ಡಿಕೆ ಸುರೇಶ್‌ ನಿದ್ದೆಗೆಡಿಸಿದ ಡಾಕ್ಟರ್‌; ಕಾಂಗ್ರೆಸ್‌ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ

ರಾಮನಗರ ಮಾರ್ಚ್ 28: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‌ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.

MP DK Suresh will Win This Time Too Says Siddaramaiah

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.

ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ ಎಂದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದರು.

ಹೀಗಾಗಿ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ ಎಂದರು.

CM siddaramaiah Said That MP DK Suresh will Win This Time Too

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+