ಮುಂಗಾರು ಮಳೆಗೆ ಸೌಂದರ್ಯ ತುಂಬಿ ಅಪ್ಸರೆಯಂತೆ ಕಂಗೊಳಿಸಿದ ಮಲೆನಾಡು!
ಮಲೆನಾಡು ಮಳೆ ಚಂದ.. ಕರಾವಳಿಗೆ ಸಮುದ್ರವೇ ಅಂದ.. ಹೀಗೆ ಕನ್ನಡ ನಾಡು ಎಲ್ಲಾ ರೀತಿಯ ವಿಧವಿಧದ ವಾತಾವರಣ ಹೊಂದಿರುವ ರಾಜ್ಯ. ನಮ್ಮ ಕನ್ನಡ ನಾಡನ್ನು ಇಡೀ ಜಗತ್ತಿನಲ್ಲಿ ಇದೇ ಕಾರಣಕ್ಕೆ ಹೊಗಳುವುದು ಉಂಟು. ಅದರಲ್ಲೂ ಮಳೆ ಬಂದಾಗ ಕನ್ನಡ ನಾಡಿನ ಮಲೆನಾಡು ಭಾಗವನ್ನು ಯಾರಾದರೂ ಮರೆಯುವುದು ಉಂಟೇ? ಈ ಬಗ್ಗೆ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗುತ್ತಿದ್ದು, ವಿಡಿಯೋ ನೋಡಲು ಮುಂದೆ ಓದಿ.
ಮುಂಗಾರು ಮಳೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಅಬ್ಬರಿಸುತ್ತಿದ್ದು, ಕನ್ನಡ ನಾಡು ಈಗ ಸಂಪೂರ್ಣ ಹಸಿರು ಹಸಿರಾಗಿ ಕಂಗೊಳಿಸುತ್ತಿದೆ. ಅದರಲ್ಲೂ ಬೆಟ್ಟ, ಪರ್ವತಗಳ ನಾಡು ಎಂದು ಗುರುತಿಸಿಕೊಂಡ ಕನ್ನಡ ನಾಡಿನ ಮಲೆನಾಡು ಭಾಗ ಪಶ್ಚಿಮ ಘಟ್ಟದಲ್ಲಿ ಸ್ವರ್ಗವೇ ಇದೀಗ ನಿರ್ಮಾಣ ಆಗಿದೆ. ಅದರಲ್ಲೂ ಈ ದೃಶ್ಯಗಳನ್ನ ಜನರು ತಮ್ಮ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ಕನ್ನಡ ನಾಡಿನ ಮಳೆ & ಪ್ರಕೃತಿ ಸೌಂದರ್ಯ ಇಡೀ ಜಗತ್ತಿಗೆ ಪಸರಿಸುತ್ತಿದೆ. ಆ ವಿಡಿಯೋ ನೋಡಲು ಮುಂದೆ ಓದಿ.

ಮುಂಗಾರು ಮಳೆಯೇ.. ಏನು ನಿನ್ನ..
ಮಳೆ ಆರ್ಭಟ ಸ್ವಲ್ಪ ದಿನಗಳ ಕಾಲ ಸೈಲೆಂಟ್ ಆಗಿತ್ತು, ಆದರೆ ಇದೀಗ ಮತ್ತೆ ಮುಂಗಾರು ಮಳೆ ಮೋಡಗಳು ಅಲರ್ಟ್ ಆಗಿ ಅಬ್ಬರಿಸುತ್ತಿವೆ. ಹೀಗಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಹೀಗಿದ್ದಾಗ ಕರ್ನಾಟಕದ ಮಲೆನಾಡು ಭಾಗ ಕೊಡಗು, ಚಿಕ್ಕಮಗಳೂರು & ಶಿವಮೊಗ್ಗ ಸೇರಿದಂತೆ ಅಕ್ಕಪಕ್ಕದ ಜಾಗಗಳಲ್ಲಿ ಈಗ ಸ್ವರ್ಗವೇ ಧರೆಗೆ ಇಳಿದಂತೆ ಕಾಣುತ್ತಿದೆ.
It's just
— Asha Shastry (@ShastryAsha) July 1, 2024
ಮಳೆ.. ಮಳೆ...ಮಳೆ...!#ನಮ್ಮೂರು #ನಮ್ಮನೆ pic.twitter.com/cIa8Y8Kfu8
ಕನ್ನಡ ನಾಡಿನ ಜನರು ಕೂಡ ಪ್ರಕೃತಿಯ ಸೌಂದರ್ಯ ಸವಿಯಲು ಈಗ ಟೂರ್ & ಟ್ರಿಪ್ ಅಂತಾ ಪ್ರೇಕ್ಷಣೀಯ ಸ್ಥಳಗಳಿಗೆ ಹೋಗುತ್ತಿದ್ದಾರೆ. ಅದರಲ್ಲೂ ಮಲೆನಾಡು ಭಾಗ ಜನಗಳಿಗೆ ಅತ್ಯಂತ ಮೆಚ್ಚಿನ ಜಾಗಗಳಾಗಿ ಪರಿವರ್ತನೆ ಆಗಿವೆ. ಕರ್ನಾಟಕ ಮಾತ್ರವಲ್ಲ, ಇಡೀ ಜಗತ್ತಿನ ಮೂಲೆ ಮೂಲೆಯಿಂದ ಕೂಡ ಜನರು ಮಲೆನಾಡು ಜಿಲ್ಲೆಗಳಿಗೆ ಬಂದು ಪ್ರಕೃತಿಯ ಜೊತೆಗೆ ಬೆರೆತು ಹೋಗುತ್ತಿದ್ದಾರೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications