PM Modi Mandya Visit: ಪ್ರಧಾನಿ ಮೋದಿಗೆ ಸುಮಲತಾ ಬೆಲ್ಲದ ಉಡುಗೊರೆ
ಬೆಂಗಳೂರು, ಮಾರ್ಚ್ 12: ಭಾನುವಾರ ಮಾರ್ಚ್ 12 ರಂದು ಸಕ್ಕರೆ ನಾಡಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂಡ್ಯದ ಸಂಸದೇ ಸುಮಲತಾ ಅಂಬರೀಶ್ ಅವರು ವಿಶೇಷ ಉಡುಗೊರೆಯೊಂದನ್ನು ನೀಡಿದರು.
ಹೆಸರೇ ಹೇಳುವಂತೆ ಮಂಡ್ಯ ಸಕ್ಕರೆನಾಡು. ಇಲ್ಲಿ ಕಬ್ಬನ್ನು ಹೆಚ್ಚು ಬೆಳೆಯಲಾಗುತ್ತದೆ. ಆ ಕಬ್ಬಿನಿಂದ ಸಂಸ್ಕರಿಸಿ ತೆಗೆದ ಉತ್ತಮ ಗುಣಮಟ್ಟದ 'ಬೆಲ್ಲ'ವನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಲೆಂದು ವಿಶೇಷವಾಗಿ ಪ್ಯಾಕ್ ಬೆಳಗ್ಗೆಯೇ ಮಾಡಿಸಿದ್ದರು. ಬಿದರಿನ ಸಣ್ಣ ಬುಟ್ಟಿಯಲ್ಲಿ ಅಲಂಕೃತ ಕವರಿನಲ್ಲಿ ಸಣ್ಣ ಸಣ್ಣ ಬೆಲ್ಲದ ತುಣಕುಗಳ ಸಹಿತ ಸಂಸದೇ ಸುಮಲತಾ ಮಂಡ್ಯ ತಲುಪಿದರು.

ಬೆಂಗಳೂರಿನಿಂದ ಆರಂಭವಾದ ಅವರ ಪ್ರಯಾಣ, ಮದ್ದೂರು ಮಾರ್ಗವಾಗಿ ಮಂಡ್ಯ ತಲುಪಿದರು. ವೇದಿಕೆ ಕಾರ್ಯಕ್ರಮದಲ್ಲಿ ಸಂಸದೆ ಪ್ರಧಾನಮಂತ್ರಿಗಳಿಗೆ ಮಂಡ್ಯದ ದೇಶಿಯ ಉತ್ಪನ್ನವನ್ನು ಗಿಫ್ಟ್ ನೀಡಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಅಭ್ಯರ್ಥಿಗಳನ್ನು ಹಾಕದೇ ಬಿಜೆಪಿ ಸುಮಲತಾರನ್ನು ಬೆಂಬಲಿಸಿತ್ತು. ಇದಾದ ಬಳಿಕ ಅವರು ಬಿಜೆಪಿ ಸೇರುವ ಬಗ್ಗೆಯು ಮಾತುಗಳು ಕೇಳಿ ಬಂದಿದ್ದವು. ಈ ನಡುವೆ ಮೊನ್ನೆಯಷ್ಟೇ ಸ್ವಕ್ಷೇತ್ರ ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಂಸದೇ ಸುಮಲತಾ ತಾವು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಬೆಂಬಲಿಸುವುದಾಗಿ ಬಹಿರಂಗವಾಗಿ ಹೇಳಿದ್ದರು. ಇದೇ ವೇಳೆ ಜೆಡಿಎಸ್ ನ ಎಚ್.ಡಿ ಕುಮಾರಸ್ವಾಮಿ ಅವರ ವಿರುದ್ಧವು ವಾಗ್ದಾಳಿ ನಡೆಸಿದ್ದರು.
ಜೆಡಿಎಸ್ಗೆ ಆತಂಕ
ಇದಾದ ಬೆನ್ನಲ್ಲೇ ಈಗ ಮೋದಿ ಕರ್ನಾಟಕದ ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿಗಳಿಗೆ ಉಡುಗೊರೆಯಾಗಿ ಬೆಲ್ಲ ನೀಡಲಾಗುತ್ತಿದೆ. ಚುನಾವಣೆ ವೇಳೆ ಸಂಸದೇ ಜೊತೆಗೆ ಜೆಡಿಎಸ್ ನಾಯಕರು ತೆರಳದಂತೆ ರಣತಂತ್ರ ರೂಪಿಸಿರುವ ಜೆಡಿಎಸ್ ಗೆ ಜಿಲ್ಲೆಯಲ್ಲಿ ತಮ್ಮ ಪ್ರಾಬಲ್ಯ ದಿನೇ ದಿನೆ ಕುಸಿಯುವ ಆತಂಕ ಎದುರಾಗಿದೆ.

ಮಂಡ್ಯಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿಗಳು ಬೆಂಗಳೂರು ಮೈಸೂರು ದಶಪಥ ರಸ್ತೆಯನ್ನು ಉದ್ಘಾಟಿಸಲಿದ್ದಾರೆ. ಇದರೊಂದಿಗೆ ಹಲವು ಯೋಜನೆಗಳಿಗೆ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಮಂಡ್ಯ ಜಿಲ್ಲೆಯು ಭಾನುವಾರು ಹೂಗಳು, ಕೇಸರಿ ಭಾವುಟಗಳಿಂದ ಸಿಂಗಾರಗೊಂಡಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications