MSIL Chit Fund: ಆರ್ಥಿಕ ಉಳಿತಾಯಕ್ಕಾಗಿ ರಾಜ್ಯ ಸರ್ಕಾರದಿಂದ 'ಮೈಕ್ರೋ ಚಿಟ್ಫಂಡ್' ಶುರು..
ಬೆಂಗಳೂರು, ಏಪ್ರಿಲ್ 02: ಕರ್ನಾಟಕದಲ್ಲಿ ಇತ್ತೀಚೆಗೆ ವಿಶೇಷ ಟೂರ್ ಪ್ಯಾಕೇಜ್ ಘೋಷಿಸಿದ್ದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ಇದೀಗ ತಕ್ಷಣಕ್ಕೆ ಜನರಿಗೆ ಆರ್ಥಿಕ ನೆರವಿಗೆ ಬರುವಂತೆ ಸುರಕ್ಷಿತ ಹೂಡಿಕೆಗೆ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಮೀಣ ಆರ್ಥಿಕತೆಗೆ ಹೊಸ ಭಾಷ್ಯ ಬರೆಯಲು ಮುಂದಾಗಿದ್ದು, ಈ ಉಪಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ನಮ್ಮ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ಸಂಸ್ಥೆಯು 'ಮೈಕ್ರೊ ಚಿಟ್ಸ್' ಆರಂಭಿಸುತ್ತಿದೆ. ಇದರಿಂದ ಗ್ರಾಮೀಣ ಜನತೆ, ಅದರಲ್ಲೂ ವಿಶೇಷವಾಗಿ ಸ್ವಸಹಾಯ ಗುಂಪಿನ ಮಹಿಳೆಯರು, ಗೃಹಲಕ್ಷ್ಮಿ ಫಲಾನುಭವಿಗಳು, ಹಾಲು ಉತ್ಪಾದಕರು, ಹಣಕಾಸು ಉಳಿತಾಯಕ್ಕೆ ಮೈಕ್ರೊ ಚಿಟ್ಸ್ ಆಸರೆಯಾಗಲಿದೆ. ಸರ್ಕಾರಿ ನೌಕರರು, ಸಣ್ಣ ಉದ್ದಿಮೆದಾರರ ಉಳಿತಾಯವನ್ನು ಗಮನದಲ್ಲಿರಿಸಿಕೊಂಡು ಶೀಘ್ರದಲ್ಲೇ 'ಮೈಕ್ರೊ ಚಿಟ್ಸ್' ಆರಂಭಿಸಲಿದೆ. ಈ ವಿನೂತನ ಯೋಜನೆಗೆ ಏಪ್ರಿಲ್ 2ನೇ ವಾರ ಅಧಿಕೃತ ಚಾಲನೆ ನೀಡಲಿದ್ದಾರೆ.

ಈ 'ಮೈಕ್ರೋ ಚಿಟ್ಸ್' ಆರಂಭಿಸುವ ಉದ್ದೇಶದಿಂದ MSIL ಸಂಸ್ಥೆಯು ಸಕಲ ಪೂರ್ವ ತಯಾರಿ ನಡೆಸಿದೆ. ಸರಳ ಮತ್ತು ಸುರಕ್ಷಿತ ವ್ಯವಹಾರ, ಹಣಕಾಸು ನಿರ್ವಹಣೆಗಾಗಿ ಎಲ್ಲಾ ತಾಂತ್ರಿಕತೆ. ಆಪ್ ಆಧಾರಿತ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ. ಈ ನೂತನ ಹಣಕಾಸು ಸೇವೆಯಿಂದ ಗ್ರಾಮೀಣ ಭಾಗದ ಆರ್ಥಿಕತೆಗೆ ಹೊಸ ವೇಗ ದೊರಕಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಗ್ರಾಮೀಣ ಆರ್ಥಿಕ ಅಭಿವೃದ್ಧಿಗೆ ಇದು ಕಾಂಗ್ರೆಸ್ ಸರ್ಕಾರದ ಹೊಸ ಗ್ಯಾರಂಟಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರಿಂದ ಜನರಿಗೆ ಸಣ್ಣ ಪ್ರಯಾಣದ ಉಳಿತಾಯದ ಜೊತೆಗೆ ತಕ್ಷಣಕ್ಕೆ MSILChits ಆರ್ಥಿಕ ನೆರವಿಗೆ ಬರಲಿದೆ.

ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ಸಂಸ್ಥೆ ಭಾರತದಲ್ಲಿ ಪ್ರಮುಖ ಚಿಟ್ ಫಂಡ್ ಮಾಡುವ ಮೂಲಕ ಚಿಟ್ ಫಂಡ್ ವಲಯವನ್ನು ಉನ್ನತ ಸ್ಥಾನಕ್ಕೆ ಒಯ್ಯಲು, ಈ ವಲಯ ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕವು ಮಹತ್ತರ ಹೆಜ್ಜೆ ಇಡುತ್ತಿದೆ.
ಮುಂದಿನ ಕೆಲವೇ ವರ್ಷಗಳಲ್ಲಿ ರೂಪಾಯಿ 300 ಕೋಟಿಯಿಂದ 10,000 ಕೋಟಿ ವಹಿವಾಟು ತಲುಪುವ ಗುರಿ ಹೊಂದಿರುವ ಈ MSIL ಚಿಟ್ಸ್ನಲ್ಲಿ ವಿಶ್ವಾಸಾರ್ಹ ಬ್ರ್ಯಾಂಡ್ಗಳಿವೆ, ಸುಭದ್ರ, ಸುರಕ್ಷಿತ ಮತ್ತು ಪ್ರಗತಿ ವರ್ಧಕವಾಗಿದ್ದ, ಯಾವುದೇ ಅನುಮಾನ ಬೇಡ. ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಪ್ಲಾಟ್ ಫಾರ್ಮ್ ನಲ್ಲಿ ಇರಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಏಪ್ರಿಲ್ ಎರಡನೇ ವಾರ ರಾಜ್ಯ ಸರ್ಕಾರದಿಂದಲೇ ಈ ಚಿಟ್ಸ್ ಫಂಡ್ ಉಪಕ್ರಮ ಆರಂಭವಾಗುತ್ತದೆ. ಸರ್ಕಾರದ್ದೇ ಆಗಿರುವ ಕಾರಣ ಇದನ್ನು ಸುರಕ್ಷಿತ ಎನ್ನಬಹುದಾಗಿದೆ. ಬೇರೆ ಬೇರೆ ಖಾಸಗಿ ವ್ಯಕ್ತಿಗಳು, ಸಂಸ್ಥೆಗಳ ಕೈಗೆ ಹಂತ ಹಂತವಾಗಿ ಹಣ ಕಟ್ಟಿ ಮೋಸ ಹೋದವರು ಈ ಎಂಎಸ್ಐಎಲ್ ಚಿಟ್ಸ್ ನತ್ತ ಮುಖ ಮಾಡುವ ಸಾಧ್ಯತೆ ಇದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications