ಸುವರ್ಣ ಸಂಭ್ರಮಕ್ಕೆ ಎಂಎಸ್ಐಎಲ್ನಿಂದ ನಾಲ್ಕು ಹೊಸ ಉತ್ಪನ್ನ ಬಿಡುಗಡೆ
ಕುಡಿಯುವ ನೀರು, ಸೌಂದರ್ಯವರ್ಧಕ ಸೋಪು, ಮರಳು, ಹಾಗೂ ಸುಗಂಧ ದ್ರವ್ಯಗಳನ್ನು ಗುರುವಾರ ಲಲಿತ್ ಮಹಲ್ ಹೊಟೇಲ್ ನಲ್ಲಿ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಆರ್.ವಿ ದೇಶಪಾಂಡೆ ಬಿಡುಗಡೆಗೊಳಿಸಿದರು.
ಬೆಂಗಳೂರು: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ತನ್ನ ಸುವರ್ಣ ಮಹೋತ್ಸದ ಹಿನ್ನಲೆಯಲ್ಲಿ ನಾಲ್ಕು ಹೊಸ ಉತ್ಪನ್ನಗಳನ್ನು ಪರಿಚಯಿಸಿದೆ.
ಕುಡಿಯುವ ನೀರು, ಸೌಂದರ್ಯವರ್ಧಕ ಸೋಪು, ಮರಳು, ಹಾಗೂ ಸುಗಂಧ ದ್ರವ್ಯಗಳನ್ನು ಗುರುವಾರ ಲಲಿತ್ ಮಹಲ್ ಹೊಟೇಲ್ ನಲ್ಲಿ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಆರ್.ವಿ ದೇಶಪಾಂಡೆ ಬಿಡುಗಡೆಗೊಳಿಸಿದರು. ಇದರ ಜತೆಗೆ ಸದ್ಯದಲ್ಲೇ ಜನೌಷಧಿ ಮಳಿಗೆಗಳನ್ನೂ ಇದು ತೆರಯಲಿದೆ.

ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, "ಎಂಎಸ್ಐಲ್ ರಾಜ್ಯದಾದ್ಯಂತ 174 ಜನೌಷಧಿಯ ಕೇಂದ್ರ ತೆರೆಯುತ್ತಿದೆ. ಔಷಧದ ಹೆಸರಿನಲ್ಲಿ ಇವತ್ತು ಸುಲಿಗೆ ನಡೆಯುತ್ತಿದೆ. ಇದನ್ನು ತಪ್ಪಿಸಿ, ಕೈಗೆಟುಕುವ ದರದಲ್ಲಿ ಜನರಿಗೆ ಗುಣಮಟ್ಟದ ಔಷಧ ನೀಡಬೇಕು. ಇದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಸರಕಾರ ನೀಡಲಿದೆ," ಎಂದರು.
"ಸರ್ಕಾರದ ಸಂಸ್ಥೆಯಾಗಿರುವ ಎಮ್ಎಸ್ಐಎಲ್ ಪ್ರಾರಂಭದಿಂದ ಇಲ್ಲಿ ತನಕ ಕಳೆದ 50 ವರ್ಷಗಳಿಂದ ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆಯಾಗಿದೆ, ಸರ್ಕಾರಿ ಸಂಸ್ಥೆಯಾಗಿದ್ದು ನಷ್ಟ ಕಾಣದಿರುವ ಈ ಸಂಸ್ಥೆಯ ಬೆಳವಣಿಗೆಗೆ ಕಾರಣವಾಗಿರುವುದು ಉತ್ತಮ ಗುಣಮಟ್ಟದ ಸೇವೆ ಹಾಗೂ ಜನರಲ್ಲಿ ಉಳಿಸಿಕೊಂಡಿರುವ ನಂಬಿಕೆ. ಅದಕ್ಕಾಗಿ ಈ ಸಂಸ್ಥೆಗೆ ದುಡಿದಿರುವ ಮತ್ತು ದುಡಿಯುತ್ತಿರುವ ಎಲ್ಲರಿಗೂ ಶುಭಾಶಯಗಳು," ಎಂದು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಕಾಲದಲ್ಲಿ ಸಹ ಖಾಸಗಿ ಕಂಪನಿಗಳಿಗೆ ಸಡ್ಡು ಹೊಡೆದು ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿರುವುದು ಹೆಮ್ಮೆ ಅನಿಸುತ್ತಿದೆ. ಸಂಸ್ಥೆ ಕೈಗೊಳ್ಳುವ ಎಲ್ಲಾ ಕಾರ್ಯಗಳಿಗೂ ಸರ್ಕಾರದ ಬೆಂಬಲವಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಮರಳು ಮಾರಾಟಕ್ಕೂ ಇಳಿದ ಎಂಎಸ್ಐಎಲ್!
"ರಾಜ್ಯ ಸರ್ಕಾರ ಮರಳು ಮಾಫಿಯಾ ಸಮಸ್ಯೆಗೆ ಪಾರಿಹಾರ ಕಂಡು ಹುಡುಕಿ ಸೋತಿದೆ. ಇದಕ್ಕಾಗಿ ವಿದೇಶಗಳಿಂದ ಮರಳು ಆಮದು ಮಾಡಿಕೊಂಡು, ರಾಜ್ಯದ ಜನರಿಗೆ ಕಡಿಮೆ ಬೆಲೆಯಲ್ಲಿ ಮರಳು ನೀಡುವ ಜವಾಬ್ದಾರಿಯನ್ನು ಎಂಎಸ್ಐಎಲ್ ಗೆ ನೀಡಲಾಗಿದೆ. ಹಿಂದೆ ಇದೇ ರೀತಿ ಸಂಸ್ಥೆಯು ಚಿಟ್ಫಂಡ್ ಆರಂಭಿಸಿ, ಅನಧಿಕೃತ ನಡೆಯುತ್ತಿದ್ದ ಚಿಟ್ಫಂಡ್ ಸಂಸ್ಥೆಗಳು ಬಾಗಿಲು ಮುಚ್ಚುವಂತಾಗಿತ್ತು. ಇದೀಗ ಮರಳು ಮಾಫಿಯಾ ಕೂಡ ಅದೇ ರೀತಿ ಆಗಲಿ," ಎಂದು ದೇಶಪಾಂಡೆ ಹೇಳಿದರು.
ಮರಳಿಗೆ ಜಾಗತಿಕ ಟೆಂಡರ್
"ಮರಳು ಆಮದ ಮಾಡಿಕೊಳ್ಳಲು ಜಾಗತಿಕ ಟೆಂಡರ್ ಕರೆಯಲಾಗಿದೆ. ಈಗಾಗಲೇ ಮಯನ್ಮಾರ್, ಕಾಂಬೋಡಿಯಾ, ಫಿಲಿಫೈನ್ಸ್, ಮಲೇಷಿಯಾದಿಂದ ಮರಳನ್ನು ಆಮದು ಮಾಡಿಕೊಳ್ಳಲು ನಮ್ಮ ಸಂಸ್ಥೆ ನಿರ್ಧರಿಸಿದೆ ಎಂದು," ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ಸಿ. ಪ್ರಕಾಶ್ ಹೇಳಿದ್ದಾರೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications