Monsoon: ಕರ್ನಾಟಕದಲ್ಲಿ ಮಳೆ, ಭೂ ಕುಸಿತದ ಎಚ್ಚರಿಕೆ
ಬೆಂಗಳೂರು, ಮೇ 12: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರ್ಭಟಿಸುತ್ತಿದೆ. 2024ರ ಮುಂಗಾರು ಮಳೆ ಎಷ್ಟು ಸುರಿಯಲಿದೆ? ಎಂಬ ಬಗ್ಗೆ ಲೆಕ್ಕಾಚಾರಗಳು ನಡೆಯುತ್ತಿವೆ. ನೈಋತ್ಯ ಮುಂಗಾರು ಮಳೆ ಹೆಚ್ಚಾಗಿ ಸುರಿದರೆ ಅವಾಂತರಗಳು ಸಹ ನಡೆಯುವುದು ಖಚಿತ. ಆದ್ದರಿಂದ ಸರ್ಕಾರ ಸಹ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ರಾಜ್ಯದ ಕಂದಾಯ ಇಲಾಖೆ ಭಾರತೀಯ ಹವಾಮಾನ ಇಲಾಖೆ 2024ರ ಮುಂಗಾರು ಮಳೆ ಕುರಿತು ನೀಡಿರುವ ಮುನ್ಸೂಚನೆ ಆಧರಿಸಿ ಸುತ್ತೋಲೆಯೊಂದನ್ನು ಹೊರಡಿಸಿದೆ. ಸುತ್ತೋಲೆಯಲ್ಲಿ ಮಳೆಯಿಂದಾಗಿ ಭೂ ಕುಸಿತ ಉಂಟಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ವಿವರಣೆ ನೀಡಲಾಗಿದೆ.

ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಅವಧಿಯಲ್ಲಿ ಭೂ ಕುಸಿತ ಉಂಟಾಗುತ್ತದೆ. ಆಗ ಜಿಲ್ಲಾಡಳಿತ ಸೇರಿದಂತೆ ಸ್ಥಳೀಯ ಆಡಳಿತಗಳು ಹೇಗೆ ಸನ್ನದ್ಧವಾಗಿರಬೇಕು? ಎಂದು ಕಂದಾಯ ಇಲಾಖೆ ಸೂಚನೆಯನ್ನು ಕೊಟ್ಟಿದೆ.
ಭೂ ಕುಸಿತ, ಕೈಗೊಳ್ಳಬೇಕಾದ ಕ್ರಮಗಳು
* ಕಂದಾಯ ಇಲಾಖೆ ಉಪವಿಭಾಗಾಧಿಕಾರಿ, ತಹಶೀಲ್ದಾರ್. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ. ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮುಂತಾದ ಇಲಾಖೆ, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.
* ಮಳೆಗಾಲದಲ್ಲಿ ಭೂ ಕುಸಿತ ಉಂಟಾಗುವ ಪ್ರದೇಶ/ ಗ್ರಾಮಗಳನ್ನು ಗುರುತಿಸಬೇಕು. ಭೂ ಕುಸಿತಕ್ಕೆ ಕಾರಣವಾಗುವ ಅಂಶಗಳನ್ನು ಗುರುತಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಪ್ರದೇಶದಲ್ಲಿ ನೀರು ಸಾರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು.
* ರಸ್ತೆ ಬದಿಯ ದುರ್ಬಲ ಮರಗಳನ್ನು, ಕೊಂಬೆಗಳನ್ನು ಕತ್ತರಿಸಬೇಕು. ಭೂ ಕುಸಿತ ಉಂಟಾಗುವ ಪ್ರದೇಶದ ರಸ್ತೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು. ರಸ್ತೆ ಮೇಲೆ ಬಿದ್ದಿರುವ ಅವಶೇಷಗಳನ್ನು ತೆರವು ಮಾಡಲು ಜೆಸಿಬಿಗಳನ್ನು ಸಜ್ಜುಗೊಳಿಸಬೇಕು.
* ಮಳೆಗಾಲಕ್ಕೆ ಮುಂಚಿತವಾಗಿ ಮಳೆ ನೀರು ಸರಾಗಿವಾಗಿ ಹರಿದು ಹೋಗಲು ಕಾಲುವೆ/ ಚರಂಡಿ/ ಸೇತುವೆಗಳ ಕೆಳಗೆ ಇರುವ ಹೂಳು ತೆಗೆದು ಸ್ವಚ್ಛಗೊಳಿಸಬೇಕು. ನದಿ/ ನೀರಾವರಿ ಕೆರೆ/ ಕಾಲುವೆಗಳ ದಂಡೆಗಳ ಹತ್ತಿರ ಇರುವ ನೆರೆ ಪೀಡಿತ ಪ್ರದೇಶಗಳನ್ನು ಗುರುತಿಸಬೇಕು.
* ಚರಂಡಿಗಳ ಮೇಲೆ ಹೊದೆಸಿರುವ ಕಲ್ಲು ಚಪ್ಪಡಿ ಕಾಂಕ್ರೀಟ್ ಸ್ಲಾಬ್ಗಳನ್ನು ಯಾವುದೇ ಅಂತರವಿಲ್ಲದೇ ಸಮರ್ಪಕವಾಗಿ ಮುಚ್ಚಲು ಕ್ರಮ ಕೈಗೊಳ್ಳುವುದು. ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ಮಳೆಗಾಲಕ್ಕೆ ಮುಂಚಿತವಾಗಿಯೇ ಪ್ರವಾಹ ಉಪ ಶಮನ ಕ್ರಮಗಳನ್ನು ಕೈಗೊಳ್ಳುವುದು.
* ಅವಶ್ಯವಿದ್ದಲ್ಲಿ ಸಾಕಷ್ಟು ಮರಳು ಚೀಲಗಳನ್ನು ದಾಸ್ತಾನು ಮಾಡಿಕೊಳ್ಳಲು ಕ್ರಮ ವಹಿಸುವುದು. ನಗರ/ ಗ್ರಾಮಗಳಲ್ಲಿ ಪ್ರವಾಹದಿಂದ ತಗ್ಗು ಪ್ರದೇಶದಲ್ಲಿ ನಿಂತ ನೀರನ್ನು ಹೊರ ಹಾಕಲು ಪಂಪ್ಸೆಟ್ಗಳನ್ನು ಸಜ್ಜುಗೊಳಿಸುವುದು.
* ಆಗಾಗ ವಿಪತ್ತುಗಳಿಗೆ ತುತ್ತಾಗುವಂತಹ ಹಳ್ಳಿಗಳಲ್ಲಿನ ಜನಸಂಖ್ಯೆಗೆ ಅನುಸಾರ ನೀರು, ಶೌಚಾಲಯ ಹೊಂದಿರುವ ಆಶ್ರಯ ತಾಣ/ ಕಾಳಜಿ ಕೇಂದ್ರಗಳನ್ನು ಗುರುತಿಸುವುದು. ಸ್ಥಳೀಯ ಮಟ್ಟದಲ್ಲಿ ಲಭ್ಯವಿಲ್ಲದಿದ್ದಲ್ಲಿ ಹತ್ತಿರದ ಊರುಗಳಲ್ಲಿ ಗುರುತಿಸುವುದು.
* ಸ್ಥಳಾಂತರ ಮಾಡಬೇಕಾದ ಅವಶ್ಯಕತೆ ಇದ್ದಲ್ಲಿ ಪರ್ಯಾಯ ಮಾರ್ಗ ಗುರುತಿಸಿ ಸಾರಿಗೆ ವ್ಯವಸ್ಥೆಯನ್ನು ಮಾಡುವುದು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು. ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿರುವಂತೆ ಉಪಹಾರ, ಮಧ್ಯಾಹ್ನ ಊಟ ಮತ್ತು ರಾತ್ರಿ ಊಟವನ್ನು ನೀಡುವುದು.
* SDRF ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡುವುದು. ಪುನರ್ ವಸತಿ ಕೇಂದ್ರ/ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವ ಸಂತ್ರಸ್ತರ ದತ್ತಾಂಶ ಸಂಗ್ರಹ ಮಾಡುವುದು. ಅಗತ್ಯ ಆಹಾರ ದಿನಸಿಗಳಾದ ಬೇಳೆಕಾಳು, ಎಣ್ಣೆ, ಅಕ್ಕಿ ಇತ್ಯಾದಿಗಳನ್ನು ಡಿಪೋಗಳಲ್ಲಿ ಸಮರ್ಪಕವಾಗಿ ದಾಸ್ತಾನು ಮಾಡಲು ಕ್ರಮ ವಹಿಸುವುದು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications