MSIL: ಚಿಟ್ಫಂಡ್ ವಹೀವಾಟು ರೂ.5000 ಕೋಟಿಗೆ ಹೆಚ್ಚಿಸುವ ಗುರಿ: ಪಾರದರ್ಶಕತೆಗೆ ಹೊಸ ಆಪ್ ಬಿಡುಗಡೆ
ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ 'ಮೈಸೂರು ಸೇಲ್ಸ್ ಇಂಟರನ್ಯಾಷನಲ್ ಲಿಮಿಟೆಡ್' (MSIL) ಸಂಸ್ಥೆಯು ಸುಗಮ ಮತ್ತು ಪಾರದರ್ಶಕ ಚಿಟ್ ಫಂಡ್ ವ್ಯವಹಾರದ ಅನುಕೂಲಕ್ಕೆ ಅಭಿವೃದ್ಧಿ ಪಡಿಸಿರುವ ಸಾಫ್ಟವೇರ್ ಮತ್ತು ಮೊಬೈಲ್ ಆ್ಯಪ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬಿಡುಗಡೆ ಮಾಡಿದರು.
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಎಂಎಸ್ಐಎಲ್ ಸರ್ಕಾರಿ ಸಂಸ್ಥೆಯಾಗಿರುವುದರಿಂದ ಮೋಸದ ಪ್ರಶ್ನೆ ಬರುವುದಿಲ್ಲ. ಸಂಸ್ಥೆಯ ವಹಿವಾಟು ಈಗ ವರ್ಷಕ್ಕೆ 500 ಕೋಟಿ ರೂ.ಗಿಂತಲೂ ಕಡಿಮೆ ಇದೆ. ಇದನ್ನು ಐದು ವರ್ಷಗಳಲ್ಲಿ 5 ಸಾವಿರ ಕೋಟಿ ರೂ.ಗಳಿಗೆ ಏರಿಸುವ ಗುರಿ ಇದೆ. ಸಾರ್ವಜನಿಕರು ಖಾಸಗಿ ಚಿಟ್ ಗಳನ್ನು ನಂಬಿ ಮೋಸ ಹೋಗುವುದಕ್ಕಿಂತ ಇಲ್ಲಿ ಹಣ ಹಾಕುವುದು ಒಳ್ಳೆಯದು' ಎಂದು ತಿಳಿಸಿದರು.

ಪಕ್ಕದ ಕೇರಳದಲ್ಲಿ ಅಲ್ಲಿನ ಸರ್ಕಾರಿ ಹಣಕಾಸು ಸಂಸ್ಥೆಯು ವರ್ಷಕ್ಕೆ ಚಿಟ್ ಸಹಿತ 1 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಆರ್ಥಿಕ ವ್ಯವಹಾರ ನಡೆಸುತ್ತಿದೆ. 45 ಲಕ್ಷ ಗ್ರಾಹಕರನ್ನು ಹೊಂದಿದೆ. ಅಲ್ಲಿನ ಚಿಟ್ ವ್ಯವಸ್ಥೆಯೊಂದರಲ್ಲೇ ವಾರ್ಷಿಕವಾಗಿ 47 ಸಾವಿರ ಕೋಟಿ ರೂ. ವಹಿವಾಟು ನಡೆಸುತ್ತಿದೆ. ಇದಕ್ಕಾಗಿ ಕೇರಳದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡಿದ್ದವರನ್ನೇ ಎಂಎಸ್ಐಎಲ್ ಸಮಾಲೋಚಕರನ್ನಾಗಿ ನೇಮಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಆಪ್ನಲ್ಲಿ ಪಾರದರ್ಶಕ ವ್ಯವಹಾರ
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಾತನಾಡಿ, ಸುಗಮ ಮತ್ತು ಪಾರದರ್ಶಕ ವ್ಯವಹಾರಕ್ಕೆಂದೇ ಎಂಎಸ್ಐಎಲ್ ಚಿಟ್ಸ್ ಸಾಫ್ಟವೇರ್ ಮತ್ತು ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ. ಸಂಸ್ಥೆಯು ಈಗ 27 ಶಾಖೆಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಿಗೂ ಇದನ್ನು ವಿಸ್ತರಿಸಲಾಗುವುದು. ಮುಖ್ಯವಾಗಿ ಗ್ರಾಮೀಣ ಭಾಗ ಮತ್ತು ಮಹಿಳೆಯರ ಉಳಿತಾಯದ ಮೇಲೆ ನಮ್ಮ ಗಮನವಿದೆ. ನಮ್ಮಲ್ಲಿ ಬ್ಯಾಂಕುಗಳಲ್ಲಿ ಕೊಡುವುದಕ್ಕಿಂತ ಹೆಚ್ಚಿನ ಲಾಭ ಇದರ ಮೂಲಕ ಸಿಗಲಿದೆ ಎಂದರು.
10 ಸಾವಿರಕ್ಕೂ ಹೆಚ್ಚು ಉದ್ಯೋಗ
ಸುಗಮ ಚಿಟ್ ವ್ಯವಹಾರಕ್ಕಾಗಿ ಸಂಸ್ಥೆಯು ಏಜೆಂಟರನ್ನು ನೇಮಿಸಲಿದ್ದು, ಇದರಿಂದ 10 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಗಲಿದೆ. ಸ್ವಸಹಾಯ ಸಂಘಗಳ ಮಹಿಳೆಯರಿಗೆ ಇಲ್ಲಿ ವಿಶೇಷ ಉಳಿತಾಯ ಸ್ಕೀಮುಗಳನ್ನು ತರಲಾಗುವುದು. ಇದರಲ್ಲಿ ಈ ಸಂಘಗಳ ಸಖಿಯರೇ ಏಜೆಂಟರಾಗಿ ನೇಮಕಗೊಳ್ಳಲಿದ್ದಾರೆ. ಇವರಲ್ಲದೆ, ಹೋಟೆಲ್, ಕಿರಾಣಿ ಅಂಗಡಿಗಳನ್ನೂ ಏಜೆಂಟ್ ರೀತಿ ಕಾರ್ಯ ನಿರ್ವಹಿಸಲು ವ್ಯವಸ್ಥೆ ರೂಪಿಸಲಾಗುವುದು. ಸರ್ಕಾರಿ ನೌಕರರ ಹೂಡಿಕೆಗೆ ಆದ್ಯತೆ ನೀಡಲಾಗುವುದು. ಒಟ್ಟಿನಲ್ಲಿ ಮನೆ ಮನೆಗೂ ಎಂಎಸ್ಐಎಲ್ ಚಿಟ್ ತಲುಪಲಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಡೆಯಲಿದೆ ಎಂದು ಅವರು ತಿಳಿಸಿದರು.
ಡಿಜಿಟಲ್ ಪಾವತಿಗೆ ಅವಕಾಶ
ಚಿಟ್ ನಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಕಂತನ್ನು ಆ್ಯಪ್ ಮೂಲಕ ಯುಪಿಐ ಪಾವತಿ, ವೆಬ್ಸೈಟ್ ಮೂಲಕ ಪಾವತಿ, ಆನ್ಲೈನ್ ಮೂಲಕವೇ ಪಾವತಿಸಬಹುದು. ಅಷ್ಟೇ ಅಲ್ಲದೆ ಅನ್ ಲೈನ್ ಮೂಲಕ ಬಿಡ್ನಲ್ಲಿಯೂ ಭಾಗವಹಿಸುವ ಪ್ರಯೋಜನಗಳಿವೆ ಎಂದು ಅವರು ಹೇಳಿದರು.
ಎಂಎಸ್ಐಎಲ್ ಚಿಟ್ಸ್ ಫಂಡ್ ಇತಿಹಾಸದಲ್ಲಿ ನೂತನ ಹೆಜ್ಜೆ
— M B Patil (@MBPatil) February 7, 2026
ಹೊಸ ಸಾಫ್ಟ್ವೇರ್ ಹಾಗೂ ಮೊಬೈಲ್ ಆಪ್ ಲೋಕಾರ್ಪಣೆ!
ಹೂಡಿಕೆದಾರರಿಗೆ ಸುರಕ್ಷತೆ, ಉತ್ತಮ ಸೇವೆ, ಹೆಚ್ಚಿನ ಲಾಭ ತಂದುಕೊಡುವ ಜತೆಗೆ ಮುಂದಿನ 5 ವರ್ಷಗಳಲ್ಲಿ ವಹಿವಾಟನ್ನು ರೂ. 5,000 ಕೋಟಿಗೆ ಏರಿಸುವ ಗುರಿಯನ್ನು MSIL ಚಿಟ್ಸ್ ಹೊಂದಿದೆ. ಈ ನಿಟ್ಟಿನಲ್ಲಿ ಕಳೆದ 2 ವರ್ಷಗಳಿಂದಲೂ… pic.twitter.com/zD0rMqaiB7
20 ಲಕ್ಷ ಕುಟುಂಬಗಳಿಗೆ ಅನುಕೂಲ
ಸರ್ಕಾರಿ ನೌಕರರಿಗೆ ಎಲ್ಲ ವಸ್ತುಗಳೂ ಸಬ್ಸಿಡಿ ದರದಲ್ಲಿ ಸಿಗುವಂತೆ ಮಾಡುವ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ಎಂಎಸ್ಐಎಲ್ ಸ್ಟೋರ್ ತೆರೆಯುವ ಚಿಂತನೆ ಇದೆ. ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡಲಾಗುತ್ತಿದೆ. ಇದು ಕೈಗೂಡಿದರೆ 20 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.
ಎಂಎಸ್ಐಎಲ್ ಅಧ್ಯಕ್ಷ ಪುಟ್ಟರಂಗ ಶೆಟ್ಟಿ ಮಾತನಾಡಿ, ಸಂಸ್ಥೆಯು 2024-25ರಲ್ಲಿ 3,882 ಕೋಟಿ ರೂ. ವಹಿವಾಟು ನಡೆಸಿ, 122 ಕೋಟಿ ರೂ.ಗಿಂತಲೂ ಹೆಚ್ಚು ಲಾಭ ದಾಖಲಿಸಿದೆ. ಸಂಸ್ಥೆಯ ಬಲವರ್ಧನೆಗೆ ವಿಷನ್-2030 ಎನ್ನುವ ನೀಲನಕ್ಷೆ ಸಿದ್ಧಪಡಿಸಿದ್ದೇವೆ. ಸಿಎಸ್ಆರ್ ಉಪಕ್ರಮದಡಿ ಸಮಾಜಕ್ಕೆ ಉಪಯುಕ್ತವಾಗುವಂತಹ ಕೆಲಸಗಳಿಗೆ ಹಣ ಕೊಡಲಾಗುತ್ತಿದೆ ಎಂದು ತಿಳಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications