ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಟಾಳ್ ನಾಗರಾಜ್ ಒಬ್ಬರೇ ಕನ್ನಡ ಅಭಿಮಾನಿ ಅಲ್ಲ

|
Google Oneindia Kannada News

ಬೆಂಗಳೂರು, ನವೆಂಬರ್ 22 : " ವಾಟಾಳ್ ನಾಗರಾಜ್ ಒಬ್ಬರೇ ಕನ್ನಡ ಅಭಿಮಾನಿಯಲ್ಲ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ನನ್ನ ಭಾಷೆಯಲ್ಲಿ ಉತ್ತರಿಸುತ್ತೇನೆ" ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ವಾಟಾಳ್ ನಾಗರಾಜ್‌ಗೆ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ರೇಣುಕಾಚಾರ್ಯ, "ಕನ್ನಡ ಪರ ಸಂಘಟನೆಗಳ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಯನ್ನು ನಾನು ಸಮರ್ಥಿಸಿಕೊಳ್ಳುವೆ. ಅವರು ಸರಿಯಾಗಿ ಹೇಳಿದ್ದಾರೆ" ಎಂದರು.

ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ? ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?

"ಯಡಿಯೂರಪ್ಪ ಅವರ ವಯಸ್ಸು, ಅವರ ರಾಜಕೀಯ ಅನುಭವ ಏನು?. ಅವರಿಗೆ ವಾಟಾಳ್ ನಾಗರಾಜ್ ನೀತಿ ಪಾಠ ಹೇಳುತ್ತಾರೆ. ನೀವು ಎಷ್ಟು ಸಲ ಜನರಿಂದ ಆಯ್ಕೆಯಾಗಿದ್ದೀರಿ?" ಎಂದು ರೇಣುಕಾಚಾರ್ಯ ಪ್ರಶ್ನಿಸಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ

MP Renukacharya Verbal Attack On Vatal Nagaraj

"ನಿಮಗೆ ಮಾತ್ರ ಕನ್ನಡ ಭಾಷೆನಾ?, ಅಭಿಮಾನವೇ?. ಅಚ್ಚ ಕನ್ನಡಿಗರು ನಾವು. ಹಳ್ಳಿಯಲ್ಲಿ ಹುಟ್ಟಿ ಬೆಳೆದು ಜನರ ನಡುವೆ ಪ್ರತಿನಿತ್ಯ ಕನ್ನಡ ಬಳಕೆ ಮಾಡುತ್ತಿರುವವರು ನಾವು" ಎಂದು ವಾಟಾಳ್ ನಾಗರಾಜ್‌ರನ್ನು ತರಾಟೆಗೆ ತೆಗೆದುಕೊಂಡರು.

ಮರಾಠ ಸಮಾಜದ ಹಿತ ಕಾಪಾಡಲು ರಾಜ್ಯ ಬಿಜೆಪಿ ಸರ್ಕಾರ ಬದ್ಧ!ಮರಾಠ ಸಮಾಜದ ಹಿತ ಕಾಪಾಡಲು ರಾಜ್ಯ ಬಿಜೆಪಿ ಸರ್ಕಾರ ಬದ್ಧ!

"ಮುಖ್ಯಮಂತ್ರಿಗಳ ಬಗ್ಗೆ ಬಳಸುವ ಭಾಷೆ ಬಗ್ಗೆ ನಾಲಿಗೆ ಮೇಲೆ ಹಿಡಿತವಿರಲಿ. ಕನ್ನಡ ಭಾಷೆ ಬಗ್ಗೆ ಯಡಿಯೂರಪ್ಪ ಅವರಿಗೆ ಇರುವ ನೈತಿಕತೆ ಪ್ರಶ್ನೆ ಮಾಡುವ ಹಕ್ಕು ನಿಮಗೆ ಇಲ್ಲ. ಇನ್ನೊಮ್ಮೆ ಮಾತನಾಡಿದರೆ ನಾನು ನನ್ನ ಭಾಷೆಯಲ್ಲಿ, ದಾಟಿಯಲ್ಲಿ ಉತ್ತರ ಕೊಡುವೆ" ಎಂದು ರೇಣುಕಾಚಾರ್ಯ ಹೇಳಿದರು.

ಕನ್ನಡ ಒಕ್ಕೂಟ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕರ್ನಾಟಕ ಸರ್ಕಾರ ಮರಾಠಾ ಅಭಿವೃದ್ಧಿ ನಿಗಮ ರಚನೆ ಆದೇಶ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಬಂದ್ ಕರೆ ನೀಡಲಾಗಿದೆ. ಬಂದ್ ಮಾಡದಂತೆ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ.

Recommended Video

ಡಿಸೆಂಬರ್ ಅಂತ್ಯದವರೆಗೂ ಕರ್ನಾಟಕದಲ್ಲಿ ಶಾಲೆ ಆರಂಭ ಇಲ್ಲ | Oneindia Kannada

"ನಾವು ನೀಚ ಕೆಲಸ ಮಾಡೋದಿಲ್ಲ. ನಾವು ಬಂದ್‌ನಿಂದ ಹಿಂದೆ ಸರಿಯುವಂತೆ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪಗೆ ನೀಚ ಬುದ್ಧಿ ಇದೆ" ಎಂದು ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದರು.

English summary
Honalli MLA and BJP leader M. P. Renukacharya verbal attack on Kannada Okkuta president Vatal Nagaraj on the issue of Karnataka bandh on December 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X