MSIL ಅದ್ವಿತೀಯ ಸಾಧನೆ: ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ಗೆ ಜಾಗತಿಕ ಪ್ರಶಸ್ತಿ
ಬೆಂಗಳೂರು, ಆ. 28: ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿ. ಒಂದು ವರ್ಷದಲ್ಲಿ 91 ಕೋಟಿ ರೂ. ಲಾಭ ಗಳಿಸಿ ಕಾರ್ಯಕ್ಷಮತೆ ತೋರಲು ಕಾರಣವಾದ ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ವಿಕಾಶ್ ಅವರಿಗೆ ಏಷ್ಯಾದ ಪ್ರತಿಷ್ಠಿತ ಏಷಿಯಾ ಒನ್ ಗ್ಲೋಬಲ್ ಇಂಡಿಯನ್ ಆಫ್ ದಿ ಇಯರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಇತ್ತೀಚೆಗೆ ಓಪನ್ ಮ್ಯಾಗಜಿನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಯಿತು. ವಿವಿಧ ದೇಶದ ರಾಯಬಾರ ಪ್ರತಿನಿಧಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಮಾಲೀಕರು ಮತ್ತು ಹೂಡಿಕೆದಾರರು ಪಾಲ್ಗೊಂಡಿದ್ದರು.
ಐಪಿಎಸ್ ಅಧಿಕಾರಿ ವಿಕಾಶ್ ಕುಮಾರ್ ವಿಕಾಶ್ ಅವರನ್ನು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ಗೆ ವ್ಯವಸ್ಥಾಪಕ ನಿರ್ದೇಕರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿತ್ತು.

ಆರು ದಶಕದ ಇತಿಹಾಸ ಹೊಂದಿದ್ದ ಎಂಎಸ್ಐಎಲ್, ಚಿಟ್ ಫಂಡ್, ಮದ್ಯ ಮಾರಾಟ, ವಿದ್ಯಾ ಮತ್ತು ಲೇಖಕ್ ನೋಟ ಪುಸ್ತಕ ಲೇಖನ ಸಾಮಗ್ರಿ, ಸೋಲಾರ್ ವಾಟರ್ ಹೀಟರ್, ಪ್ರವಾಸ ಮತ್ತು ಪ್ರಯಾಣ, ಜನರಿಕ್ ಔಷಧಿ, ಇನ್ನಿತರೆ ಉತ್ಪನ್ನಗಳ ಮಾರಾಟ ಸೇವೆಯಲ್ಲಿ ಎಂಎಸ್ಐಎಲ್ ತೊಡಗಿಸಿಕೊಂಡಿದೆ.
ಅನಧಿಕೃತ ಚಿಟ್ ವ್ಯವಹಾರ ನಿಯಂತ್ರಿಸುವ ನಿಟ್ಟಿನಲ್ಲಿ ಎಂಎಸ್ಐಎಲ್ 26 ಚಿಟ್ ಶಾಖೆಗಳನ್ನು ಹೊಂದಿದ್ದು, ಎರಡು ಲಕ್ಷಕ್ಕೂ ಅಧಿಕ ಚಂದಾದಾರರು ಇದರ ಅನುಕೂಲ ಪಡೆದಿದ್ದಾರೆ. ಎಂಎಸ್ಐಎಲ್ ರಾಜ್ಯದಲ್ಲಿ 980 ಮದ್ಯ ಮಳಿಗೆಗಳನ್ನು ಒಗೊಂಡಿದ್ದು, ಗ್ರಾಹಕರಿಗೆ ಗುಣಮಟ್ಟದ ಮದ್ಯ ಪೂರೈಕೆ ಮಾಡುತ್ತಿದೆ.
ಎಂಎಸ್ಐಎಲ್ ವ್ಯವಸ್ಥಾಪಕರಾಗಿ ವಿಕಾಶ್ ಕುಮಾರ್ ವಿಕಾಶ್ ಅಧಿಕಾರ ವಹಿಸಿಕೊಂಡ ಬಳಿಕ ಸಂಸ್ಥೆ ಹೆಚ್ಚು ಲಾಭ ಗಳಿಸುತ್ತಿದೆ. 2021-22 ನೇ ಸಾಲಿನಲ್ಲಿ 2901 ಕೋಟಿ ರೂ. ವಹಿವಾಟು ನಡೆಸಿ, 91 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಶೇ. 33 ರಷ್ಟು ಹೆಚ್ಚುಲಾಭ ಗಳಿಸಿದೆ. 2022-23 ನೇ ಸಾಲಿನಲ್ಲಿ 3350 ಕೋಟಿ ರೂ. ವಹಿವಾಟು ತಲುಪುವ ನಿರಿಕ್ಷೆ ಹೊಂದಿದ್ದು, 110 ಕೋಟಿ ರೂ ಲಾಭ ಗಳಿಸುವ ನಿರೀಕ್ಷೆ ಹೊಂದಿದೆ.

ಹೀಗೆ ಕಳೆದ ಒಂದು ವರ್ಷದಲ್ಲಿ ಅತ್ಯುತ್ತಮ ವಹಿವಾಟು ನಡೆಸಿದ ಹಿನ್ನೆಲೆಯಲ್ಲಿ ಎಂಎಸ್ಐಎಲ್ ದಾಖಲಿಸಿದ ಪ್ರಗತಿ ಗಮನಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications