'ಸಾಯುವವರೆಗೂ ನಾನು ವಿಶ್ವೇಶ್ವರ ಭಟ್ ಮತ್ತು ಮೋದಿಜಿ ನಿಷ್ಠ'
Recommended Video

ಮೈಸೂರು, ಜನವರಿ 19: "ಮೋದಿಜಿಯನ್ನು ಹೊಗಳಿ, ಸತತವಾಗಿ ಅವರ ಪರವಾಗಿ ಬರೆದ (2004, ಜೂನ್ 19ರಿಂದ) ಮೊದಲ ಕನ್ನಡ ಬರಹಗಾರ ಹಾಗು ಮೋದಿಜಿ ಆತ್ಮಚರಿತ್ರೆ ಬರೆದ ಮೊಟ್ಟಮೊದಲ ಲೇಖಕ ನಾನು. ಸಾಯುವವರೆಗೂ ನಾನು ವಿಶ್ವೇಶ್ವರ ಭಟ್ ಮತ್ತು ಮೋದಿಜಿ ನಿಷ್ಠ. ಜನವರಿ 27ಕ್ಕೆ ಹನುಮ ಜಯಂತಿ ಮೆರವಣಿಗೆ ಇದೆ. ಬಂದು ಕಣ್ಣಾರೆ ಕಂಡು ಆನಂದಿಸಿರಂತೆ. ವದಂತಿ ಬಿಡಿ."
ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಭಾರತೀಯ ಜನತಾ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಿದ್ದಾರೆ. ಪ್ರತಾಪ್ ಅವರನ್ನು ಸೆಳೆಯುವಲ್ಲಿ ಜೆಡಿಎಸ್ ಯುವ ನೇತಾರ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರು ಯಶಸ್ವಿಯಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದೆಲ್ಲವೂ ಶುದ್ಧ ಸುಳ್ಳು ಎಂದು ಫೇಸ್ ಬುಕ್ ಪೋಸ್ಟ್ ಮೂಲಕ ಸಂಸದ ಪ್ರತಾಪ್ ಸ್ಪಷ್ಟನೆ ನೀಡಿದ್ದಾರೆ.
ಹುಣಸೂರು ನಗರಸಭೆ ನೂತನ ಅಧ್ಯಕ್ಷರಾಗಿ ಜಾತ್ಯಾತೀತ ಜನತಾ ದಳ ಬೆಂಬಲಿತ ಅಭ್ಯರ್ಥಿ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಹುಣಸೂರು ನಗರಸಭಾಧ್ಯಕ್ಷರಾಗಿದ್ದ ಲಕ್ಷ್ಮಣ ಅವರನ್ನೂ ಅವಿಶ್ವಾಸ ಗೊತ್ತುವಳಿ ಮೂಲಕ ಪದಚ್ಯುತಗೊಳಿಸಲಾಗಿತ್ತು. ಹೀಗಾಗಿ ಹುಣಸೂರು ನಗರಸಭಾ ಗದ್ದುಗೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಜ್ವಲ್ ರೇವಣ್ಣ ಯಶಸ್ವಿಯಾಗಿದ್ದಾರೆ. ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ ಈ ಚುನಾವಣೆಯಲ್ಲಿ ಜೆಡಿಎಸ್ ಗೆ ಬೆಂಬಲಿಸಿದ್ದರು.

ಹೆದ್ದಾರಿಯಲ್ಲಿ ಗೋವುಗಳ ರಕ್ಷಣೆ ಮಾಡಿ ಸುದ್ದಿಯಾಗಿದ್ದ ಪ್ರತಾಪ್ ಅವರು ಮೈಸೂರಿಗೆ ಬಂದ ತಕ್ಷಣ ಎದುರಿಗೆ ಮಾಜಿ ಸಂಸದ ಅಡಗೂರು ಎಚ್ ವಿಶ್ವನಾಥ್ ಸಿಕ್ಕಿದ್ದಾರೆ. ಹಿರಿಯ ನಾಯಕರಿಗೆ ಮರ್ಯಾದೆ ನೀಡುವ ಸಲುವಾಗಿ ಅವರಿಗೆ ನಮಸ್ಕರಿಸಿದ್ದಾರೆ. ಇಬ್ಬರ ಫೋಟೋ ಸಾಮಾಜಿಕ ಜಾಲ ತಾಣಗಳನ್ನು ಸೇರಿದೆ.. ಹುಣಸೂರು ನಗರಸಭೆ ಫಲಿತಾಂಶ, ಪ್ರತಾಪ್ ಸಿಂಹ ಹಾಗೂ ವಿಶ್ವನಾಥ್ ಭೇಟಿ ಇಟ್ಟುಕೊಂಡು ಸುಳ್ಳು ಸುದ್ದಿ ಹಬ್ಬಿಸಿದ ಕೆಲವರು ಪ್ರತಾಪ್ ಅವರು ಜೆಡಿಎಸ್ ಸೇರುತ್ತಿದ್ದಾರೆ ಎಂದು ಸುದ್ದಿ ಹಬ್ಬಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿ, ವಿವರಿಸಿದ್ದು ಹೀಗೆ:
ಕಾಂಗ್ರೆಸ್ ಪಕ್ಷದಿಂದ ಸರಸ್ವತಿಪುರಂನ ಸೌರಭ ಸಿದ್ದರಾಜು ಮತ್ತು ರಂಗನಾಥ ಬಡಾವಣೆಯ ಜಾ.ದಳ ಬೆಂಬಲಿತ ಅಭ್ಯರ್ಥಿ ಎಂ.ಶಿವಕುಮಾರ್ ನಡುವೆ ಸ್ಪರ್ಧೆ ನಡೆಯಿತು. ಅಂತಿಮವಾಗಿ ಜೆಡಿಎಸ್ ನ ಶಿವಕುಮಾರ್ ಅವರು ಹುಣಸೂರು ಮುನ್ಸಿಪಾಲ್ ಕಾರ್ಪೊರೇಷನ್ ಅಧ್ಯಕ್ಷರಾದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications