ದಕ್ಷಿಣ ಕನ್ನಡದಲ್ಲಿ ನಿಲ್ಲದ ನೈತಿಕ ಪೊಲೀಸ್ಗಿರಿ, ಸರ್ಕಾರದ್ದು ಬರಿ ಭರವಸೆಯಷ್ಟೆಯೇ?
ಮಂಗಳೂರು, ನವೆಂಬರ್ 28: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿಯ ಘಟನೆ ನಡೆದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ನೈತಿಕ ಪೊಲೀಸ್ಗಿರಿಯನ್ನು ಹತ್ತಿಕ್ಕಲಾಗುವುದು ಎಂದು ಹೇಳಿದ್ದರೂ ಮತ್ತೆ ಮತ್ತೆ ಘಟನೆಗಳು ನಡೆದು ಸಾಮಾಜಿಕ ಸಾಮರಸ್ಯ ಹಾಳಾಗುತ್ತಲೇ ಇದೆ. ಆದರೆ ಸರ್ಕಾರ ಭರವಸೆ ಬರೀ ಭರವಸೆಯಾಗಿಯೇ ಉಳಿದಿದೆ.
ಮಂಗಳೂರಿನಲ್ಲಿ ಅನ್ಯ ಸಮುದಾಯದ ವ್ಯಕ್ತಿಯೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿ ಪ್ರಶ್ನಿಸಿದ ಇಬ್ಬರನ್ನು ನೈತಿಕ ಪೊಲೀಸ್ಗಿರಿ ಪ್ರಕರಣದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮಂಗಳೂರು ನಿವಾಸಿಗಳಾದ ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತಷ್ಟು ತನಿಖೆ ನಡೆಯುತ್ತಿದೆ.

ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮತ್ತು ಪುರುಷ ಘಟನೆಯ ಸಮಯದಲ್ಲಿ ಒಟ್ಟಿಗೆ ಮನೆಗೆ ಹೋಗುತ್ತಿದ್ದರು. ಆಗ ಆರೋಪಿಗಳಾದ ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಮಹಿಳೆ ಹಾಗೂ ಪುರುಷನನ್ನು ತಡೆದು ವಿಚಾರಣೆಗೊಳಪಡಿಸಿದ್ದರು. ಆರೋಪಿಗಳು ಅವರನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಹೋಗಿ ಮಾರ್ಗನ್ಸ್ ಗೇಟ್ ರಸ್ತೆಯ ಬಳಿ ತಡೆದು ಮಹಿಳೆಯನ್ನು ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಇರುವುದನ್ನು ಪ್ರಶ್ನಿಸಲು ಪ್ರಾರಂಭಿಸಿದರು. ಘಟನೆಯ ನಂತರ ಸಮುದಾಯದ ಪುರುಷರು ಸ್ಥಳದಲ್ಲಿ ಜಮಾಯಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಆಗಸ್ಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಹಿಂದೂ ಯುವತಿಯನ್ನು ತನ್ನ ವಾಹನದಲ್ಲಿ ಕರೆದೊಯ್ದ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತರು ಮುಸ್ಲಿಂ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿತ್ತು.

ಮಂಗಳೂರಿನಲ್ಲಿ ನೈತಿಕ ಪೊಲೀಸ್ಗಿರಿಯನ್ನು ತಡೆಗಟ್ಟಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರಸ್ತಾಪಿಸಿದ್ದ ಕೋಮುವಾದಿ ವಿರೋಧಿ ಘಟಕ ಕಾರ್ಯಾರಂಭ ಮಾಡಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಗುರುವಾರ ತಿಳಿಸಿದ್ದರು. ಜೂನ್ 13 ರಂದು ಆಯುಕ್ತರಿಂದ ಅಧಿಕೃತ ಆದೇಶ ಹೊರಡಿಸಿದಾಗ ವಿಶೇಷ ವಿಭಾಗವು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಹೀಗೆ ಕಾನೂನಿನ ಅಧಿಕಾರ ಇದ್ದರೂ ಅಧಿಕಾರಿಗಳು ಮಾತ್ರ ಸುಮ್ಮನಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ತರಲು ಸಂಘಪರಿವಾರ ಸೇರಿದಂತೆ ಹಲವು ಕೋಮುವಾದಿ ಶಕ್ತಿಗಳು ಉದ್ದೇಶಪೂರ್ವಕವಾಗಿ ಷಡ್ಯಂತ್ರ ನಡೆಸುತ್ತಿವೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರನ್ನು ಗಡಿಪಾರು ಮಾಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದರು.
ಕರಾವಳಿ ಭಾಗದಲ್ಲಿ ನಡೆಯುವ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದರು. ಕೋಮುಸೂಕ್ಷ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಪದೇ ಪದೇ ಧಕ್ಕೆಯಾಗುತ್ತಲೇ ಇದೆ. ಆದರೆ ಪೊಲೀಸ್ ಇಲಾಖೆ ಕ್ರಮ ಜರುಗಿಸುವಲ್ಲಿ ವಿಫಲವಾದಂತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications