ವಾಹನ ಅಪಘಾತ: ಪರಿಹಾರ ಮೊತ್ತದಲ್ಲಿ ಜೀವವಿಮೆ ಕಡಿತಗೊಳಿಸುವಂತಿಲ್ಲ- ಹೈಕೋರ್ಟ್
ಬೆಂಗಳೂರು, ಅ.25. ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರವನ್ನು ನಿಗದಿ ಮೊತ್ತದಲ್ಲಿ ಅವರು ಜೀವ ವಿಮಾ ಯೋಜನೆ ಮತ್ತು ಪಾಲಿಸಿಗಳಿಂದ ಪಡೆದಿರುವ ಮೊತ್ತವನ್ನು ಕಡಿತಗೊಳಿಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ಇದರಿಂದಾಗಿ ವಿಮಾ ಕಂಪನಿಗಳು ಇನ್ನು ಮುಂದೆ ಪರಿಹಾರ ನಿಗದಿ ಮಾಡುವಾಗ ಸಂತ್ರಸ್ತರು ಎಲ್ ಐಸಿ ಮತ್ತಿತರ ವಿಮಾ ಕಂಪನಿಗಳಿಂದ ಪಡೆಯುವ ಮೊತ್ತವನ್ನು ಪರಿಗಣಿಸುವಂತಿಲ್ಲ.
ಈ ಕುರಿತಂತೆ ಸುಪ್ರೀಂಕೋರ್ಟ್ ಹಾಗೂ ಹಲವು ಹೈಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾ. ರಾಜೇಂದ್ರ ಬದಾಮಿಕರ್ ಅವರಿದ್ದ ಏಕಸದಸ್ಯಪೀಠ ಇತ್ತೀಚೆಗೆ ಈ ಆದೇಶವನ್ನು ನೀಡಿದೆ.
"ಕುಟುಂಬದ ಪಿಂಚಣಿ, ನಗದು ಉಳಿತಾಯ, ಷೇರುಗಳು ಮತ್ತು ನಿಶ್ಠಿತ ಠೇವಣಿ ಮತ್ತಿತರವುಗಳನ್ನು ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಪರಿಗಣಿಸುವಂತಿಲ್ಲ. ಅವುಗಳಿಗೂ ಪರಿಹಾರ ಮೊತ್ತಕ್ಕೂ ಸಂಬಂಧವಿಲ್ಲ. ಸಂತ್ರಸ್ತರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಪರಿಹಾರವನ್ನು ಒದಗಿಸಿಕೊಡಲೇಬೇಕು" ಎಂದು ಹೇಳಿರುವ ನ್ಯಾಯಾಲಯು ಯುನೈಟೆಡ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
ಬೆಂಗಳೂರಿನ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ(ಎಂಎಸಿಟಿ) ಮೈಂಡ್ ಟ್ರೀಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾಫ್ಟ್ ವೇರ ಎಂಜಿನಿಯರ್ ವಿಶಾಲ್ ಸಿಂಗ್ ಕುಟುಂಬಕ್ಕೆ 42,64,000 ರೂ. ಪರಿಹಾರವನ್ನು ಶೇ.9ರ ಬಡ್ಡಿ ಸೇರಿಸಿ ನೀಡಬೇಕೆಂದು ಆದೇಶಿಸಿತ್ತು.

ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ವಿಮಾ ಕಂಪನಿ, ಗುಂಪು ವಿಮೆಯಿಂದ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ಹಣ ಸಂದಾಯವಾಗಿದೆ. ಹಾಗಾಗಿ ಆ ಹಣವನ್ನು ಪರಿಹಾರದ ಮೊತ್ತದಿಂದ ಕಡಿತಕ್ಕೆ ಆದೇಶ ನೀಡಬೇಕೆಂದು ನ್ಯಾಯಾಲಯದ ಮೊರೆ ಹೋಗಿತ್ತು.
ಪ್ರಕರಣದ ಹಿನ್ನೆಲೆ:
2016ರ ಮೇ 31ರಂದು ರಾತ್ರಿ ಉತ್ತರಹಳ್ಳಿ ಕಡೆಗೆ ನೈಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಆತನ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿಶಾಲ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಆತ ಬದುಕುಳಿಯದೆ ಜೂ.5ಕ್ಕೆ ಕೊನೆಯುಸಿರೆಳೆದಿದ್ದನು. ಕುಟುಂಬದವರು 50 ಲಕ್ಷ ಪರಿಹಾರ ಕೋರಿ ಎಂಎಸಿಟಿ ಮೊರೆ ಹೋಗಿದ್ದರು. ಆತನಿಗೆ ಪ್ರತಿ ತಿಂಗಳು 26 ಸಾವಿರ ವೇತನವಿತ್ತು ಹಾಗಾಗಿ ಅಧಿಕ ಪರಿಹಾರ ನೀಡಬೇಕೆಂದು ಕೋರಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications