ಜ್ಯೋತಿಷಿ ಗ್ರಹಣ ಭವಿಷ್ಯ: ಪ್ರಾಣ ಉಳಿಯಲು ಊರು ಬಿಟ್ಟ 60 ಕುಟುಂಬ
ಚಿಕ್ಕಮಗಳೂರು, ಜುಲೈ 27: ಚಂದ್ರ ಗ್ರಹಣ- ಸೂರ್ಯ ಗ್ರಹಣದಂದು ಜ್ಯೋತಿಷಿಗಳು ಹೇಳುವ ಆಚರಣೆ- ಪದ್ಧತಿ ಮತ್ತೊಂದನ್ನು ಗೇಲಿ ಮಾಡಿ, ಇವೆಲ್ಲ ಸಹಜ ವಿದ್ಯಮಾನ, ನೋಡುತ್ತಾ ಖುಷಿ ಪಡಬೇಕೇ ವಿನಾ ಹೆದರಬಾರದು ಎಂದು ಧೈರ್ಯ ಹೇಳುವ ಮಂದಿ ಇರುವ ಕಾಲ- ಸನ್ನಿವೇಶ ಹಾಗೂ ನೆಲದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ.
ಜ್ಯೋತಿಷಿಯ ಮಾತಿಗೆ ಹೆದರಿ ಹದಿನೈದು ವರ್ಷದಿಂದ ವಾಸವಾಗಿದ್ದ ಸ್ಥಳವನ್ನೇ ಅಲೆಮಾರಿ ಕುಟುಂಬಗಳು ತೊರೆದಿವೆ. ಹೀಗೆ ಜ್ಯೋತಿಷಿ ಮಾತು ಕೇಳಿ ಊರು ಬಿಟ್ಟು ಹೋಗಿರುವುದು ಒಂದೆರಡು ಕುಟುಂಬವಲ್ಲ. ಲೆಕ್ಕ ಹಾಕಿ ನೋಡಿದರೆ 60ಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳು ಊರು ತೊರೆದಿವೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗುವಾನಿ ಎಂಬಲ್ಲಿ ಈ ಘಟನೆ ನಡೆದಿದೆ. ಕಳೆದ ನಾಲ್ಕು ವರ್ಷದಿಂದ ಈ ಸ್ಥಳದಲ್ಲಿ 29 ಜನ ಮೃತ ಪಟ್ಟಿದ್ದರು. ನೀವು ಈ ಜಾಗದಲ್ಲಿ ಇದ್ದರೆ ಎರಡು ದಿನದಲ್ಲಿ ಮೂರು ಹೆಣ ಬೀಳುತ್ತವೆ ಎಂದ ಜ್ಯೋತಿಷಿ ಮಾತನ್ನು ಕೇಳಿ ಬೆಚ್ಚಿಬಿದ್ದಿದ್ದಾರೆ.

ಜ್ಯೋತಿಷಿ ಮಾತು ನಂಬಿದ ಅಲೆಮಾರಿ ಕುಟುಂಬಗಳು ಒಂದೇ ದಿನದಲ್ಲಿ ತಾವು ಸಾಕಿದ ಹಸು, ಮೇಕೆ, ಕೋಳಿ, ನಾಯಿ ಸೇರಿದಂತೆ ಗುಡಿಸಲು ಸಹ ಬಿಟ್ಟು ಗ್ರಾಮ ತೊರೆದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications