ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಲಸಿಗರನ್ನು ಕರೆ ತರಲು ಮೊದಲ ಹೆಜ್ಜೆ ಇಟ್ಟ ಕರ್ನಾಟಕ

|
Google Oneindia Kannada News

ಬೆಂಗಳೂರು, ಮೇ 01 : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ.

Recommended Video

ಬಿವೈ ರಾಘವೇಂದ್ರ ಮಾಡಿದ ಕೆಲಸಕ್ಕೆ ನಟ ಅರುಣ್ ಸಾಗರ್ ಹೇಳಿದ್ದೇನು? | B Y Ragvendra | Arun Sagar

ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ.

ವೇತನ ಕಡಿತ, ಕೆಲಸದಿಂದ ಕಿತ್ತು ಹಾಕಿದರೆ ಕಾರ್ಮಿಕರು ದೂರು ಕೊಡಿ ವೇತನ ಕಡಿತ, ಕೆಲಸದಿಂದ ಕಿತ್ತು ಹಾಕಿದರೆ ಕಾರ್ಮಿಕರು ದೂರು ಕೊಡಿ

ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಪ್ರಯಾಣಕ್ಕೆ ಅವಕಾಶ ನೀಡಿದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಹಲವರು ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿದ್ದಾರೆ. ವಿವಿಧ ರಾಜ್ಯಗಳು ಈ ಪ್ರಕ್ರಿಯೆಯನ್ನು ಆರಂಭಿಸಿವೆ.

ವಾವ್! ಕ್ವಾರಂಟೈನ್ ಕೇಂದ್ರದಲ್ಲಿ ಸುಮ್ಮನೆ ಕೂರಲಿಲ್ಲ ಈ ಕಾರ್ಮಿಕರುವಾವ್! ಕ್ವಾರಂಟೈನ್ ಕೇಂದ್ರದಲ್ಲಿ ಸುಮ್ಮನೆ ಕೂರಲಿಲ್ಲ ಈ ಕಾರ್ಮಿಕರು

Movement Of Stranded People With Conditions Karnataka Appoints Nodal Officers

ನೋಡಲ್ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿ ಸಿಲುಕಿರುವ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳನ್ನು ಕರೆತರಲು ಸೂಕ್ತ ವ್ಯವಸ್ಥೆ ಕಲ್ಪಿಸಲಿದ್ದಾರೆ. ಸಾರಿಗೆ ಸಂಸ್ಥೆಗಳ ಜೊತೆ ಚರ್ಚಿಸಿ ಬಸ್ ವ್ಯವಸ್ಥೆ ಮಾಡಲಿದ್ದಾರೆ.

ಪೌರ ಕಾರ್ಮಿಕರು, ಅಗತ್ಯ ಸೇವೆಗಾಗಿ ರಸ್ತೆಗಿಳಿದ ಕೆಎಸ್ಆರ್‌ಟಿಸಿ ಬಸ್ಪೌರ ಕಾರ್ಮಿಕರು, ಅಗತ್ಯ ಸೇವೆಗಾಗಿ ರಸ್ತೆಗಿಳಿದ ಕೆಎಸ್ಆರ್‌ಟಿಸಿ ಬಸ್

ಅಧಿಕಾರಿಗಳ ವಿವರ: ಐಎಎಸ್ ಅಧಿಕಾರಿ ಡಾ. ರಾಜ್ ಕುಮಾರ್ ಕತ್ರಿ ಮತ್ತು ಐಪಿಎಸ್ ಅಧಿಕಾರಿ ಅರುಣ್ ಜೇಜಿ ಚಕ್ರವರ್ತಿ ಹೊರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸಿಲುಕಿರುವ ರಾಜ್ಯದ ಜನರನ್ನು ಕರೆತರುವ ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ.

ಐಎಎಸ್ ಅಧಿಕಾರಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಐಪಿಎಸ್ ಅಧಿಕಾರಿ ಪಿ. ಎಸ್. ಸಂಧು ಕರ್ನಾಟಕದಿಂದ ಹೊರ ರಾಜ್ಯ/ಕೇಂದ್ರಾಡಳಿತ ಪ್ರದೇಶಕ್ಕೆ ಹೋಗುವ ಜನರ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ.

ಒಟ್ಟು 10 ರಾಜ್ಯಗಳ ಉಸ್ತುವಾರಿಯನ್ನು ಕರ್ನಾಟಕ ಸರ್ಕಾರ ಅಧಿಕಾರಿಗಳಿಗೆ ನೀಡಿದೆ. ಪ್ರತಿ ರಾಜ್ಯಕ್ಕೆ ಒಬ್ಬರು ಐಎಎಸ್ ಮತ್ತು ಒಬ್ಬರು ಐಎಎಸ್ ಅಧಿಕಾರಿಗಳು ಉಸ್ತುವಾರಿಯಾಗಿದ್ದಾರೆ.

English summary
Karnataka government appointed IAS and IPS officer as nodal officers for the take care of movement of migrant workers, tourists, students inter state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X