ದೌರ್ಜನ್ಯದ ವಿರುದ್ಧ ಸಜ್ಜಾಗುತ್ತಿದೆ ಅಮ್ಮಂದಿರ ಪಡೆ
ಮಂಗಳೂರು, ಸೆ. 11 : ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ತಡೆಗೆ ರಾಜ್ಯದ ಎಲ್ಲ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ತಾಯಂದಿರ ವೇದಿಕೆ ಸೃಷ್ಟಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಅಮಿತಾ ಪ್ರಸಾದ್ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸೆ. 9ರಂದು ಮಹಿಳಾ ತರಬೇತಿ ಕೇಂದ್ರ ಏರ್ಪಡಿಸಿದ್ದ 'ಮಹಿಳಾ ದೌರ್ಜನ್ಯ ತಡೆ' ಕುರಿತ ಕಾರ್ಯಾಗಾರದಲ್ಲಿ ಮಾತನಾಡಿ, ಮಕ್ಕಳ ಮೇಲೆ ಪಾಲಕರ ಪರಿಣಾಮ ಗಾಢವಾಗಿರುತ್ತದೆ, ಅದರಲ್ಲೂ ಗಂಡು ಮಕ್ಕಳ ಮೇಲೆ ತಾಯಿ ಪ್ರಭಾವದ ವ್ಯಾಪ್ತಿ ದೊಡ್ಡದು ಎಂದರು.(ನಿರ್ಭಯಾ ನರ್ಸ್ ಮೇಲೆಯೂ ಗ್ಯಾಂಗ್ರೇಪ್)

ಯಾರು ತಾಯಿಗೆ ಗೌರವ ನೀಡುವುದಿಲ್ಲವೋ ಅವರು ಉತ್ತಮ ನಾಗರಿಕರಾಗಿ ಬೆಳೆಯಲು ಹೇಗೆ ಸಾಧ್ಯ? ಹಾಗಾಗಿ ತಾಯಂದಿರಿಗೆ ಮಕ್ಕಳ ಬೆಳವಣಿಗೆ ಬಗ್ಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು. ಇದರಿಂದ ಮುಂದೆ ಅಪರಾಧ ಪ್ರಕರಣಗಳನ್ನು ತಡೆಯಬಹುದಾಗಿದೆ ಎಂದರು.
2012 ರಲ್ಲಿ ತಿದ್ದುಪಡಿಯಾದ ಲೈಂಗಿಕ ದೌರ್ಜನ್ಯ ತಡೆ ಕಾನೂನು 1998ರ ಸುಪ್ರೀಂ ಕೋರ್ಟ್ ನಿರ್ದೇಶನಗಳಿಗಿಂತ ಶಕ್ತಿಯುತವಾಗಿದೆ. ಕೆಲವು ಕಡೆ ಮಹಿಳೆ ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವತಃ ತಾನೇ ದೌರ್ಜನ್ಯ ತಡೆಯಲು ಮುಂದೆ ಬರಬೇಕಾಗಿದೆ ಎಂದರು.(ವಿಕೃತ 'ರೇಪ್ ದಂಪತಿ' ಈಗ ಪೊಲೀಸ್ ಅತಿಥಿ)
15 ಕ್ಕಿಂತ ಹೆಚ್ಚು ಮಹಿಳೆಯರುಮ ಕೆಲಸ ಮಾಡುವ ಕಡೆಯಲ್ಲಿ ಒಂದು ದೂರು ಸ್ವೀಕಾರ ಸಮಿತಿಯನ್ನು ರಚಿಸಿಕೊಳ್ಳಬೇಕಾಗುತ್ತದೆ. ಸಾಮಾನ್ಯ ದೂರು ಸ್ವೀಕಾರಕ್ಕೆ ಕಚೇರಿಗಳಲ್ಲಿ ಈಗಾಗಲೇ ಸಮಿತಿ ನೇಮಕ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಜಿಲ್ಲಾ ಮಟ್ಟದಲ್ಲಿ ಸಮಾಜ ಸೇವೆಯಲ್ಲಿ ನಿರತರಾಗಿರುವ ಮಹಿಳಾ ಮುಖಂಡರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹಾಜರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications