'Highways: ದಶಕಗಳಿಂದಲೂ ಅಭಿವೃದ್ಧಿ ಕಾಣದ ಲಕ್ಷ್ಮೇಶ್ವರ-ಗದಗ ರಾಜ್ಯ ಹೆದ್ದಾರಿ ದುರಸ್ತಿಗೆ ಹಣ ನೀಡಿ'
ಗದಗ: ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸಲಾಗುತ್ತಿದೆ. ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಈ ಭಾಗದಲ್ಲಿ ನಿರೀಕ್ಷಿತ ಅಭಿವೃದ್ಧಿಗಳು ವರ್ಷಗಳಿಂದಲೂ ಆಗುತ್ತಿಲ್ಲ ಎಂಬ ಮಾತಿದೆ. ಇದಕ್ಕೆ ಸಾಕ್ಷಿ ಎಂಬಂತಿದೆ ಲಕ್ಷ್ಮೇಶ್ವರ-ಗದಗ ರಸ್ತೆ. ಹಿರಿಯ ರಾಜಕಾರಣಿಗಳು ಈ ಭಾಗದಲ್ಲಿದ್ದರೂ ಸಹಿತ ದಶಕಗಳಿಂದಲೂ ಈ ರಸ್ತೆ ಪ್ಯಾಚ್ ವರ್ಕ್ ಕಾಣುತ್ತಿದೆ ಹೊರತು ಪರಿಪೂರ್ಣ ಅಭಿವೃದ್ಧಿ ಕಂಡಿಲ್ಲ. ಇದೀಗ ಈ ರಸ್ತೆ ಅಭಿವೃದ್ಧಿಗೆ ರಾಜ್ಯ ಸಚಿವರಿಗೆ ಸಂಸದರ ಪತ್ರ ಮುಖೇನ ಒತ್ತಾಯಿಸಿದ್ದಾರೆ.
ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯ (State Highway) ಲಕ್ಷ್ಮೇಶ್ವರ-ಗದಗ 221.50 ಕಿಲೋ ಮೀಟರ್ ಉದ್ದದ 227.50 ಕಿಲೋ ಮೀಟರ್ ವರೆಗೆ ಸಂಪೂರ್ಣ ಹಾಳಾಗಿದೆ. ಈ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 9.50 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಪತ್ರ ಬುಧವಾರ ಬರೆದು ಒತ್ತಾಯಿಸಿದ್ದಾರೆ.

ಗದಗ ಜಿಲ್ಲೆಯ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ ಲೋಕೋಪಯೋಗಿ ಇಲಾಖೆಯ ಮುಖ್ಯ ರಸ್ತೆಯಾಗಿದೆ. ಈ ರಸ್ತೆಯು ಸಂಪೂರ್ಣ ಹಾಳಾಗಿದೆ. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅತ್ಯಂತ ತೊಂದರೆಯಾಗಿದೆ. ಈ ರಸ್ತೆ ಸುಧಾರಣೆಗೆ 9.80 ಕೋಟಿ ರೂ. ಅನುದಾನ ನೀಡಬೇಕು. ಹಣದಲ್ಲಿ ರಸ್ತೆ ಅಭಿವೃದ್ಧಿಗೊಳಿಸಲು ಅವರು ಕೋರಿದ್ದಾರೆ.
40 ವರ್ಷಗಳಿಂದ ಅಭಿವೃದ್ಧಿ ಕಂಡಿಲ್ಲ
ಸಂಸದರು ನೀಡಿರುವ ಮಾಹಿತಿ ಪ್ರಕಾರ, ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಹಾಳಾಗಿದೆ. ಅಲ್ಲಲ್ಲಿ ರಸ್ತೆಗುಂಡಿ, ಹಂಪ್ಗಳು ಇಲ್ಲ, ಸಂಚಾರ ಸಿಗ್ನಲ್ ಫಲಕಗಳು ಕಾಣೆಯಾಗಿವೆ. ಈ ಹೆದ್ದಾರಿ ಪೈಕಿ ಗದಗ-ಲಕ್ಷೇಶ್ವರ 40 ಕಿಲೋ ಮೀಟರ್ ಉದ್ದದ ರಸ್ತೆಯಂತೂ ಹೇಳತೀರದಂತೆ ಹಾಳಾಗಿದೆ. ಸ್ಥಳೀಯರ ಪ್ರಕಾರ, ಸುಮಾರು 40 ವರ್ಷಗಳಿಂದಲೂ ಪೂರ್ಣವಾಗಿ ರಸ್ತೆ ಅಭಿವೃದ್ಧಿಯೇ ಆಗಿಲ್ಲ. ಬರೀ ದೊಡ್ಡ ದೊಡ್ಡ ರಸ್ತೆ ಗುಂಡಿ ಮುಚ್ಚುವುದು, ಪ್ಯಾಚ್ ಮಾಡುತ್ತಲೇ ಬಂದಿದ್ದಾರೆ.
ಅಭಿವೃದ್ಧಿ ಇಚ್ಛಾಶಕ್ತಿ ಇಲ್ಲದ ನಾಯಕರಿಂದ ರಸ್ತೆ ನಿರ್ಲಕ್ಷ್ಯ
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಈ ಗದಗ-ಲಕ್ಷೇಶ್ವರ ರಸ್ತೆ ಬರುತ್ತದೆ. ಮುಖ್ಯವಾಗಿ ಈ ರಸ್ತೆ ಎರಡು ವಿಧಾನಸಭಾ ಕ್ಷೇತ್ರಗಳ ಗಡಿಗೆ ಹೊಂದಿಕೊಂಡಿದೆ. ಈ ಕಾರಣಕ್ಕೆ ಏನೋ ದಶಕಗಳಿಂದ ಇಲ್ಲಿನ ರಸ್ತೆ ಮೂಲಸೌಕರ್ಯ ಅಭಿವೃದ್ಧಿ ಮರಿಚಿಕೆ ಆಗಿದೆ. ಗದಗ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ನಿರಂತರವಾಗಿ ಆರಿಸಿ ಬರುವ ಹಿರಿಯ ರಾಜಕಾರಣಿ ಎಚ್.ಕೆ.ಪಾಟೀಲ್ ಹಾಗೂ ಶಿರಹಟ್ಟಿ ಕ್ಷೇತ್ರದ ಪ್ರತಿನಿಧ ಚಂದ್ರು ಲಮಾಣಿ ಅವರು ಈ ರಾಜ್ಯ ಹೆದ್ದಾರಿ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ.
ರಾಜಕೀಯ ಕಾರಣಗಳು ಹಾಗೂ ಇಲ್ಲಿನ ರಾಜಕೀಯ ನಾಯಕರಲ್ಲಿನ ಇಚ್ಛಾಶಕ್ತಿ ಕೊರತೆಯಿಂದಾಗಿ ಈ 40 ಕಿಲೋ ಮೀಟರ್ ರಸ್ತೆ ದಶಕಗಳಿಂದಲೂ ಅಭಿವೃದ್ಧಿ ಕಂಡಿಲ್ಲ. ಇದರಿಂದ ದೊಡ್ಡ ದೊಡ್ಡ ತಗ್ಗುಗಳನ್ನು ಪ್ರತಿ ವರ್ಷ ಮುಚ್ಚಿ ಪ್ಯಾಚ್ ವರ್ಕ್ ಮಾಡಲಾಗುತ್ತಿದೆ. ಇದರಿಂದ ರೋಸಿ ಹೋಗಿರುವ ಸ್ಥಳೀಯರು ಇಲ್ಲಿನ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆ ಹಾಳಾಗಿದ್ದರಿಂದ ಬೇಸಿಗೆಯಲ್ಲಿ ಧೂಳು ಏಳುತ್ತದೆ. ಮಳೆಗಾಲದಲ್ಲಿ ದೊಡ್ಡ ದೊಡ್ಡ ತಗ್ಗುಗಳಲ್ಲಿ ನೀರು ನಿಂತು ಸಮಸ್ಯೆ ಉಂಟಾಗುತ್ತದೆ. ಇದಕ್ಕೆ ಕೊನೆ ಯಾವಾಗ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇಂತಹ ಸಮಸ್ಯೆ ಗದಗ-ಲಕ್ಷ್ಮೇಶ್ವರಕ್ಕೆ ಸೀಮಿತವಾಗದೇ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳ ಕೆಲ ರಾಜ್ಯ ಹೆದ್ದಾರಿಗಳು, ಗ್ರಾಮಗಳ ರಸ್ತೆಗಳ ಸ್ಥಿತಿ ಇದೇ ರೀತಿ ಇದೆ. ಚುನಾವಣೆ ವೇಳೆ ಮನೆಬಾಗಿಲಿಗೆ ಬರುವ ಇಲ್ಲಿನ ಜನನಾಯಕರು ಜನರ ಸಂಚಾರ ಸಮಸ್ಯೆ ಆಲಿಸಬೇಕಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications