Karnataka Poll 2023: ಕಳೆದೊಂದು ಗಂಟೆಯಲ್ಲಿ ವೃದ್ಧರಿಂದಲೇ ಅತ್ಯಧಿಕ ಮತದಾನ
ಬೆಂಗಳೂರು, ಮೇ 10: ಕರ್ನಾಟಕ ರಾಜ್ಯ ಚುನಾವಣೆಗೆ ಇಂದು ಬುಧವಾರ ಮೇ 10ರಂದು ಬೆಳಗ್ಗೆ 7ಗಂಟೆಯಿಂದಲೇ ಮತದಾನ ನಡೆಯುತ್ತಿದೆ. ಕಳೆದ ಒಂದೇ (7am- 8am) ಗಂಟೆಯಲ್ಲಿ ರಾಜ್ಯಾದ್ಯಂತ ಬಿರುಸಿನ ಮತದಾನ ನಡೆದಿದೆ. ವಿಶೇಷ ವೆಂದರೆ ಮತದಾನ ಮಾಡಿದವರಲ್ಲಿ ಹಿರಿಯ ನಾಗರಿಕರ ಸಂಖ್ಯೆಯೇ ಅತ್ಯಧಿಕವಾಗಿದೆ.
ಒಂದು ಗಂಟೆಯಲ್ಲಿ ರಾಜ್ಯಾದ್ಯಂತ ಸುಮಾರು 11,000ಕ್ಕೂ ಹೆಚ್ಚು ಮಂದಿ ಯುವ ಮತದಾರರು ಮತದಾನ ಮಾಡಿದ್ದಾರೆ. ಸುಮಾರು 15,000ದಷ್ಟು ವೃದ್ಧರು ಮತ ಚಲಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ಳಂಬೆಳಗ್ಗೆಯೇ ಹಿರಿಯ ನಾಗರಿಕರು ಮತದಾನ ಮಾಡುವ ಮೂಲಕ ಯುವ ಮತದಾರರಿಗೆ ಸ್ಪೂರ್ತಿಯಾಗಿದ್ದಾರೆ. ವಿಜಯನಗರದಲ್ಲಿ ವೃದ್ಧರೊಬ್ಬರು ಕಳೆದ 55ವರ್ಷಗಳಿಂದ ಮತಗಟ್ಟೆ ತೆರೆಯುತ್ತಿದ್ದಂತೆ ಮೊದಲ ವೋಟ್ ತಾವೇ ಹಾಕುತ್ತಾ ಬಂದಿದ್ದು, ಇವತ್ತು ಸಹ ಮತದಾನ ಮಾಡಿದ ವ್ಯಕ್ತಿ ಅವರೇ ಆಗಿದ್ದಾರೆ.
ಬಳ್ಳಾರಿ ಮತ್ತು ಕೊಪ್ಪಳ್ಳದಲ್ಲಿ ಮತದಾನ ಆರಂಭವಾದ ಕೆಲವು ನಿಮಿಷಗಳಲ್ಲಿ ಮತಯಂತ್ರಗಳು ಕೈ ಕೊಟ್ಟವು. ಅಧಿಕಾರಿಗಳು ಮತದಾರರಲ್ಲಿ ಸಹಕರಿಸುವಂತೆ ಮನವಿ ಮಾಡಿದರು. ಆದಷ್ಟು ಶೀಘ್ರವೇ ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದರು. ಪರ್ಯಾಯ ಮತ ಯಂತ್ರಕ್ಕೂ ವ್ಯವಸ್ಥೆ ಮಾಡಲಾಯಿತು.

ಬಿರುಸಿನ ಮತದಾನ: ಎಂ.ಕೃಷ್ಣಪ್ಪ ನಡೆಗೆ ಜನ ಗರಂ
ಬೆಂಗಳೂರಿನ ವಿವಿಧೆಡೆ ಹಿರಿಯ ನಾಗರಿಕರ ಜೊತೆಗೆ ಚಿತ್ರರಂಗ ಕಲಾವಿದರು ಮತ ಚಲಾಯಿಸಿದ್ದಾರೆ. ಮಠಾಧೀಶರಾದ ಹರಿಹರದ ವಚನಾನಂದ ಶ್ರೀ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರಿ ಅವರು ಮತದಾನ ಮಾಡಿದ್ದಾರೆ. ಅಲ್ಲದೇ ರಾಜಕೀಯ ನಾಯಕರಾದ ಬಿ.ಎಸ್.ಯಡಿಯೂರಪ್ಪನವರ ಕುಟುಂಬ, ಡಾ.ಕೆ ಸುಧಾಕರ್, ಎಂ.ಕೃಷ್ಣಪ್ಪ ಇನ್ನಿತರರು ಸಹ ಕುಟುಂಬ ಸಮೇತರಾಗಿ ಬಂದು ಮತ ಹಾಕಿದ್ದಾರೆ. ಕೆಲವು ಮತದಾನಕ್ಕೂ ಮೊದಲು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರಿನ ಪದ್ಮನಾಭನಗರದಲ್ಲಿ ನಾಯಕ ಎಂ.ಕೃಷ್ಣಪ್ಪ ಅವರು ಸ್ವಕ್ಷೇತ್ರಕ್ಕೆ ತೆರಳಬೇಕು ಎಂಬ ಕಾರಣಕ್ಕೆ ಸರತಿ ಸಾಲಿನಲ್ಲಿ ನಿಲ್ಲದೇ ಬಂದು ಮತದಾನ ಮಾಡಿದ್ದಾರೆ. ಇದರಿಂದ ಕೆಲವು ಮತದಾರರು ಕಿರಿಕಿರಿ ಅನುಭವಿಸಿದ್ದಾರೆ. ಜನಪ್ರತಿನಿಧಿಯಾದ ನೀವೆ ಜನರಿಗೆ ಸಹಕರಿಸದಿದ್ದರೇ ಹೇಗೆ ಎಂದು ಎಂ.ಕೃಷ್ಣಪ್ಪ ಅವರ ನಡೆಗೆ ಗರಂ ಆಗಿದ್ದಾರೆ. ನಂತರ ಸ್ಥಳದಲ್ಲಿದ್ದ ಅಧಿಕಾರಿ, ಪೊಲೀಸ್ ಸಿಬ್ಬಂದಿ ಎಲ್ಲವನ್ನು ಶಾಂತಗೊಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications