ದೌರ್ಜನ್ಯದ ವಿರುದ್ಧ ಸಜ್ಜಾಗುತ್ತಿದೆ ಅಮ್ಮಂದಿರ ಪಡೆ
ಮಂಗಳೂರು, ಸೆ. 11 : ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ತಡೆಗೆ ರಾಜ್ಯದ ಎಲ್ಲ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ತಾಯಂದಿರ ವೇದಿಕೆ ಸೃಷ್ಟಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಅಮಿತಾ ಪ್ರಸಾದ್ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೆ. 9ರಂದು ಮಹಿಳಾ ತರಬೇತಿ ಕೇಂದ್ರ ಏರ್ಪಡಿಸಿದ್ದ 'ಮಹಿಳಾ ದೌರ್ಜನ್ಯ ತಡೆ' ಕುರಿತ ಕಾರ್ಯಾಗಾರದಲ್ಲಿ ಮಾತನಾಡಿ, ಮಕ್ಕಳ ಮೇಲೆ ಪಾಲಕರ ಪರಿಣಾಮ ಗಾಢವಾಗಿರುತ್ತದೆ, ಅದರಲ್ಲೂ ಗಂಡು ಮಕ್ಕಳ ಮೇಲೆ ತಾಯಿ ಪ್ರಭಾವದ ವ್ಯಾಪ್ತಿ ದೊಡ್ಡದು ಎಂದರು.(ನಿರ್ಭಯಾ ನರ್ಸ್ ಮೇಲೆಯೂ ಗ್ಯಾಂಗ್ರೇಪ್)

ಯಾರು ತಾಯಿಗೆ ಗೌರವ ನೀಡುವುದಿಲ್ಲವೋ ಅವರು ಉತ್ತಮ ನಾಗರಿಕರಾಗಿ ಬೆಳೆಯಲು ಹೇಗೆ ಸಾಧ್ಯ? ಹಾಗಾಗಿ ತಾಯಂದಿರಿಗೆ ಮಕ್ಕಳ ಬೆಳವಣಿಗೆ ಬಗ್ಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು. ಇದರಿಂದ ಮುಂದೆ ಅಪರಾಧ ಪ್ರಕರಣಗಳನ್ನು ತಡೆಯಬಹುದಾಗಿದೆ ಎಂದರು.
2012 ರಲ್ಲಿ ತಿದ್ದುಪಡಿಯಾದ ಲೈಂಗಿಕ ದೌರ್ಜನ್ಯ ತಡೆ ಕಾನೂನು 1998ರ ಸುಪ್ರೀಂ ಕೋರ್ಟ್ ನಿರ್ದೇಶನಗಳಿಗಿಂತ ಶಕ್ತಿಯುತವಾಗಿದೆ. ಕೆಲವು ಕಡೆ ಮಹಿಳೆ ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವತಃ ತಾನೇ ದೌರ್ಜನ್ಯ ತಡೆಯಲು ಮುಂದೆ ಬರಬೇಕಾಗಿದೆ ಎಂದರು.(ವಿಕೃತ 'ರೇಪ್ ದಂಪತಿ' ಈಗ ಪೊಲೀಸ್ ಅತಿಥಿ)
15 ಕ್ಕಿಂತ ಹೆಚ್ಚು ಮಹಿಳೆಯರುಮ ಕೆಲಸ ಮಾಡುವ ಕಡೆಯಲ್ಲಿ ಒಂದು ದೂರು ಸ್ವೀಕಾರ ಸಮಿತಿಯನ್ನು ರಚಿಸಿಕೊಳ್ಳಬೇಕಾಗುತ್ತದೆ. ಸಾಮಾನ್ಯ ದೂರು ಸ್ವೀಕಾರಕ್ಕೆ ಕಚೇರಿಗಳಲ್ಲಿ ಈಗಾಗಲೇ ಸಮಿತಿ ನೇಮಕ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಜಿಲ್ಲಾ ಮಟ್ಟದಲ್ಲಿ ಸಮಾಜ ಸೇವೆಯಲ್ಲಿ ನಿರತರಾಗಿರುವ ಮಹಿಳಾ ಮುಖಂಡರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹಾಜರಿದ್ದರು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications