CM Fight: ಸತೀಶ್ ಜಾರಕಿಹೊಳಿ ಸಿಎಂ ಆಗೋ ಬಗ್ಗೆ ಪುತ್ರಿ ಪ್ರಿಯಾಂಕ ಅಚ್ಚರಿ ಹೇಳಿಕೆ!
ರಾಜ್ಯ ರಾಜಕಾರಣದಲ್ಲಿ ಸದ್ಯ ಹೊಸ ಸಿಎಂ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರು ಜೋರಾಗಿ ಕೇಳಿಬರುತ್ತಿದೆ. ಹೈಕಮಾಂಡ್, ಬಿಜೆಪಿ ನಾಯಕರು ಹಾಗೂ ಕಾಂಗ್ರೆಸ್ನ ಹಲವು ಸಚಿವರನ್ನು ಸಾಲು ಸಾಲಾಗಿ ಭೇಟಿಯಾಗುತ್ತಿರುವ ಸತೀಶ್ ಜಾರಕಿಹೊಳಿ ಅವರ ಹೆಸರು ಸಿಎಂ ರೇಸ್ನಲ್ಲಿ ಮುನ್ನೆಲೆಗೆ ಬಂದಿದೆ.
ಮೊದಲಿಗೆ ದೆಹಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿಯಾಗಿ ಚರ್ಚೆಗೆ ಕಾರಣವಾಗಿದ್ದರು. ಅಲ್ಲಿಂದ ಬಂದ ನಂತರ ಮೊನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಜಾರಕಿಹೊಳಿ ಭೇಟಿಯಾಗುವ ಮೂಲಕ ಮತ್ತಷ್ಟು ಕುತೂಹಲ ಹೆಚ್ಚಿಸಿದರು. ಇದಾದ ನಂತರ ಕಾಂಗ್ರೆಸ್ನ ಹಲವು ನಾಯಕರನ್ನು ಭೇಟಿಯಾದ ಸತೀಶ್ ಅವರು ಸಿಎಂ ಕುರ್ಚಿಗೆ ಕರ್ಚೀಫ್ ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದೀಗ ಸತೀಶ್ ಅವರ ಪುತ್ರಿ ಹಾಗೂ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕೂಡ ತಂದೆ ಮುಖ್ಯಮಂತ್ರಿ ಆಗುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ನಮ್ಮ ತಂದೆಯವರು ಮುಖ್ಯಮಂತ್ರಿ ಆಗಬೇಕು ಎನ್ನುವುದು ಹಲವರ ಕನಸು. ಹಲವು ವರ್ಷಗಳಿಂದ ನಮ್ಮ ತಂದೆ ಸಿಎಂ ಆಗಬೇಕೆಂದು ಅವರ ಅಭಿಮಾನಿಗಳು ಅಭಿಯಾನ ನಡೆಸುತ್ತಲೇ ಇದ್ದಾರೆ ಎಂದು ಬ್ಯಾಟಿಂಗ್ ಬೀಸಿದ್ದಾರೆ.
ನಮ್ಮ ತಂದೆಯವರು ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸೋ ಅಗತ್ಯವಿಲ್ಲ. ತಂದೆಯವರು ಆಗಾಗ ದೆಹಲಿ ನಾಯಕರನ್ನು ಭೇಟಿಯಾಗುತ್ತಲೇ ಇರುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವಿಚಾರವಾಗಿ ನಿನ್ನೆ ಮಾತನಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು, ನಾವು ಸಭೆ ಸೇರಿದ ವಿಚಾರವಾಗಿ ಯಾರೂ ಹೆದರಬೇಕಾಗಿಲ್ಲ. ಎಲ್ಲ ಬೆಳವಣಿಗೆಗಳನ್ನು ಹೈಕಮಾಂಡ್ ಗಮನಿಸುತ್ತಲೇ ಇದೆ. ಪ್ರತಿಯೊಬ್ಬರಿಗೂ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇದ್ದೇ ಇರುತ್ತದೆ ಎಂದಿದ್ದರು.
ಎಲ್ಲರಿಗೂ ಮೊದಲಿಗೆ ಸಚಿವನಾಗಬೇಕು, ಆಮೇಲೆ ಡಿಸಿಎಂ, ಬಳಿಕ ಸಿಎಂ, ಕೊನೆಗೆ ಕೇಂದ್ರ ಸಚಿವರಾಗಬೇಕು ಅನ್ನೋ ಆಸೆ ಇದ್ದೇ ಇದೆ. ಆದರೆ, ಸದ್ಯಕ್ಕೆ ಸಿಎಂ ರೇಸ್ನ ವಾತಾವರಣ ಇಲ್ಲಿಲ್ಲ. ಮುಡಾ ತನಿಖೆ ಪ್ರಗತಿಯಲ್ಲಿದ್ದು, ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಹೇಳಿದ್ದರು.

ಪ್ರತಿ ಬಾರಿ ಹೈಕಮಾಂಡ್ ನಾಯಕರು ಬೆಂಗಳೂರಿಗೆ ಬಂದಾಗ ಏರ್ಪೋರ್ಟ್ ರಸ್ತೆಯುದ್ದಕ್ಕೂ ಬ್ಯಾನರ್ ಹಾಕಿಸಿಕೊಂಡು ಸ್ವಾಗತಿಸುವ ತಮ್ಮದೇ ಪಕ್ಷದ ನಾಯಕರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದರು. ನಾವು ದಿನದಲ್ಲಿ ಹೆಚ್ಚು ಸಮಯವನ್ನು ಪಕ್ಷಕ್ಕೇ ನೀಡುತ್ತಿದ್ದು, ಕೆಲವರು ಪಕ್ಷಕ್ಕಾಗಿ ಎಲೆಮರೆಯ ಕಾಯಿಯಂತೆ ದುಡಿಯುತ್ತಿದ್ದಾರೆ ಎಂದು ಸತೀಶ್ ಹೇಳಿದ್ದರು.
ಹಾಗಾಗಿ ಪಕ್ಷದ ವಿಚಾರದಲ್ಲಿ ಕೆಲವರು ಮಾತ್ರ ಗುರುತಿಸಿಕೊಳ್ಳುತ್ತಾರೆ. ಇನ್ನೂ ಕೆಲವರು ಹೈಲೈಟ್ ಆಗಲ್ಲ. ಆದರೆ, ಕೆಲವರು ಏರ್ಪೋರ್ಟ್ ರಸ್ತೆಯುದ್ದಕ್ಕೂ ಬ್ಯಾನರ್, ಪೋಸ್ಟರ್ಗಳನ್ನು ಹಾಕಿಸಿಕೊಂಡು ಹೈಲೈಟ್ ಆಗುವವರೂ ಇದ್ದಾರೆ. ಆದರೆ, ಹಳ್ಳಿಗಳಲ್ಲಿ ಸ್ವಂತ ದುಡ್ಡಿನಿಂದ ಪಕ್ಷ ಬೆಳೆಸುವವರು ಕಣ್ಣಿಗೆ ಕಾಣುವುದೇ ಇಲ್ಲ ಎಂದು ಸತೀಶ್ ಜಾರಕಿಹೊಳಿ ಸಿಡಿದಿದ್ದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications