ಇಡೀ ಕರ್ನಾಟಕ ಆವರಿಸಿದ ಮಾನ್ಸೂನ್, ಇಂದು ಹಲವೆಡೆ ಮಳೆ

ಬೆಂಗಳೂರು, ಜೂನ್‌ 24: ನೈರುತ್ಯ ಮುಂಗಾರು ಇಡೀ ರಾಜ್ಯವನ್ನು ಆವರಿಸಿದ್ದು, ದಕ್ಷಿಣ ಒಳನಾಡು, ಕರವಾಳಿ ಸೇರಿದಂತೆ ಹಲವೆಡೆ ಧಾರಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇದಕ್ಕೂ ಮೊದಲು ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಉತ್ತರದ ಒಳಭಾಗಗಳಲ್ಲೂ ಇದು ದುರ್ಬಲವಾಗಿತ್ತು. ಆದರೆ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು (13 ಸೆಂ.ಮೀ) ಮಳೆಯಾಗಿದೆ ಎಂದು ತಿಳಿಸಿದೆ.

Monsoon has covered the entire Karnataka and it is raining in many places today

ಶನಿವಾರ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಮುಂಗಾರು ಮಳೆಯಲ್ಲಿ ದೀರ್ಘಕಾಲದ ವಿಳಂಬದ ನಂತರ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಭಾಗಗಳು ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಭರವಸೆ ಮೂಡಿಸಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಲವು ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ದಕ್ಷಿಣ ಕಾಶಿ ಎಂದೂ ಕರೆಯಲ್ಪಡುವ ಸೋಮೇಶ್ವರನ ಆವಾಸಸ್ಥಾನವಾದ ಸೊಗಲದಲ್ಲಿನ ಜಲಪಾತವು ಈ ಪ್ರದೇಶದಲ್ಲಿ ಭಾರೀ ಮಳೆಯ ನಂತರ ಜೀವಂತವಾಗಿದೆ. ಮುರಗೋಡು, ಕರಿಮನಿ, ಹೊಸೂರಿನಲ್ಲೂ ಉತ್ತಮ ಮಳೆಯಾಗಿದೆ.

Monsoon has covered the entire Karnataka and it is raining in many places today

ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಾತ್ರಿಯಿಂದ ಉತ್ತಮ ಮಳೆಯಾಗಿದೆ. ದೇಶದಾದ್ಯಂತ ಬಿಸಿಗಾಳಿಯ ಮಿತಿ ಮೀರಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಮೊದಲು ಹೇಳಿತ್ತು. ಇದೀಗ ಈ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳೂ ಸೇರಿದ್ದು, ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಈ ತಿಂಗಳ 25 ಮತ್ತು 26 ರಂದು ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ಹರಿಯಾಣ, ದೆಹಲಿ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಪ್ರಸ್ತುತ, ಮುಂಗಾರು ಮಳೆ ಕರ್ನಾಟಕಕ್ಕೂ ವಿಸ್ತರಿಸಿದೆ. ಹೀಗಾಗಿ ದಕ್ಷಿಣ ಕರಾವಳಿ, ಮಂಗಳೂರು, ಉಡುಪಿ, ಶಿವಮೊಗ್ಗ, ಕಾಸರಗೋಡು ಸೇರಿದಂತೆ ವಿವಿಧ ಕಡೆ ಮಳೆಯಾಗುತ್ತಿದೆ. ಇದು ಮತ್ತೆ ಮುಂದುವರಿಯುವ ಸಾಧ್ಯತೆ ಇದೆ.

ಮುಂಗಾರು ಮಳೆಯಿಂದಾಗಿ ಕರ್ನಾಟಕದಲ್ಲಿ ವಾತಾವರಣ ಕೊಂಚ ತಂಪುಗೊಂಡಿದೆ. ಅದರಲ್ಲೂ ಕರಾವಳಿಯಲ್ಲಿ ಬಿಸಿಲಿನ ತಾಪ ಕೊಂಚ ತಗ್ಗಿದೆ. ಮಳೆಯಾಗುವ ನಿರೀಕ್ಷೆಯಿರುವ ಜಿಲ್ಲೆಗಳಿಗೆ ಐಎಂಡಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜೋರಾಗಿ ಮಳೆ ಬಾರದಿದ್ದರೂ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಕರ್ನಾಟಕದಲ್ಲಿ ಮಾನ್ಸೂನ್‌ ವ್ಯಾಪಿಸಿದೆ. ಮಳೆಯೂ ಸುರಿಯುತ್ತಿದೆ. ಕೆಲವೆಡೆ ತುಂತುರು ಮಳೆಯಾಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಿದೆ. ಐಎಂಟಿ ಪ್ರಕಾರ, 24, 25 ಮತ್ತು 26 ರಂದು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಸದ್ಯ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+