ಕೊಡಗಿಗೆ ಬಲಗಾಲಿಟ್ಟು ಪ್ರವೇಶಿಸಿದ ಮುಂಗಾರು ಮಳೆ
ಮಡಿಕೇರಿ, ಜೂನ್ 10 : ಕೊಡಗಿನಲ್ಲಿ ಮುಂಗಾರು ಮಳೆ ಬಲಗಾಲಿಟ್ಟು ಪ್ರವೇಶಿಸಿದೆ. ಭಾರೀ ಅಲ್ಲದಿದ್ದರೂ ಜಿಲ್ಲೆಯ ಎಲ್ಲೆಡೆಯಲ್ಲಿ ಮಳೆಯಾಗುತ್ತಿದ್ದು, ಬೇಸಿಗೆಯಲ್ಲಿ ತತ್ತರಿಸಿದ್ದ ರೈತಾಪಿ ಜನರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ಮುಳುಗಿರುವುದು ಎಲ್ಲೆಡೆಯೂ ಕಂಡುಬರುತ್ತಿದೆ.
ಈ ಬಾರಿ ಬೇಸಿಗೆಯಲ್ಲಿ ಮಳೆ ಬಾರದೆ ಬೆಳೆಗಾರರು ಕಂಗಾಲಾಗಿದ್ದರು. ಕೆರೆಕಟ್ಟೆಗಳು ಒಣಗಿದ್ದವು, ಬೆಳೆಗಳು ಬಾಡಿದ್ದವು. ಆದರೆ ಇದೀಗ ಮಳೆ ಆರಂಭವಾಗಿರುವುದರಿಂದ ಕಾಫಿ ತೋಟಗಳಿಗೆ ಗೊಬ್ಬರ ಹಾಕುವುದು, ಭತ್ತದ ಗದ್ದೆ ಉಳುಮೆ ಮಾಡುವುದು ಜಿಲ್ಲೆಯಾದ್ಯಂತ ಭರದಿಂದ ಸಾಗಿದೆ.

ಇದುವರೆಗೆ ಕಂಡು ಬಾರದಷ್ಟು ಉಷ್ಣಾಂಶ ಈ ವರ್ಷ ಕಂಡು ಬಂದಿತ್ತು. ಇದು ಒಂದು ರೀತಿಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಮಳೆಗಾಲದ ವಾತಾವರಣ ಕಂಡು ಬಂದಿರುವುದರಿಂದ ಬೆಳೆಗಾರರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಾರ್ವಜನಿಕರು ಕೂಡ ಮಳೆಗಾಲವನ್ನು ಸಂತಸದಿಂದ ಸ್ವಾಗತಿಸಿದ್ದಾರೆ.
ಶುಕ್ರವಾರ ಜಿಲ್ಲೆಯಲ್ಲಿ 18.39 ಮಿ.ಮೀ. ಮಳೆ ಸುರಿದಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 241.17 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ 396.18 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಶುಕ್ರವಾರ ಮಳೆ 30.85 ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ ಮಳೆ 14.82 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ ಮಳೆ 9.5 ಮಿ.ಮೀ ಸುರಿದಿದೆ.

ಗರಿಷ್ಠ 2,859 ಅಡಿಯಿರುವ ಹಾರಂಗಿ ಜಲಾಶಯದಲ್ಲಿ ಶುಕ್ರವಾರ ನೀರಿನ ಮಟ್ಟ 2,797.77 ಅಡಿಯಿದೆ. ಕಳೆದ ವರ್ಷ ಇದೇ ದಿನ 2,805.48 ಅಡಿಯಷ್ಟು ನೀರಿತ್ತು. ಜಲಾಶಯದ ನೀರಿನ ಒಳ ಹರಿವು 308 ಕ್ಯೂಸೆಕ್ಸ್ನಷ್ಟಿದೆ. ಒಟ್ಟಾರೆ ಕೊಡಗಿನಲ್ಲಿ ಮುಂಗಾರು ಚೇತರಿಕೆ ಕಾಣುತ್ತಿರುವುದು ರೈತರಲ್ಲಿ ಆಶಾಭಾವನೆ ಮೂಡಿಸಿದೆ.

ಮಡಿಕೇರಿಯಲ್ಲಿ ಜಿಟಿಜಿಟಿ ಮಳೆ ಮತ್ತು ಮುಂಜಾನೆಯ ಮಂಜಿನ ಮುಸುಕು ಸ್ವರ್ಗಲೋಕವನ್ನು ಸೃಷ್ಟಿಸಿದ ಅನುಭವ ನೀಡುತ್ತಿದೆ. ಇಡೀ ನಿಸರ್ಗವನ್ನು ಅಪ್ಪಿಕೊಳ್ಳುವ ಮೂಲಕ ಮಂಜಿನ ಸಾಗರವನ್ನೇ ನೋಡುಗರ ಮುಂದಿಡುತ್ತಿದೆ. ಹೀಗಾಗಿ ಸುಂದರ ದೃಶ್ಯವನ್ನು ನೋಡುವ ಸಲುವಾಗಿ ಪ್ರವಾಸಿಗರು ಕೂಡ ದೌಡಾಯಿಸುತ್ತಿದ್ದಾರೆ.
More From
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications