Get Updates
Get notified of breaking news, exclusive insights, and must-see stories!

ಬೆಳಗಾವಿಯಲ್ಲಿ 100ಕ್ಕೂ ಹೆಚ್ಚು ಕರವೇ ಕಾರ್ಯಕರ್ತರ ಬಂಧನ

ಬೆಳಗಾವಿ, ಡಿಸೆಂಬರ್‌ 6: ಬೆಳಗಾವಿಗೆ ಮಹಾರಾಷ್ಟ್ರದ ಸಚಿವರ ಆಗಮನ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಪ್ರತಿಭಟನೆ ವೇಳೆ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರ ವಿರುದ್ಧ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕರ್ನಾಟಕದ ಬೆಳಗಾವಿ ಜಿಲ್ಲೆಗೆ ಮಹಾರಾಷ್ಟ್ರದ ಸಚಿವರು ತಮ್ಮ ಬಹು ಪ್ರಚಾರದ ಭೇಟಿಗೆ ಆಕ್ಷೇಪ ವ್ಯಕ್ತಪಡಿಸಿದರು. ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಗಡಿ ವಿವಾದದ ಕುರಿತು ಎಂಇಎಸ್‌ನ ಮುಖಂಡರೊಂದಿಗೆ ಸಭೆ ನಡೆಸಲು ಮಹಾರಾಷ್ಟ್ರದ ಸಚಿವರು ಮತ್ತು ಸಂಸದರು ರಾಜ್ಯಕ್ಕೆ ಪ್ರವೇಶಿಸದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದರು.

ಸಚಿವರ ಪ್ರವೇಶದ ಮೇಲಿನ ನಿಷೇಧವನ್ನು ಜಾರಿಗೆ ತರಲು ಪೊಲೀಸರು ಮಹಾರಾಷ್ಟ್ರಕ್ಕೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿದರು. ರಾಜ್ಯಕ್ಕೆ ವಿವಿಧ ವಾಹನಗಳಲ್ಲಿ ಬರುವ ಎಲ್ಲರ ರುಜುವಾತುಗಳನ್ನು ಪರಿಶೀಲಿಸಿದರು. ಅಹಿತಕರ ಘಟನೆಗಳು ನಡೆಯದಂತೆ ಮಹಾರಾಷ್ಟ್ರದ ಕಡೆಗೆ ಹೋಗುವ ರಸ್ತೆಗಳಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್, ಮಹಾರಾಷ್ಟ್ರ ಅಬಕಾರಿ ಸಚಿವ ಶಂಭುರಾಜ್ ದೇಸಾಯಿ ಮತ್ತು ಸಂಸದ ಧೈರ್ಯಶೀಲ ಮಾನೆ ಬೆಳಗಾವಿ ಜಿಲ್ಲೆಗೆ ಮಂಗಳವಾರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪಾಟೀಲ್ ಮತ್ತು ದೇಸಾಯಿ ಅವರು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ನೋಡಲ್ ಸಚಿವರಾಗಿದ್ದರು ಮತ್ತು ಮಾನೆ ಅವರು ಉನ್ನತ ಅಧಿಕಾರ ಸಮಿತಿಯ ಅಧ್ಯಕ್ಷರಾಗಿದ್ದರು.

ಹಿರೇಬಾಗೇವಾಡಿಯಲ್ಲಿ ಬಂಧನ

ಹಿರೇಬಾಗೇವಾಡಿಯಲ್ಲಿ ಬಂಧನ

ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಮಹಾರಾಷ್ಟ್ರ ಸಚಿವರು ತಮ್ಮ ಭೇಟಿಯನ್ನು ಮುಂದೂಡಿದ್ದಾರೆ. ಗಡಿ ಸಾಲಿನಲ್ಲಿ ಮಹಾರಾಷ್ಟ್ರದ ನಿಲುವಿನ ವಿರುದ್ಧ ಪ್ರತಿಭಟನೆ ನಡೆಸಲು ಬೆಳಗಾವಿಗೆ ತೆರಳುತ್ತಿದ್ದ ಕ.ರ.ವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಹಿರೇಬಾಗೇವಾಡಿಯಲ್ಲಿ ಬಂಧಿಸಲಾಯಿತು. ಈ ವೇಳೆ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ನೋಂದಣಿ ಸಂಖ್ಯೆ ಹೊಂದಿರುವ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದರು. ವಾಹನಗಳ ನಂಬರ್ ಪ್ಲೇಟ್‌ಗಳಿಗೆ ಕಪ್ಪು ಬಣ್ಣ ಬಳಿಯಲಾಗಿದ್ದು, ಕಲ್ಲು ತೂರಾಟದಲ್ಲಿ ಗಾಜುಗಳನ್ನು ಹಾಳು ಮಾಡಿ ಕನ್ನಡ ಧ್ವಜಗಳನ್ನು ಕಟ್ಟಲಾಗಿದೆ.

ಸಂಸದರ ಪ್ರವೇಶಕ್ಕೆ ನಿಷೇಧ

ಸಂಸದರ ಪ್ರವೇಶಕ್ಕೆ ನಿಷೇಧ

ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲು ಬಂದಿದ್ದ ಎಂಇಎಸ್‌ನ ಕಾರ್ಯಕರ್ತರನ್ನು ಜಿಲ್ಲಾಧಿಕಾರಿಗಳ ಆವರಣದಲ್ಲಿ ಬಂಧಿಸಲಾಯಿತು. ಅವರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರಿಂದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಮಹಾರಾಷ್ಟ್ರದ ಸಚಿವರು ಮತ್ತು ಸಂಸದರ ಪ್ರವೇಶವನ್ನು ನಿಷೇಧಿಸುವ ಮೂಲಕ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಅವರ ಜ್ಞಾಪಕ ಪತ್ರವನ್ನು ಸ್ವೀಕರಿಸಲಿಲ್ಲ.

ಕನ್ನಡಿಗರ ಸ್ವಾಭಿಮಾನವನ್ನು ಕೆಣುಕಬಾರದು

ಕನ್ನಡಿಗರ ಸ್ವಾಭಿಮಾನವನ್ನು ಕೆಣುಕಬಾರದು

ಮಹಾರಾಷ್ಟ್ರದ ಸಚಿವರು ಯಾವುದೇ ಕಾರಣಕ್ಕೂ ಕರ್ನಾಟಕದ ಗಡಿಯೊಳಗೆ ಬರಬಾರದು. ಕರ್ನಾಟಕದೊಳಗೆ ಬಂದು ಪ್ರಚೋದನಾತ್ಮಕ ಹೇಳಿಕೆಯನ್ನು ಕೊಡಬಾರದು. ಕನ್ನಡಿಗರ ಸ್ವಾಭಿಮಾನವನ್ನು ಕೆಣುಕಬಾರದು. ಕರ್ನಾಟಕವನ್ನು, ಕರ್ನಾಟಕ ಸರ್ಕಾರವನ್ನು, ಕರ್ನಾಟಕದ ಜನರನ್ನು ಹೀನಾಮಾನವಾಗಿ ಮಾತನಾಡಬಾರದು ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.

ಸರ್ಕಾರಕ್ಕೆ ನಾವು ಎಚ್ಚರಿಕೆ ಕೊಡುತ್ತೇವೆ

ಸರ್ಕಾರಕ್ಕೆ ನಾವು ಎಚ್ಚರಿಕೆ ಕೊಡುತ್ತೇವೆ

ಕನ್ನಡಿಗರ ಸ್ವಾಭಿಮಾನಕ್ಕೆ ಯಾರೂ ಧಕ್ಕೆ ತರಬಾರದು. ನಮ್ಮ ತಾಳ್ಮೆಯನ್ನು ಪರೀಕ್ಷೆ ಯಾರೂ ಮಾಡಬಾರದು. ಸುಖಾಸುಮ್ಮನೆ ಗೊಂದಲ ಸಹ ಬೇಡ ಎನ್ನುವ ಜಿಲ್ಲಾಡಳಿತಕ್ಕೆ ಹಾಗೂ ಸರ್ಕಾರಕ್ಕೆ ನಾವು ಎಚ್ಚರಿಕೆ ಕೊಡುತ್ತೇವೆ. ನೀವು ಮಹಾರಾಷ್ಟ್ರ ಸಚಿವರನ್ನು ತಡೆಯಲು ಆಗದಿದ್ದಲ್ಲಿ ನಾವು ಹಾಗೂ ನಮ್ಮ ಕಾರ್ಯಕರ್ತರು ತಡೆಯುವ ಕೆಲಸ ಮಾಡುತ್ತೇವೆ. ಇದು ನಮ್ಮ‌ ಸ್ವಾಭಿಮಾನ ಎಂದು ಎಚ್ಚರಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+