Monsoon Rain 2026: ಮುಂಗಾರು ಪ್ರವೇಶಕ್ಕೆ ಕೌಂಟ್‌ಡೌನ್‌, ಕರ್ನಾಟಕಕ್ಕೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ( ಂMonsoon Rain 2026) ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಮುಂದಿನ 7 ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದುವರಿಯಲಿದೆ, ಇದರ ಬೆನ್ನಲ್ಲೆ ಮುಂಗಾರು ಮಳೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಪ್ರಕಾರ, ಮೇ 26ರ ಹೊತ್ತಿಗೆ ಮುಂಗಾರು ಮಳೆಯ ಮಾರುತಗಳು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ. ಅವಧಿಗು ಮುನ್ನವೇ ಅಂದರೆ ಇನ್ನು ಹತ್ತೇ ದಿನಗಳಲ್ಲಿ (ಮೇ ಕೊನೆ ವಾರ) ಮುಂಗಾರಿನ ಅಧಿಕೃತ ಪ್ರವೇಶವಾಗಲಿದೆ ಎನ್ನಲಾಗಿದೆ. ಹೇಗೆಂದರೆ 3-4 ದಿನಗಳಲ್ಲಿ ಆಗ್ನೆಯ ಅರೇಬಿಯನ್ ಸಮುದ್ರ, ನೈಋತ್ಯ ಮತ್ತು ಆಗ್ನೆಯ ಬಂಗಾಳಕೊಲ್ಲಿಯ ಕೆಲವು ಭಾಗಗಳು ಮಾತ್ರವಲ್ಲದೇ ಅಂಡಮಾನ್ ದ್ವೀಪಗಳು ಮತ್ತು ಅಂಡಮಾನ್ ಸಮುದ್ರದ ಭಾಗಗಳಲ್ಲಿ ಮುಂಗಾರು ಆಗಮಿಸಲು ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Monsoon Rain 2026

ಬಂಗಾಳಕೊಲ್ಲಿಯಲ್ಲಿ ವಿವಿಧ ಭಾಗಗಳಲ್ಲಿ ಅನುಕೂಲಕರ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಮೇ 16ರಂದು ಕಂಡು ಬಂದಿದ್ದ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 4.5 ಕಿ.ಮೀವರೆಗೆ ವಿಸ್ತರಿಸಿದೆ. ಇದು ಇನ್ನಷ್ಟು ತೀವ್ರಗೊಳ್ಳಲೂಬಹುದು. ಇದು ಉತ್ತರ ಕರಾವಳಿ ತಮಿಳುನಾಡು ಮತ್ತಿತರ ಪ್ರದೇಶಗಳಲ್ಲಿ ಮೇಲೆ ಪ್ರಭಾವ ಬೀರುತ್ತದೆ. ವಿದರ್ಭ ಪ್ರದೇಶದಲ್ಲೂ ವಾಯು ಚಂಡಮಾರುತದ ಪರಿಚಲನೆಯು (1.5 ಕಿಮೀ) ಮುಂದುವರೆದಿದೆ.

Monsoon Rain 2026; ಮುಂಗಾರು ಮಳೆ ಆರಂಭಕ್ಕೆ ಅನುಕೂಲಕರ ವಾತಾವರಣ: ಕರ್ನಾಟಕಕ್ಕೆ 5 ದಿನ ಮಳೆ ಎಚ್ಚರಿಕೆ
Monsoon Rain 2026; ಮುಂಗಾರು ಮಳೆ ಆರಂಭಕ್ಕೆ ಅನುಕೂಲಕರ ವಾತಾವರಣ: ಕರ್ನಾಟಕಕ್ಕೆ 5 ದಿನ ಮಳೆ ಎಚ್ಚರಿಕೆ

7 ದಿನದ ಹವಾಮಾನ ಮುನ್ಸೂಚನೆ

ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಬಾಳೆಹೊನ್ನೂರು, ಮಂಗಳೂರು, ಆಗುಂಬೆ, ಮೂಡಿಗೆರೆ, ಕೊಪ್ಪಳದಲ್ಲಿ ಸಾಧಾರಣ ಮಳೆ ಆಗಿದೆ. ಉತ್ತರ ಕರ್ನಾಟಕದ ಒಂದಷ್ಟು ಕಡೆಗಳಲ್ಲಿ ಹಗುರ ಮಳೆ ಆಗಿದ್ದರೆ, ಬೆಂಗಳೂರಿನಲ್ಲಿ ನೆನ್ನೆ ಇಡೀ ದಿನ ಮಬ್ಬು ಕವಿದಿತ್ತು. ಮುಂದಿನ 7 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ.

ಕರ್ನಾಟಕಕ್ಕೆ 3 ದಿನ ಭಾರೀ ಮಳೆ: ಯೆಲ್ಲೋ ಅಲರ್ಟ್

ಇಂದಿನಿಂದ 3-5 ದಿನ ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ರಾಮನಗರ, ಶಿವಮೊಗ್ಗ,, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ದಿನ ಭಾರೀ ಮಳೆ ಆಗಲಿದ್ದು, ಪ್ರತ್ಯೇಕ ದಿನಗಳಲ್ಲಿ ಆಯಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ ಇದೆ. ಈ ಭಾಗದಲ್ಲಿ ಶನಿವಾರದವರೆಗೂ ಅಧಿಕ ಬಿಸಿಲು, ಒಣಹವೆ ಕಂಡು ಬಂದಿದ್ದು, ಇದೀಗ ಮಳೆಯ ವಾತಾವರಣ ಕಂಡು ಬರುತ್ತಿದೆ.

ಉತ್ತರ ಒಳನಾಡಿಗೆ ಹಗುರ ಮಳೆ, ಒಣಹವೆ ಎಚ್ಚರಿಕೆ

ಮೇ 19ರವರೆಗೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗಗಳಲ್ಲಿ ಹಾಗೂ ಕೊಪ್ಪಳ, ರಾಯಚೂರು, ಯಾದಗಿರಿ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ ಭಾಗದಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹಗುರ ಮಳೆ ಸಾಧ್ಯತೆ ಇದೆ. ಇನ್ನೂ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಬರೋಬ್ಬರಿ ಕನಿಷ್ಠ 3.1 ಹಾಗೂ ಗರಿಷ್ಠ 5 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಕಂಡು ಬರಲಿದೆ. ಮೇ 20ರಿಂದ ಮತ್ತೆ ಬಿಸಿಲು ಹೆಚ್ಚಾಗಲೂಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ.

ಬೆಂಗಳೂರಲ್ಲಿ ಮಬ್ಬು ವಾತಾವರಣ

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 3 ದಿನ ಅಲ್ಲಲ್ಲಿ ಹಗುರ ಮಳೆ ನಿರೀಕ್ಷೆ. ಮೋಡ ಕವಿದ ವಾತಾವರಣ ಕಂಡು ಬರಲಿದೆ. ವಾತಾವರಣ ಸಾಮಾನ್ಯವಾಗಿರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 33-34ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+