ಮುಂಗಾರು ಆರಂಭ: 10 ದಿನಗಳಲ್ಲಿ ರಾಜ್ಯದಲ್ಲಿ 80% ರಷ್ಟು ಅಧಿಕ ಮಳೆ
ಬೆಂಗಳೂರು, ಜೂನ್. 11: ಈ ಬಾರಿ ರಾಜ್ಯ ಎಂದು ಕಂಡರಿಯದ ಬೇಸಿಗೆಯನ್ನು ಅನುಭವಿಸಿದೆ. ಸದ್ಯ ರಾಜ್ಯದಲ್ಲಿ ಮುಂಗಾರು ಪ್ರಾರಂಭದ ನಂತರ ಎಲ್ಲೆಡೆ ಮಳೆ ಸುರಿಯುತ್ತಿದೆ . ರಾಜಧಾನಿಯಲ್ಲಿ ದಿನವೂ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಆರಂಭವಾಗಿ ವಾಡಿಕೆಗಿಂತ ಕೇವಲ 10 ದಿನಗಳಲ್ಲಿ 80% ಹೆಚ್ಚುವರಿ ಮಳೆಯನ್ನು ದಾಖಲಿಸಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂಗಾರಿನಲ್ಲಿ ಸಾಮಾನ್ಯ ಮಳೆ 47.6 ಮಿಲಿ ಮೀಟರ್. ಆದರೆ, ಜೂನ್ 1 ರಿಂದ ರಾಜ್ಯದಲ್ಲಿ 85.6 ಮಿಮೀ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.

ದಕ್ಷಿಣ ಕನ್ನಡದಲ್ಲಿ 26%, 3% ಚಿಕ್ಕಮಗಳೂರಿನಲ್ಲಿ ಮತ್ತು ಕೊಡಗಿನಲ್ಲಿ 30% ನಷ್ಟು ಮಳೆ ಕೊರತೆ ದಾಖಲಿಸಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಕರಾವಳಿ ಕರ್ನಾಟಕದಲ್ಲಿ ಶೇ.25ರಷ್ಟು ಅಧಿಕ ಮಳೆ ದಾಖಲಾಗಿದೆ. 155.6 ಮಿಮೀ ವಾಡಿಕೆ ಮಳೆಗೆ ವಿರುದ್ಧವಾಗಿ, ಈ ಪ್ರದೇಶದಲ್ಲಿ 192.4 ಮಿಮೀ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ 140% ಅಧಿಕ ಮಳೆ ದಾಖಲಾಗಿದೆ. ಸಾಮಾನ್ಯ 33 ಮಿಮೀ ದಾಖಲಾಗುತ್ತಿದ್ದ ಪ್ರದೇಶದಲ್ಲಿ 79.3 ಮಿಮೀ ಮಳೆಯಾಗಿದೆ.
ದಕ್ಷಿಣ ಒಳನಾಡಿನಲ್ಲಿ 82% ಅಧಿಕ ಮಳೆ ದಾಖಲಾಗಿದೆ. ಸಾಮಾನ್ಯ 38.5 ಮಿಮೀ ಮಳೆಯಾಗುತ್ತಿದ್ದ ಪ್ರದೇಶದಲ್ಲಿ 70.2 ಮಿಮೀ ಮಳೆಯಾಗಿದೆ. ವಿಜಯಪುರದಲ್ಲಿ ಗರಿಷ್ಠ 329%, ಬೆಂಗಳೂರು ಗ್ರಾಮಾಂತರದಲ್ಲಿ 272% ಅಧಿಕ ಮಳೆ ದಾಖಲಾಗಿದೆ. ರಾಮನಗರ ಮತ್ತು ವಿಜಯನಗರದಲ್ಲಿ ಶೇ.222ರಷ್ಟು ಅಧಿಕ ಮಳೆ ದಾಖಲಾಗಿದೆ.
ಉಡುಪಿಯಲ್ಲಿ ಕನಿಷ್ಠ ಶೇ.5ರಷ್ಟು ಅಧಿಕ ಮಳೆ ದಾಖಲಾಗಿದೆ. 209.5% ಸಾಮಾನ್ಯ ಮಳೆಗೆ ವಿರುದ್ಧವಾಗಿ, ಜಿಲ್ಲೆಯಲ್ಲಿ 220.1% ದಾಖಲಾಗಿದೆ. ಹಾವೇರಿ ಮತ್ತು ಹಾಸನದಲ್ಲಿ ಶೇ.14ರಷ್ಟು ನಂತರದ ಸ್ಥಾನದಲ್ಲಿದೆ. ಬೆಂಗಳೂರು ನಗರ ಪ್ರದೇಶದಲ್ಲಿ ಶೇ.145ರಷ್ಟು ಅಧಿಕ ಮಳೆ ದಾಖಲಾಗಿದೆ.

ಜೂನ್ 1 ರಿಂದ 10ರವರೆಗೆ ಸಾಮಾನ್ಯ 37 ಮಿ.ಮೀ.ಗೆ ವಿರುದ್ಧವಾಗಿ, ರಾಜಧಾನಿಯಲ್ಲಿ 90.6 ಮಿ.ಮೀ. ಮಳೆಯಾಗಿದೆ. 2023 ರಲ್ಲಿ, ರಾಜ್ಯವು ಜೂನ್ 1 ರಿಂದ 14 ರವರೆಗೆ 66% ನಷ್ಟು ಕೊರತೆಯನ್ನು ದಾಖಲಿಸಿದೆ. ವಾಡಿಕೆಯಂತೆ 2023 ರಲ್ಲಿ 81.2 ಮಿ.ಮೀ ಬದಲು ರಾಜ್ಯದಲ್ಲಿ 27.4 ಮಿ.ಮೀ. ಮಳೆಯಾಗಿತ್ತು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications