡುತ್ತದೆ. ಈ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸಬೇಕು. ಹವಾಮಾನ ವಿಷಯದಲ್ಲಿ ಮಾಹಿತಿ ಮತ್ತು alerts ಪಡೆಯಲು NDMA ಅಭಿವೃದ್ಧಿಪಡಿಸಿರುವ Sachet Appನಲ್ಲಿ ಸಹ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ಉಳಿದಂತೆ ಕೃಷ್ಣ, ಭೀಮ ಮತ್ತು ಕಾವೇರಿ ಜಲಾನಯನ ಪ್ರದೇಶಗಳಲ್ಲಿರುವ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣಾ, ಒಳಹರಿವು ಮತ್ತು ಹೊರ ಹರಿವು ಮಾಹಿತಿ ಸಂಗ್ರಹಿಸಲು ಅಂತರ್‌ ರಾಜ್ಯದ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದು ತುರ್ತು ಸಂದರ್ಭಗಳಲ್ಲಿ ನದಿ ಪಾತ್ರದಲ್ಲಿರುವ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲು ಕ್ರಮ ವಹಿಸಬೇಕು.

ಈ ಸಂಬಂಧ ಮಾಹಿತಿ ವಿನಿಮಯಕ್ಕಾಗಿ ವಾಟ್ಸ್‌ಆಪ್ ಗ್ರೂಪ್‌ಗಳನ್ನು ರಚಿಸುವುದು. ವಿಪತ್ತುಗಳಿಂದ ರಕ್ಷಣೆ ಪಡೆಯಲು ಜಿಲ್ಲೆಗಳಲ್ಲಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖಾ ಪಡೆ, ನಾಗರೀಕ ರಕ್ಷಣಾ ದಳ, ಗೃಹ ರಕ್ಷಕ ದಳ, ಆಪದ್ ಮಿತ್ರ ಅಡಿಯಲ್ಲಿ ತರಬೇತಿ ಪಡೆದ ಸಮುದಾಯ ಮಟ್ಟದ ಸ್ವಯಂ ಸೇವಕರನ್ನು ಜಾಗೃತಿಗೊಳಸಿ ಸನ್ನದ್ಧ ಸ್ಥಿತಿಯಲ್ಲಿಡುವುದು. ಜಿಲ್ಲೆಯಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆ ಮಾಹಿತಿ ಸಂಗ್ರಹ ಮಾಡುವುದು, ಎಲ್ಲಾ ಸಲಕರಣೆ ಸುಸ್ಥಿತಿಯಲ್ಲಿರುವಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಅಲ್ಲದೇ ಜಿಲ್ಲೆಯಲ್ಲಿ ವಿಪತ್ತು ಪರಿಸ್ಥಿತಿಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಈಜುಗಾರರು, ಹಾವು ಹಿಡಿಯುವವರು ಮತ್ತು ನಾಗರಿಕ ಸ್ವಯಂ ಸೇವಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯನ್ನು ಪಡೆಯುವುದು. ಅವಶ್ಯವಿದ್ದಾಗ ಅವರ ಸೇವೆಯನ್ನು ಪಡೆಯುವುದು. ಒಂದು ವೇಳೆ ಅವಶ್ಯವಿದ್ದಲ್ಲಿ SDRF/NDRF ತಂಡಗಳನ್ನು ಪೂರ್ವಭಾವಿಯಾಗಿ ವಿಪತ್ತುಗಳಿಗೆ ತುತ್ತಾಗುವಂತಹ ಪ್ರದೇಶಗಳಿಗೆ ನಿಯೋಜಿಸಬೇಕು ಎಂದು ಸೂಚಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+