ಚಕ್ರವರ್ತಿ ಸೂಲಿಬೆಲೆ ಬೆನ್ನಿಗೆ ಭುಜಕೊಡುವ ಶಕ್ತಿ ಜೀವಂತವಿದೆ: ಕಾಂಗ್ರೆಸ್ಗೆ ನಟ ಜಗ್ಗೇಶ್ ತಿರುಗೇಟು
ಬೆಂಗಳೂರು, ಜೂನ್ 05: ಚಿಂತಕ ಮತ್ತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮತ್ತು ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಸಂಸದ ಮತ್ತು ನಟ ನವರಸನಾಯಕ ಜಗ್ಗೇಶ್ ಅವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಸಂಸದ ಮತ್ತು ನಟ ನವರಸನಾಯಕ ಜಗ್ಗೇಶ್ ಅವರು, ಸೂಲಿಬೆಲಿ ರವರು ಯಾವ ಅಧಿಕಾರದ ಹಿಂದೆ ಹೋಗದೆ ಸಾಂಸ್ಕೃತಿಕ ತತ್ವ ವಿಚಾರ,ಕೆರೆಕಟ್ಟೆ ಪುನರ್ಜೀವನ, ಪ್ರವಚನದಂತ ಸಾತ್ವಿಕ ಚಿಂತಕರು. ಅಧಿಕಾರ ಹಿಡಿದು ತಿಂಗಳು ಕಳೆದ ಕಾಂಗ್ರೆಸ್ನ ಸಚಿವ ಎಂ.ಬಿ.ಪಾಟೀಲ್ ಅವರು ಜೈಲಿಗೆ ಹಾಕುವೆ ಎಂದಿದ್ದಾರೆ.

ಇಲ್ಲಿಗೆ ಗೆದ್ದು ತಿಂಗಳಿಗೆ ಈ ಮಾತು ಸಚಿವರಾದ ಎಂ.ಬಿ. ಪಾಟೀಲ್ ಬಾಯಲ್ಲಿ ಬಂದಿದೆ. ಮಾನ್ಯರೆ ಕಾನೂನು ನಿಮ್ಮ ಜೇಬಲ್ಲಿ ಇದೆಯ? ಎಂದು ಪ್ರಶ್ನಿಸಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ಬೆನ್ನಿಗೆ ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ ಎನ್ನುವ ಮೂಲಕ ಕಾಂಗ್ರೆಸ್ಗೆ ಸಂಸದರು ತಿರುಗೇಟು ನೀಡಿದ್ದಾರೆ.
ಸೂಲಿಬೆಲಿ ರವರು ಯಾವ ಅಧಿಕಾರದ ಹಿಂದೆ ಹೋಗದೆ ಸಾಂಸ್ಕೃತಿಕ ತತ್ವ ವಿಚಾರ,ಕೆರೆಕಟ್ಟೆ ಪುನರ್ಜೀವನ,ಪ್ರವಚನದಂತ ಸಾತ್ವಿಕ ಚಿಂತಕ ಅವರನ್ನು ಜೈಲಿಗೆ ಹಾಕುವೆ ಎಂದರೆ ಅಲ್ಲಿಗೆ ಗೆದ್ದು ತಿಂಗಳಿಗೆ ಈ ಮಾತು ಸನ್ಮಾನ್ಯ MBಪಾಟೀಲ್ ಬಾಯಲ್ಲಿ!
— ನವರಸನಾಯಕ ಜಗ್ಗೇಶ್ (@Jaggesh2) June 5, 2023
ಮಾನ್ಯರೆ ಕಾನೂನು ನಿಮ್ಮ ಜೇಬಲ್ಲಿ ಇದೆಯ?ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ ಅವರ ಬೆನ್ನಿಗೆ!
ಇತ್ತೀಚೆಗೆ ತವರು ಜಿಲ್ಲೆ ವಿಜಯಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಜನರ ಭಾವನೆ ಕೆರಳಿಸುವ ಪ್ರಯತ್ನ ನಡೆಯಿತೇ ಹೊರತು, ಜನರ ಬದುಕು ಕಟ್ಟಿಕೊಡುವ ಕೆಲಸ ಆಗಲಿಲ್ಲ. ಅಭಿವೃದ್ಧಿ ಕೆಲಸವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಅಷ್ಟೇ ಅಲ್ಲದೇ ಚಕ್ರವರ್ತಿ ಸೂಲಿಬೆಲೆ ಮತ್ತು ಸಂಘ ಪರಿವಾರದವರು ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹಿಜಾಬ್, ಹಲಾಲ್ ಕಟ್, ಆಜಾನ್ ಸೇರಿದಂತೆ ಪಠ್ಯಪುಸ್ತಕದಲ್ಲಿ ಮಾಡಿರುವ ಅನಾಹುತವನ್ನು ಸರಿಪಡಿಸವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಲಿದೆ. ಕೋಮು ಸೌಹಾರ್ದತೆ ಕದಡಿದರೆ ಚಕ್ರವರ್ತಿ ಸೂಲಿಬೆಲೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications