ಮೈಸೂರು ಬೆಂಗಳೂರು ದಶಪಥದ ನ್ಯೂನ್ಯತೆ ಸರಿಪಡಿಸುವಂತೆ ಸುಮಲತಾ ಮನವಿ
ಬೆಂಗಳೂರು, ಡಿಸೆಂಬರ್ 25: ಮಂಡ್ಯ ಸಂಸದೆ ಸುಮಲತಾ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮೈಸೂರು ಬೆಂಗಳೂರು ದಶಪಥ ಎಕ್ಸ್ಪ್ರೆಸ್ವೇಯಿಂದ ಉಂಟಾಗಿರುವ ಸಮಸ್ಯೆಗಳಿಗೆ ಪರಿಹಾರ ಕೋರಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಪರ್ಕಿಸಿದ್ದಾರೆ.
ಅವರು ಇತ್ತೀಚೆಗೆ ಗಡ್ಕರಿ ಅವರನ್ನು ಭೇಟಿಯಾಗಿದ್ದು, ಹೆದ್ದಾರಿಯ ಅವೈಜ್ಞಾನಿಕ ವಿನ್ಯಾಸವು ಸಾರ್ವಜನಿಕರಿಗೆ ಹೇಗೆ ಅನಾನುಕೂಲವಾಗಿದೆ, ಇತ್ತೀಚಿನ ಮಳೆಯಿಂದಾಗಿ ಜನರು ಅನುಭವಿಸುತ್ತಿರುವ ತೊಂದರೆಗಳು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ವಿಧಾನ, ತಾಂತ್ರಿಕ ದೋಷಗಳು ಮತ್ತು ಅವೈಜ್ಞಾನಿಕ ಚರಂಡಿಗಳು ಮತ್ತು ಸೇವಾ ರಸ್ತೆಗಳು ಹೇಗೆ ಎಂದು ವಿವರಿಸಿದರು. ಅಲ್ಲದೆ ಮಂಡ್ಯ ಜಿಲ್ಲೆಯ ರೈತರು ಕೆಳಸೇತುವೆ, ಪ್ರವೇಶ ಮತ್ತು ನಿರ್ಗಮನ ಕೇಂದ್ರಗಳ ಕೊರತೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಒತ್ತಿ ಹೇಳಿದರು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿ ಅವೈಜ್ಞಾನಿಕವಾಗಿದೆ, ಸಂಸದೆ ಸುಮಲತಾ ಆರೋಪ
ಕೃಷಿಗೆ ಮುಕ್ತ ನೀರು ಹರಿಸಲು ಚರಂಡಿ ನಿರ್ಮಿಸುವ ಬದಲು ಕಾಂಕ್ರೀಟ್ ಪೈಪ್ ಹಾಕಲಾಗಿದೆ. ಸೇತುವೆಗಳು ಬಿರುಕು ಬಿಟ್ಟಿವೆ ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಿದರು. ನಾಗಮಂಗಲ, ಕೆ.ಆರ್.ಪೇಟೆ, ಕೆ.ಆರ್.ನಗರದಲ್ಲಿ ಹಾದು ಹೋಗುವ 75 ಕಿ.ಮೀ ರಾಜ್ಯ ಹೆದ್ದಾರಿ 85ನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸುವಂತೆ ಸಂಸದರು ಮನವಿ ಮಾಡಿದರು. ಅದಕ್ಕೆ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗಡ್ಕರಿ ಭರವಸೆ ನೀಡಿದರು.
ಇತ್ತೀಚೆಗೆ ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯು ಅವೈಜ್ಞಾನಿಕವಾಗಿದೆ. ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಲೋಕಸಭೆಯಲ್ಲಿ ಆರೋಪಿಸಿದ್ದರು. ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುಮಲತಾ, ಮೈಸೂರು ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕಡಿತ ಮಾಡುವ ಉದ್ದೇಶದಿಂದ ದಶಪಥ ಹೆದ್ದಾರಿ ಕಾಮಗಾರಿಯನ್ನು ನಡೆಸಲಾಗುತ್ತಿದೆ. ಮಂಡ್ಯ ಕ್ಷೇತ್ರದ ಮೂಲಕವೂ ಈ ಹೆದ್ದಾರಿ ಹಾದು ಹೋಗುತ್ತದೆ.
ಆದರೆ, ಇತ್ತೀಚೆಗಷ್ಟೇ ಭಾರಿ ಮಳೆ ಸುರಿದ ಕಾರಣ ಸಾಕಷ್ಟು ಅನಾಹುತಗಳು ಸಂಭವಿಸಿದೆ ಎಂದರು. ರಸ್ತೆಗೆ ಹಾಕಲಾಗಿದ್ದ ಡಾಂಬರು ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಗುಣಮಟ್ಟದ ರಸ್ತೆಯನ್ನು ನಿರ್ಮಿಸಿಲ್ಲ ಎಂದು ದೂರಿದ್ದರು. ಅವೈಜ್ಞಾನಿಕ ವಿಧಾನದಲ್ಲಿ ಕಾಮಗಾರಿಯನ್ನಯ ಕೈಗೊಂಡಿದ್ದಾರೆ. ರಸ್ತೆ ಅಕ್ಕಪಕ್ಕದಲ್ಲಿರುವ ಚರಂಡಿಗಳ ಕಾಮಗಾರಿಯನ್ನೂ ಕೂಡ ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರಿಂದ ರೈತರ ಸಾವಿರಾರು ಹೆಕ್ಟೇರ್ ಬೆಳೆಗಳು ನಾಶವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಈ ಬಗ್ಗೆ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕೇಂದ್ರದ ಸಚಿವರು ಈ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸುಮಲತಾ ಆಗ್ರಹಿಸಿದರು.