ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೈಋತ್ಯ ಮುಂಗಾರು; ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆ

|
Google Oneindia Kannada News

ಬೆಂಗಳೂರು, ಜೂನ್ 06; ಕರ್ನಾಟಕಕ್ಕೆ ನೈಋತ್ಯ ಮುಂಗಾರು ಪ್ರವೇಶ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

ಬೆಂಗಳೂರು: ತಡರಾತ್ರಿ ಸುರಿದ ಮಳೆಗೆ ನಿವಾಸಿಗಳು ತತ್ತರ-ಸಾರಕ್ಕಿ, ಶಾಖಂಬರಿನಗರದಲ್ಲಿ ರಸ್ತೆಗಳು ವಾಹನಗಳು ಜಲಾವೃತ

ಮುಂಗಾರು ಮಾರುತಗಳು ಒಂದು ದಿನ ಮುನ್ನವೇ ರಾಜ್ಯಕ್ಕೆ ಪ್ರವೇಶ ಮಾಡಿದೆ. ಶನಿವಾರ ಉತ್ತರ ಒಳನಾಡಿಗೆ ಸಹ ಮುಂಗಾರು ಪವೇಶವಾಗಿದೆ. ಜೂನ್ 6ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು 2021; ಶೀಘ್ರವೇ ಬೆಂಗಳೂರಿನಲ್ಲಿ ಮುಂಗಾರು ಮಳೆ ಅನುಭವಮುಂಗಾರು 2021; ಶೀಘ್ರವೇ ಬೆಂಗಳೂರಿನಲ್ಲಿ ಮುಂಗಾರು ಮಳೆ ಅನುಭವ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡಪಿಯಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಶನಿವಾರ ರಾತ್ರಿಯೂ ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ.

ಚಿತ್ರದುರ್ಗ; ತಡರಾತ್ರಿ ಅಬ್ಬರಿಸಿದ ಮುಂಗಾರು ಮಳೆ ಚಿತ್ರದುರ್ಗ; ತಡರಾತ್ರಿ ಅಬ್ಬರಿಸಿದ ಮುಂಗಾರು ಮಳೆ

Monsoon Karnataka May Get Rain For Two Days

ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೊಸಪೇಟೆ; ಭಾರೀ ಮಳೆ; ಬೆಳೆಗಳು ಸಂಪೂರ್ಣ ಜಲಾವೃತ ಹೊಸಪೇಟೆ; ಭಾರೀ ಮಳೆ; ಬೆಳೆಗಳು ಸಂಪೂರ್ಣ ಜಲಾವೃತ

ಶನಿವಾರ ಕುಂದಾಪುರದಲ್ಲಿ 9 ಸೆಂ. ಮೀ., ಪಣಂಬೂರು 7, ಬೀದರ್ 5, ಬೆಂಗಳೂರು ಮತ್ತು ಮಂಡ್ಯದಲ್ಲಿ 4 ಸೆಂ. ಮೀ. ಮಳೆಯಾಗಿದೆ.

ನೆಲಮಂಗಲ, ಚಿಂತಾಮಣಿ, ಮೂಡುಬಿದರೆಯಲ್ಲಿ 3 ಸೆಂ. ಮೀ. ಮಳೆಯಾಗಿದೆ. ಕಮಲಾಪುರ, ಕಡೂರು, ಚಿತ್ರದುರ್ಗ, ಚನ್ನಗಿರಿ ಮತ್ತು ಭಾಗಮಂಡಲದಲ್ಲಿ 1 ಸೆಂ. ಮೀ. ಮಳೆಯಾಗಿದೆ.

ಕರಾವಳಿ ಭಾಗದಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನೈಋತ್ಯ ಮುಂಗಾರು ಈ ವರ್ಷ ವಾಡಿಕೆಯಷ್ಟು ಮಳೆ ಸುರಿಸಲಿದೆ ಎಂದು ನಿರೀಕ್ಷಿಸಲಾಗಿದೆ.

English summary
The monsoon entered Karnataka. Various district of may witness for rain for two days. orange alert announced in Karavali region.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X